Homeಅಂತರಾಷ್ಟ್ರೀಯಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

- Advertisement -
- Advertisement -

ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿಯಲ್ಲಿ ಬುಧವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ನಂತರ ಅದನ್ನು ಹಿಂಪಡೆಯಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ.

ಸ್ಥಳೀಯ ಸಮಯ ಮಧ್ಯಾಹ್ನ ಸುಮಾರು 12:37 ಕ್ಕೆ ಭೂಮಿ ಕಂಪಿಸಿದ್ದು, ಇದರ ಕೇಂದ್ರ ಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನಿಂದ ಸುಮಾರು 54 ಮೈಲುಗಳು (87 ಕಿಲೋಮೀಟರ್) ದಕ್ಷಿಣದಲ್ಲಿ, 12.5 ಮೈಲುಗಳಷ್ಟು ಭೂಮಿಯ ಆಳದಲ್ಲಿ ಪತ್ತೆಯಾಗಿದೆ ಯುಎಸ್‌ಜಿಎಸ್ ಹೇಳಿದೆ.

ಭೂಕಂಪದ ನಂತರ ಅಧಿಕಾರಿಗಳು ಆರಂಭದಲ್ಲಿ ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದ್ದರು. ಆದರೆ ನಂತರ ಅದನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರು ಎಂದು ವರದಿಯಾಗಿದೆ.

“ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ” ಎಂದು ಭೂಕಂಪದ ಸುಮಾರು ಎರಡು ಗಂಟೆಗಳ ನಂತರ ಬಿಡುಗಡೆ ಮಾಡಿದ ಸಂದೇಶದಲ್ಲಿ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (ಎನ್‌ಟಿಡಬ್ಲ್ಯುಸಿ) ತಿಳಿಸಿದೆ.

ಆರಂಭದ 7.3 ತೀವ್ರತೆಯ ಭೂಕಂಪದ ನಂತರ, 10ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದೆ. ಅವುಗಳಲ್ಲಿ 5.2 ತೀವ್ರತೆ ಅತೀ ಹೆಚ್ಚು ಎಂದು ಯುಎಸ್‌ಜಿಎಸ್‌ ಮಾಹಿತಿ ನೀಡಿದೆ.

ಸುನಾಮಿ ಎಚ್ಚರಿಕೆ ಅಥವಾ ಸಲಹೆಯನ್ನು ಅಲಾಸ್ಕನ್ ಕರಾವಳಿಯ ಪ್ರದೇಶಗಳಿಗೆ ಮಾತ್ರ ನೀಡಲಾಗಿತ್ತು. ಭೂಕಂಪನ ದೂರದ ಪ್ರದೇಶಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಎನ್‌ಟಿಡಬ್ಲ್ಯುಸಿ ತಿಳಿಸಿದೆ.

ಸ್ಯಾಂಡ್ ಪಾಯಿಂಟ್‌ನಲ್ಲಿ ಗರಿಷ್ಠ 0.2 ಅಡಿ (6.1 ಸೆಂಟಿಮೀಟರ್) ಎತ್ತರದ ಸುನಾಮಿ ಅಲೆಗಳು ಕಂಡುಬಂದಿವೆ. ಸುನಾಮಿಯ ಅಪಾಯಕ್ಕೆ ಸದ್ಯಕ್ಕೆ ಇಲ್ಲದಿದ್ದರೂ, ಭೂಕಂಪ ಸಂಭವಿಸಿದ ಪ್ರದೇಶದ ನಿವಾಸಿಗಳು ಅಪಾಯದ ಬಗ್ಗೆ ಎಚ್ಚರದಿಂದಿರಬೇಕು ಎಂದು ಎನ್‌ಟಿಡಬ್ಲ್ಯುಸಿ ಸಲಹೆ ನೀಡಿದೆ.

“ಸ್ಥಳೀಯ ತುರ್ತು ಅಧಿಕಾರಿಗಳು ಸುರಕ್ಷಿತ ಎಂದು ಸೂಚಿಸುವವರೆಗೆ ಅಪಾಯದ ವಲಯಗಳಿಗೆ ಹಿಂದಿರುಗಬೇಡಿ” ಎಂದು ಸೂಚಿಸಿದೆ.

ಅಲಾಸ್ಕಾ ಭೂಕಂಪ ವಲಯ ಎಂದು ಗುರುತಿಸಿರುವ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿ ಬರುತ್ತದೆ. ಅಮೆರಿಕದ ಈ ದೂರದ ರಾಜ್ಯವು ಮಾರ್ಚ್ 1964ರಲ್ಲಿ 9.2 ತೀವ್ರತೆಯ ಭೂಕಂಪಕ್ಕೆ ತುತ್ತಾಗಿತ್ತು. ಇದು ಉತ್ತರ ಅಮೆರಿಕಾದಲ್ಲಿ ದಾಖಲಾದ ಅತ್ಯಂತ ಪ್ರಬಲ ಭೂಕಂಪವಾಗಿತ್ತು.

ಈ ಭೂಕಂಪದಿಂದ ಸುನಾಮಿ ಉಂಟಾಗಿತ್ತು. ಪರಿಣಾಮ ಆಂಕಾರೇಜ್ ನಗರದ ಮೇಲೆ ಸಂಪೂರ್ಣ ನಾಮವಶೇಷ ಆಗಿತ್ತು. ಸುನಾಮಿ ಅಲೆಗಳು ಅಲಾಸ್ಕಾ ಕೊಲ್ಲಿ, ಅಮೆರಿಕದ ಪಶ್ಚಿಮ ಕರಾವಳಿ ಮತ್ತು ಹವಾಯಿ ತೀರಕ್ಕೆ ಅಪ್ಪಳಿಸಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 400 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಆಸ್ತಿ ನಷ್ಟ ಆಗಿತ್ತು.

ಜುಲೈ 2023ರಲ್ಲಿ ಅಲಾಸ್ಕಾ ಪರ್ಯಾಯ ದ್ವೀಪದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಕಂಪನದಿಂದ ಯಾವುದೇ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಗಾಜಾ ನರಮೇಧಕ್ಕೆ ಸಹಭಾಗಿತ್ವ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ IPSP ಸಂಘಟನೆಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...