Homeಅಂತರಾಷ್ಟ್ರೀಯಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

- Advertisement -
- Advertisement -

ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿಯಲ್ಲಿ ಬುಧವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ನಂತರ ಅದನ್ನು ಹಿಂಪಡೆಯಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ.

ಸ್ಥಳೀಯ ಸಮಯ ಮಧ್ಯಾಹ್ನ ಸುಮಾರು 12:37 ಕ್ಕೆ ಭೂಮಿ ಕಂಪಿಸಿದ್ದು, ಇದರ ಕೇಂದ್ರ ಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನಿಂದ ಸುಮಾರು 54 ಮೈಲುಗಳು (87 ಕಿಲೋಮೀಟರ್) ದಕ್ಷಿಣದಲ್ಲಿ, 12.5 ಮೈಲುಗಳಷ್ಟು ಭೂಮಿಯ ಆಳದಲ್ಲಿ ಪತ್ತೆಯಾಗಿದೆ ಯುಎಸ್‌ಜಿಎಸ್ ಹೇಳಿದೆ.

ಭೂಕಂಪದ ನಂತರ ಅಧಿಕಾರಿಗಳು ಆರಂಭದಲ್ಲಿ ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದ್ದರು. ಆದರೆ ನಂತರ ಅದನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರು ಎಂದು ವರದಿಯಾಗಿದೆ.

“ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ” ಎಂದು ಭೂಕಂಪದ ಸುಮಾರು ಎರಡು ಗಂಟೆಗಳ ನಂತರ ಬಿಡುಗಡೆ ಮಾಡಿದ ಸಂದೇಶದಲ್ಲಿ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (ಎನ್‌ಟಿಡಬ್ಲ್ಯುಸಿ) ತಿಳಿಸಿದೆ.

ಆರಂಭದ 7.3 ತೀವ್ರತೆಯ ಭೂಕಂಪದ ನಂತರ, 10ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದೆ. ಅವುಗಳಲ್ಲಿ 5.2 ತೀವ್ರತೆ ಅತೀ ಹೆಚ್ಚು ಎಂದು ಯುಎಸ್‌ಜಿಎಸ್‌ ಮಾಹಿತಿ ನೀಡಿದೆ.

ಸುನಾಮಿ ಎಚ್ಚರಿಕೆ ಅಥವಾ ಸಲಹೆಯನ್ನು ಅಲಾಸ್ಕನ್ ಕರಾವಳಿಯ ಪ್ರದೇಶಗಳಿಗೆ ಮಾತ್ರ ನೀಡಲಾಗಿತ್ತು. ಭೂಕಂಪನ ದೂರದ ಪ್ರದೇಶಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಎನ್‌ಟಿಡಬ್ಲ್ಯುಸಿ ತಿಳಿಸಿದೆ.

ಸ್ಯಾಂಡ್ ಪಾಯಿಂಟ್‌ನಲ್ಲಿ ಗರಿಷ್ಠ 0.2 ಅಡಿ (6.1 ಸೆಂಟಿಮೀಟರ್) ಎತ್ತರದ ಸುನಾಮಿ ಅಲೆಗಳು ಕಂಡುಬಂದಿವೆ. ಸುನಾಮಿಯ ಅಪಾಯಕ್ಕೆ ಸದ್ಯಕ್ಕೆ ಇಲ್ಲದಿದ್ದರೂ, ಭೂಕಂಪ ಸಂಭವಿಸಿದ ಪ್ರದೇಶದ ನಿವಾಸಿಗಳು ಅಪಾಯದ ಬಗ್ಗೆ ಎಚ್ಚರದಿಂದಿರಬೇಕು ಎಂದು ಎನ್‌ಟಿಡಬ್ಲ್ಯುಸಿ ಸಲಹೆ ನೀಡಿದೆ.

“ಸ್ಥಳೀಯ ತುರ್ತು ಅಧಿಕಾರಿಗಳು ಸುರಕ್ಷಿತ ಎಂದು ಸೂಚಿಸುವವರೆಗೆ ಅಪಾಯದ ವಲಯಗಳಿಗೆ ಹಿಂದಿರುಗಬೇಡಿ” ಎಂದು ಸೂಚಿಸಿದೆ.

ಅಲಾಸ್ಕಾ ಭೂಕಂಪ ವಲಯ ಎಂದು ಗುರುತಿಸಿರುವ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿ ಬರುತ್ತದೆ. ಅಮೆರಿಕದ ಈ ದೂರದ ರಾಜ್ಯವು ಮಾರ್ಚ್ 1964ರಲ್ಲಿ 9.2 ತೀವ್ರತೆಯ ಭೂಕಂಪಕ್ಕೆ ತುತ್ತಾಗಿತ್ತು. ಇದು ಉತ್ತರ ಅಮೆರಿಕಾದಲ್ಲಿ ದಾಖಲಾದ ಅತ್ಯಂತ ಪ್ರಬಲ ಭೂಕಂಪವಾಗಿತ್ತು.

ಈ ಭೂಕಂಪದಿಂದ ಸುನಾಮಿ ಉಂಟಾಗಿತ್ತು. ಪರಿಣಾಮ ಆಂಕಾರೇಜ್ ನಗರದ ಮೇಲೆ ಸಂಪೂರ್ಣ ನಾಮವಶೇಷ ಆಗಿತ್ತು. ಸುನಾಮಿ ಅಲೆಗಳು ಅಲಾಸ್ಕಾ ಕೊಲ್ಲಿ, ಅಮೆರಿಕದ ಪಶ್ಚಿಮ ಕರಾವಳಿ ಮತ್ತು ಹವಾಯಿ ತೀರಕ್ಕೆ ಅಪ್ಪಳಿಸಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 400 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಆಸ್ತಿ ನಷ್ಟ ಆಗಿತ್ತು.

ಜುಲೈ 2023ರಲ್ಲಿ ಅಲಾಸ್ಕಾ ಪರ್ಯಾಯ ದ್ವೀಪದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಕಂಪನದಿಂದ ಯಾವುದೇ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಗಾಜಾ ನರಮೇಧಕ್ಕೆ ಸಹಭಾಗಿತ್ವ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ IPSP ಸಂಘಟನೆಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...