HomeUncategorizedಅತಿಕ್ರಮಣ ತೆರವು, ಅಭಿವೃದ್ಧಿ ನೆಪದಲ್ಲಿ ಬುಲ್ಡೋಝರ್‌ ಕಾರ್ಯಾಚರಣೆ: 2022-23ರಲ್ಲಿ ಸಂತ್ರಸ್ತರೆಷ್ಟು?

ಅತಿಕ್ರಮಣ ತೆರವು, ಅಭಿವೃದ್ಧಿ ನೆಪದಲ್ಲಿ ಬುಲ್ಡೋಝರ್‌ ಕಾರ್ಯಾಚರಣೆ: 2022-23ರಲ್ಲಿ ಸಂತ್ರಸ್ತರೆಷ್ಟು?

- Advertisement -
- Advertisement -

ಮೋದಿ ಆಡಳಿತದ ಭಾರತದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 2022 ಮತ್ತು 2023ರಲ್ಲಿ ಅತಿ ಹೆಚ್ಚು  ಮನೆಗಳನ್ನು ತೆರವುಗೊಳಿಸಲಾಗಿದ್ದು, ಈ ಒಂದು ವರ್ಷದ ಅವಧಿಯಲ್ಲಿ 7.4 ಲಕ್ಷ ಜನರನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

ವಕೀಲರ ಗುಂಪು ಹೌಸಿಂಗ್ ಮತ್ತು ಲ್ಯಾಂಡ್ ರೈಟ್ಸ್ ನೆಟ್‌ವರ್ಕ್ (ಎಚ್‌ಎಲ್‌ಆರ್‌ಎನ್) ಈ ಕುರಿತು ‘ಭಾರತದಲ್ಲಿ 2022- 2023ರಲ್ಲಿ ಬಲವಂತದ ತೆರವು’ ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ದೇಶಾದ್ಯಂತ 1.53 ಲಕ್ಷ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಕೂಡ ಉಲ್ಲೇಖಿಸಲಾಗಿದೆ. 23 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ದತ್ತಾಂಶ ಸಂಗ್ರಹಣೆಯ ಮೂಲಕ HLRN ಈ ವರದಿಯನ್ನು ಸಿದ್ದಪಡಿಸಿದ್ದು, ತೆರವು ಕಾರ್ಯಾಚರಣೆಗಳಿಂದ ಮನೆಗಳನ್ನು ಕಳೆದುಕೊಂಡ ಅಥವಾ ಮನೆಗಳಿಂದ ಸ್ಥಳಾಂತರಗೊಂಡ ವ್ಯಕ್ತಿಗಳ ನಿಜವಾದ ಸಂಖ್ಯೆಯು ಇನ್ನೂ ಹೆಚ್ಚಿರಬಹುದು ಎಂದು ಅಂದಾಜಿಸಿದೆ.

ಎಲ್ಲಾ ತೆರವು ಕಾರ್ಯಾಚರಣೆಯ ವೇಳೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಮಾನದಂಡಗಳನ್ನು ಅಧಿಕಾರಿಗಳು ಅನುಸರಿಸಿಲ್ಲ. ತೆರವು ಕಾರ್ಯಚರಣೆಯ ವೇಳೆ ವ್ಯಾಪಕವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಅನೇಕ ನಿದರ್ಶನವು ತೆರವು ಕಾರ್ಯಾಚರಣೆಯನ್ನು ತೀವ್ರತೆ ಮತ್ತು ಕ್ರೂರತೆಯಿಂದ ಮಾಡಲಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

‘ಭಾರತದಲ್ಲಿ 2022- 2023ರಲ್ಲಿ ಬಲವಂತದ ತೆರವು’ ಎಂಬ ಶೀರ್ಷಿಕೆಯ ವರದಿಯು ನ್ಯಾಯಾಲಯದ ಆದೇಶಗಳ ಮೂಲಕ ಬಲವಂತದ ತೆರವು ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಹೇಳುತ್ತದೆ. ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ HLRN ಬಲವಂತದ ತೆರವನ್ನು ಗುರುತಿಸಿದೆ. ಬಲವಂತದ ತೆರವು- ವ್ಯಕ್ತಿಗಳು, ಕುಟುಂಬಗಳು ಅಥವಾ ಸಮುದಾಯಗಳ ಇಚ್ಛೆಗೆ ವಿರುದ್ಧವಾಗಿ ಶಾಶ್ವತ ಅಥವಾ ತಾತ್ಕಾಲಿಕವಾಗಿ ತೆರವು ಮಾಡುವುದನ್ನು ಗಮನಿಸಿದೆ.

HLRN ವರದಿಯ ಪ್ರಕಾರ, 2022 ಮತ್ತು 2023ರಲ್ಲಿ, ಸುಮಾರು 3 ಲಕ್ಷ ಜನರನ್ನು ನ್ಯಾಯಾಲಯದ ಆದೇಶಗಳ ಬಳಿಕ ಅವರ ಮನೆಗಳಿಂದ ತೆರವು ಮಾಡಲಾಗಿದೆ. 2022ರಲ್ಲಿ ನ್ಯಾಯಾಲಯದ ಆದೇಶಗಳು 33,360ಕ್ಕೂ ಹೆಚ್ಚು ಜನರ ತೆರವು ಕಾರ್ಯಾಚರಣೆಗೆ ಕಾರಣವಾಯಿತು ಮತ್ತು 2023ರಲ್ಲಿ ಈ ಅಂಕಿ ಅಂಶವು ಸುಮಾರು 2.6 ಲಕ್ಷವನ್ನು ತಲುಪಿದೆ ಎಂದು ವರದಿಯು ತಿಳಿಸಿದೆ.

ಈ ಹಿಂದೆ, ವಸತಿ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ಪರಿಹಾರವನ್ನು ಒದಗಿಸಲು ನ್ಯಾಯಾಲಯಗಳು ರಚನಾತ್ಮಕವಾಗಿ ಕಾನೂನನ್ನು ವ್ಯಾಖ್ಯಾನಿಸಿವೆ, ಸುಪ್ರೀಂ ಕೋರ್ಟ್ ಮತ್ತು ಹಲವಾರು ರಾಜ್ಯ ಉಚ್ಚ ನ್ಯಾಯಾಲಯಗಳು ವಸತಿ ಅಥವಾ ಆಶ್ರಯದ ಹಕ್ಕನ್ನು ಸಮರ್ಥಿಸಿದೆ ಎಂದು ವರದಿಯು ಉಲ್ಲೇಖಿಸಿದೆ.

ಸುದಾಮ ಸಿಂಗ್ ವರ್ಸಸ್ ದೆಹಲಿ ಸರ್ಕಾರ (2010) ಮತ್ತು ಅಜಯ್ ಮಾಕೆನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ (2019) ದಲ್ಲಿನ ಮಹತ್ವದ ತೀರ್ಪುಗಳು ಯಾವುದೇ ಬಲವಂತದ ತೆರವು ಕಾರ್ಯಾಚರಣೆ ನಡೆಸುವ ಮೊದಲು ಸಮೀಕ್ಷೆಯನ್ನು ನಡೆಸಲು ಮತ್ತು ಪುನರ್ವಸತಿಯನ್ನು ಒದಗಿಸುವ ಕರ್ತವ್ಯವನ್ನು ಅಧಿಕಾರಿಗಳು ವಹಿಸಬೇಕು. ಆದರೆ ಅದನ್ನು ಮಾಡಿಲ್ಲ ಎನ್ನುವುದು ಕಂಡು ಬಂದಿದೆ.

ವರದಿಯ ಪ್ರಕಾರ, 2022ರಲ್ಲಿ ದೇಶದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 178 ತೆರವು ಕಾರ್ಯಾಚರಣೆಗಳು ನಡೆದಿವೆ. ಇದರ ಪರಿಣಾಮವಾಗಿ 46,371 ಮನೆಗಳನ್ನು ಕೆಡವಲಾಯಿತು ಮತ್ತು 2.3ಲಕ್ಷ ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ. 2023ರಲ್ಲಿ 146 ತೆರವು ಕಾರ್ಯಾಚರಣೆ ನಡೆದಿದೆ. ಇದರ ಪರಿಣಾಮವಾಗಿ 107, 499 ಮನೆಗಳನ್ನು ಕೆಡವಲಾಯಿತು ಮತ್ತು ಕನಿಷ್ಠ 5.15 ಲಕ್ಷ ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. 2023ರ ಈ ಅಂಕಿ-ಅಂಶಗಳು ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತ್ಯಧಿಕ ಅಂಕಿ ಅಂಶವಾಗಿದೆ. ಈ ಅಂಕಿ-ಅಂಶಗಳು 2023ರಲ್ಲಿ ಪ್ರತಿದಿನ ಕನಿಷ್ಠ 294 ಮನೆಗಳ ಧ್ವಂಸ  ಮತ್ತು ಪ್ರತಿ ಗಂಟೆಗೆ 58 ಜನರ ಸ್ಥಳಾಂತರವನ್ನು ಬಿಂಬಿಸುತ್ತದೆ ಎಂದು HLRN ಲೆಕ್ಕಾಚಾರವು ಉಲ್ಲೇಖಿಸಿದೆ. ಆದರೆ 2022ರಲ್ಲಿ ಪ್ರತಿದಿನ ಕನಿಷ್ಠ 129 ಮನೆಗಳ ಧ್ವಂಸ  ಮತ್ತು ಪ್ರತಿ ಗಂಟೆಗೆ 25 ಜನರನ್ನು ತೆರವು  ಮಾಡಲಾಗಿದೆ ಎಂಬವುದನ್ನು ಅಂಕಿ-ಅಂಶಗಳು ಬಿಂಬಿಸುತ್ತದೆ ಎಂದು ವರದಿಯು ತಿಳಿಸಿದೆ.

ದೆಹಲಿಯ ತುಘಲಕಾಬಾದ್, ಅಹಮದಾಬಾದ್‌ನ ರಾಮ ಪಿರ್ ನೊ ಟೆಕ್ರೊ ಮತ್ತು ಫೈಜಾಬಾದ್-ನಯಾ ಘಾಟ್  ಗಳಲ್ಲಿನ ತೆರವು ಕಾರ್ಯಾಚರಣೆಯು ಜನರ ದೊಡ್ಡ ಗುಂಪಿನ ಮೇಲೆ ಪರಿಣಾಮವನ್ನು ಬೀರಿದೆ. HLRN ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ 59% ತೆರವು ಕಾರ್ಯಾಚರಣೆಯನ್ನು ‘ಸ್ಲಂ ಅಥವಾ ಭೂ ತೆರವು’ ಅಥವಾ ‘ಅತಿಕ್ರಮಣ’ ಅಥವಾ ‘ನಗರದ ಸೌಂದರ್ಯೀಕರಣ’ ನೆಪದಲ್ಲಿ ಮಾಡಲಾಗಿದೆ. 2023ರಲ್ಲಿ 2.9 ಲಕ್ಷಕ್ಕೂ ಹೆಚ್ಚು ಮತ್ತು 2022ರಲ್ಲಿ 1.43 ಲಕ್ಷಕ್ಕೂ ಹೆಚ್ಚು ಜನರನ್ನು ಈ ಉದ್ದೇಶದಿಂದ ತೆರವು ಮಾಡಲಾಗಿದೆ. ಇದಲ್ಲದೆ  ಸ್ಮಾರ್ಟ್ ಸಿಟಿ ಯೋಜನೆ, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಯೋಜನೆಯ ನೆಪದಲ್ಲಿ ತೆರವು ಕಾರ್ಯಾಚರಣೆಯನ್ನು ಮಾಡಲಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: SFI ನಾಯಕ ಅಭಿಮನ್ಯು ಹತ್ಯೆ ಪ್ರಕರಣ: ನ್ಯಾಯಾಲಯದಿಂದ ದಾಖಲೆಗಳು ನಾಪತ್ತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...