HomeUncategorizedಅತಿಕ್ರಮಣ ತೆರವು, ಅಭಿವೃದ್ಧಿ ನೆಪದಲ್ಲಿ ಬುಲ್ಡೋಝರ್‌ ಕಾರ್ಯಾಚರಣೆ: 2022-23ರಲ್ಲಿ ಸಂತ್ರಸ್ತರೆಷ್ಟು?

ಅತಿಕ್ರಮಣ ತೆರವು, ಅಭಿವೃದ್ಧಿ ನೆಪದಲ್ಲಿ ಬುಲ್ಡೋಝರ್‌ ಕಾರ್ಯಾಚರಣೆ: 2022-23ರಲ್ಲಿ ಸಂತ್ರಸ್ತರೆಷ್ಟು?

- Advertisement -
- Advertisement -

ಮೋದಿ ಆಡಳಿತದ ಭಾರತದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 2022 ಮತ್ತು 2023ರಲ್ಲಿ ಅತಿ ಹೆಚ್ಚು  ಮನೆಗಳನ್ನು ತೆರವುಗೊಳಿಸಲಾಗಿದ್ದು, ಈ ಒಂದು ವರ್ಷದ ಅವಧಿಯಲ್ಲಿ 7.4 ಲಕ್ಷ ಜನರನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

ವಕೀಲರ ಗುಂಪು ಹೌಸಿಂಗ್ ಮತ್ತು ಲ್ಯಾಂಡ್ ರೈಟ್ಸ್ ನೆಟ್‌ವರ್ಕ್ (ಎಚ್‌ಎಲ್‌ಆರ್‌ಎನ್) ಈ ಕುರಿತು ‘ಭಾರತದಲ್ಲಿ 2022- 2023ರಲ್ಲಿ ಬಲವಂತದ ತೆರವು’ ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ದೇಶಾದ್ಯಂತ 1.53 ಲಕ್ಷ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಕೂಡ ಉಲ್ಲೇಖಿಸಲಾಗಿದೆ. 23 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ದತ್ತಾಂಶ ಸಂಗ್ರಹಣೆಯ ಮೂಲಕ HLRN ಈ ವರದಿಯನ್ನು ಸಿದ್ದಪಡಿಸಿದ್ದು, ತೆರವು ಕಾರ್ಯಾಚರಣೆಗಳಿಂದ ಮನೆಗಳನ್ನು ಕಳೆದುಕೊಂಡ ಅಥವಾ ಮನೆಗಳಿಂದ ಸ್ಥಳಾಂತರಗೊಂಡ ವ್ಯಕ್ತಿಗಳ ನಿಜವಾದ ಸಂಖ್ಯೆಯು ಇನ್ನೂ ಹೆಚ್ಚಿರಬಹುದು ಎಂದು ಅಂದಾಜಿಸಿದೆ.

ಎಲ್ಲಾ ತೆರವು ಕಾರ್ಯಾಚರಣೆಯ ವೇಳೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಮಾನದಂಡಗಳನ್ನು ಅಧಿಕಾರಿಗಳು ಅನುಸರಿಸಿಲ್ಲ. ತೆರವು ಕಾರ್ಯಚರಣೆಯ ವೇಳೆ ವ್ಯಾಪಕವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಅನೇಕ ನಿದರ್ಶನವು ತೆರವು ಕಾರ್ಯಾಚರಣೆಯನ್ನು ತೀವ್ರತೆ ಮತ್ತು ಕ್ರೂರತೆಯಿಂದ ಮಾಡಲಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

‘ಭಾರತದಲ್ಲಿ 2022- 2023ರಲ್ಲಿ ಬಲವಂತದ ತೆರವು’ ಎಂಬ ಶೀರ್ಷಿಕೆಯ ವರದಿಯು ನ್ಯಾಯಾಲಯದ ಆದೇಶಗಳ ಮೂಲಕ ಬಲವಂತದ ತೆರವು ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಹೇಳುತ್ತದೆ. ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ HLRN ಬಲವಂತದ ತೆರವನ್ನು ಗುರುತಿಸಿದೆ. ಬಲವಂತದ ತೆರವು- ವ್ಯಕ್ತಿಗಳು, ಕುಟುಂಬಗಳು ಅಥವಾ ಸಮುದಾಯಗಳ ಇಚ್ಛೆಗೆ ವಿರುದ್ಧವಾಗಿ ಶಾಶ್ವತ ಅಥವಾ ತಾತ್ಕಾಲಿಕವಾಗಿ ತೆರವು ಮಾಡುವುದನ್ನು ಗಮನಿಸಿದೆ.

HLRN ವರದಿಯ ಪ್ರಕಾರ, 2022 ಮತ್ತು 2023ರಲ್ಲಿ, ಸುಮಾರು 3 ಲಕ್ಷ ಜನರನ್ನು ನ್ಯಾಯಾಲಯದ ಆದೇಶಗಳ ಬಳಿಕ ಅವರ ಮನೆಗಳಿಂದ ತೆರವು ಮಾಡಲಾಗಿದೆ. 2022ರಲ್ಲಿ ನ್ಯಾಯಾಲಯದ ಆದೇಶಗಳು 33,360ಕ್ಕೂ ಹೆಚ್ಚು ಜನರ ತೆರವು ಕಾರ್ಯಾಚರಣೆಗೆ ಕಾರಣವಾಯಿತು ಮತ್ತು 2023ರಲ್ಲಿ ಈ ಅಂಕಿ ಅಂಶವು ಸುಮಾರು 2.6 ಲಕ್ಷವನ್ನು ತಲುಪಿದೆ ಎಂದು ವರದಿಯು ತಿಳಿಸಿದೆ.

ಈ ಹಿಂದೆ, ವಸತಿ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ಪರಿಹಾರವನ್ನು ಒದಗಿಸಲು ನ್ಯಾಯಾಲಯಗಳು ರಚನಾತ್ಮಕವಾಗಿ ಕಾನೂನನ್ನು ವ್ಯಾಖ್ಯಾನಿಸಿವೆ, ಸುಪ್ರೀಂ ಕೋರ್ಟ್ ಮತ್ತು ಹಲವಾರು ರಾಜ್ಯ ಉಚ್ಚ ನ್ಯಾಯಾಲಯಗಳು ವಸತಿ ಅಥವಾ ಆಶ್ರಯದ ಹಕ್ಕನ್ನು ಸಮರ್ಥಿಸಿದೆ ಎಂದು ವರದಿಯು ಉಲ್ಲೇಖಿಸಿದೆ.

ಸುದಾಮ ಸಿಂಗ್ ವರ್ಸಸ್ ದೆಹಲಿ ಸರ್ಕಾರ (2010) ಮತ್ತು ಅಜಯ್ ಮಾಕೆನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ (2019) ದಲ್ಲಿನ ಮಹತ್ವದ ತೀರ್ಪುಗಳು ಯಾವುದೇ ಬಲವಂತದ ತೆರವು ಕಾರ್ಯಾಚರಣೆ ನಡೆಸುವ ಮೊದಲು ಸಮೀಕ್ಷೆಯನ್ನು ನಡೆಸಲು ಮತ್ತು ಪುನರ್ವಸತಿಯನ್ನು ಒದಗಿಸುವ ಕರ್ತವ್ಯವನ್ನು ಅಧಿಕಾರಿಗಳು ವಹಿಸಬೇಕು. ಆದರೆ ಅದನ್ನು ಮಾಡಿಲ್ಲ ಎನ್ನುವುದು ಕಂಡು ಬಂದಿದೆ.

ವರದಿಯ ಪ್ರಕಾರ, 2022ರಲ್ಲಿ ದೇಶದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 178 ತೆರವು ಕಾರ್ಯಾಚರಣೆಗಳು ನಡೆದಿವೆ. ಇದರ ಪರಿಣಾಮವಾಗಿ 46,371 ಮನೆಗಳನ್ನು ಕೆಡವಲಾಯಿತು ಮತ್ತು 2.3ಲಕ್ಷ ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ. 2023ರಲ್ಲಿ 146 ತೆರವು ಕಾರ್ಯಾಚರಣೆ ನಡೆದಿದೆ. ಇದರ ಪರಿಣಾಮವಾಗಿ 107, 499 ಮನೆಗಳನ್ನು ಕೆಡವಲಾಯಿತು ಮತ್ತು ಕನಿಷ್ಠ 5.15 ಲಕ್ಷ ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. 2023ರ ಈ ಅಂಕಿ-ಅಂಶಗಳು ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತ್ಯಧಿಕ ಅಂಕಿ ಅಂಶವಾಗಿದೆ. ಈ ಅಂಕಿ-ಅಂಶಗಳು 2023ರಲ್ಲಿ ಪ್ರತಿದಿನ ಕನಿಷ್ಠ 294 ಮನೆಗಳ ಧ್ವಂಸ  ಮತ್ತು ಪ್ರತಿ ಗಂಟೆಗೆ 58 ಜನರ ಸ್ಥಳಾಂತರವನ್ನು ಬಿಂಬಿಸುತ್ತದೆ ಎಂದು HLRN ಲೆಕ್ಕಾಚಾರವು ಉಲ್ಲೇಖಿಸಿದೆ. ಆದರೆ 2022ರಲ್ಲಿ ಪ್ರತಿದಿನ ಕನಿಷ್ಠ 129 ಮನೆಗಳ ಧ್ವಂಸ  ಮತ್ತು ಪ್ರತಿ ಗಂಟೆಗೆ 25 ಜನರನ್ನು ತೆರವು  ಮಾಡಲಾಗಿದೆ ಎಂಬವುದನ್ನು ಅಂಕಿ-ಅಂಶಗಳು ಬಿಂಬಿಸುತ್ತದೆ ಎಂದು ವರದಿಯು ತಿಳಿಸಿದೆ.

ದೆಹಲಿಯ ತುಘಲಕಾಬಾದ್, ಅಹಮದಾಬಾದ್‌ನ ರಾಮ ಪಿರ್ ನೊ ಟೆಕ್ರೊ ಮತ್ತು ಫೈಜಾಬಾದ್-ನಯಾ ಘಾಟ್  ಗಳಲ್ಲಿನ ತೆರವು ಕಾರ್ಯಾಚರಣೆಯು ಜನರ ದೊಡ್ಡ ಗುಂಪಿನ ಮೇಲೆ ಪರಿಣಾಮವನ್ನು ಬೀರಿದೆ. HLRN ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ 59% ತೆರವು ಕಾರ್ಯಾಚರಣೆಯನ್ನು ‘ಸ್ಲಂ ಅಥವಾ ಭೂ ತೆರವು’ ಅಥವಾ ‘ಅತಿಕ್ರಮಣ’ ಅಥವಾ ‘ನಗರದ ಸೌಂದರ್ಯೀಕರಣ’ ನೆಪದಲ್ಲಿ ಮಾಡಲಾಗಿದೆ. 2023ರಲ್ಲಿ 2.9 ಲಕ್ಷಕ್ಕೂ ಹೆಚ್ಚು ಮತ್ತು 2022ರಲ್ಲಿ 1.43 ಲಕ್ಷಕ್ಕೂ ಹೆಚ್ಚು ಜನರನ್ನು ಈ ಉದ್ದೇಶದಿಂದ ತೆರವು ಮಾಡಲಾಗಿದೆ. ಇದಲ್ಲದೆ  ಸ್ಮಾರ್ಟ್ ಸಿಟಿ ಯೋಜನೆ, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಯೋಜನೆಯ ನೆಪದಲ್ಲಿ ತೆರವು ಕಾರ್ಯಾಚರಣೆಯನ್ನು ಮಾಡಲಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: SFI ನಾಯಕ ಅಭಿಮನ್ಯು ಹತ್ಯೆ ಪ್ರಕರಣ: ನ್ಯಾಯಾಲಯದಿಂದ ದಾಖಲೆಗಳು ನಾಪತ್ತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...