HomeUncategorizedಅತಿಕ್ರಮಣ ತೆರವು, ಅಭಿವೃದ್ಧಿ ನೆಪದಲ್ಲಿ ಬುಲ್ಡೋಝರ್‌ ಕಾರ್ಯಾಚರಣೆ: 2022-23ರಲ್ಲಿ ಸಂತ್ರಸ್ತರೆಷ್ಟು?

ಅತಿಕ್ರಮಣ ತೆರವು, ಅಭಿವೃದ್ಧಿ ನೆಪದಲ್ಲಿ ಬುಲ್ಡೋಝರ್‌ ಕಾರ್ಯಾಚರಣೆ: 2022-23ರಲ್ಲಿ ಸಂತ್ರಸ್ತರೆಷ್ಟು?

- Advertisement -
- Advertisement -

ಮೋದಿ ಆಡಳಿತದ ಭಾರತದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 2022 ಮತ್ತು 2023ರಲ್ಲಿ ಅತಿ ಹೆಚ್ಚು  ಮನೆಗಳನ್ನು ತೆರವುಗೊಳಿಸಲಾಗಿದ್ದು, ಈ ಒಂದು ವರ್ಷದ ಅವಧಿಯಲ್ಲಿ 7.4 ಲಕ್ಷ ಜನರನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

ವಕೀಲರ ಗುಂಪು ಹೌಸಿಂಗ್ ಮತ್ತು ಲ್ಯಾಂಡ್ ರೈಟ್ಸ್ ನೆಟ್‌ವರ್ಕ್ (ಎಚ್‌ಎಲ್‌ಆರ್‌ಎನ್) ಈ ಕುರಿತು ‘ಭಾರತದಲ್ಲಿ 2022- 2023ರಲ್ಲಿ ಬಲವಂತದ ತೆರವು’ ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ದೇಶಾದ್ಯಂತ 1.53 ಲಕ್ಷ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಕೂಡ ಉಲ್ಲೇಖಿಸಲಾಗಿದೆ. 23 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ದತ್ತಾಂಶ ಸಂಗ್ರಹಣೆಯ ಮೂಲಕ HLRN ಈ ವರದಿಯನ್ನು ಸಿದ್ದಪಡಿಸಿದ್ದು, ತೆರವು ಕಾರ್ಯಾಚರಣೆಗಳಿಂದ ಮನೆಗಳನ್ನು ಕಳೆದುಕೊಂಡ ಅಥವಾ ಮನೆಗಳಿಂದ ಸ್ಥಳಾಂತರಗೊಂಡ ವ್ಯಕ್ತಿಗಳ ನಿಜವಾದ ಸಂಖ್ಯೆಯು ಇನ್ನೂ ಹೆಚ್ಚಿರಬಹುದು ಎಂದು ಅಂದಾಜಿಸಿದೆ.

ಎಲ್ಲಾ ತೆರವು ಕಾರ್ಯಾಚರಣೆಯ ವೇಳೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಮಾನದಂಡಗಳನ್ನು ಅಧಿಕಾರಿಗಳು ಅನುಸರಿಸಿಲ್ಲ. ತೆರವು ಕಾರ್ಯಚರಣೆಯ ವೇಳೆ ವ್ಯಾಪಕವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಅನೇಕ ನಿದರ್ಶನವು ತೆರವು ಕಾರ್ಯಾಚರಣೆಯನ್ನು ತೀವ್ರತೆ ಮತ್ತು ಕ್ರೂರತೆಯಿಂದ ಮಾಡಲಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

‘ಭಾರತದಲ್ಲಿ 2022- 2023ರಲ್ಲಿ ಬಲವಂತದ ತೆರವು’ ಎಂಬ ಶೀರ್ಷಿಕೆಯ ವರದಿಯು ನ್ಯಾಯಾಲಯದ ಆದೇಶಗಳ ಮೂಲಕ ಬಲವಂತದ ತೆರವು ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಹೇಳುತ್ತದೆ. ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ HLRN ಬಲವಂತದ ತೆರವನ್ನು ಗುರುತಿಸಿದೆ. ಬಲವಂತದ ತೆರವು- ವ್ಯಕ್ತಿಗಳು, ಕುಟುಂಬಗಳು ಅಥವಾ ಸಮುದಾಯಗಳ ಇಚ್ಛೆಗೆ ವಿರುದ್ಧವಾಗಿ ಶಾಶ್ವತ ಅಥವಾ ತಾತ್ಕಾಲಿಕವಾಗಿ ತೆರವು ಮಾಡುವುದನ್ನು ಗಮನಿಸಿದೆ.

HLRN ವರದಿಯ ಪ್ರಕಾರ, 2022 ಮತ್ತು 2023ರಲ್ಲಿ, ಸುಮಾರು 3 ಲಕ್ಷ ಜನರನ್ನು ನ್ಯಾಯಾಲಯದ ಆದೇಶಗಳ ಬಳಿಕ ಅವರ ಮನೆಗಳಿಂದ ತೆರವು ಮಾಡಲಾಗಿದೆ. 2022ರಲ್ಲಿ ನ್ಯಾಯಾಲಯದ ಆದೇಶಗಳು 33,360ಕ್ಕೂ ಹೆಚ್ಚು ಜನರ ತೆರವು ಕಾರ್ಯಾಚರಣೆಗೆ ಕಾರಣವಾಯಿತು ಮತ್ತು 2023ರಲ್ಲಿ ಈ ಅಂಕಿ ಅಂಶವು ಸುಮಾರು 2.6 ಲಕ್ಷವನ್ನು ತಲುಪಿದೆ ಎಂದು ವರದಿಯು ತಿಳಿಸಿದೆ.

ಈ ಹಿಂದೆ, ವಸತಿ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ಪರಿಹಾರವನ್ನು ಒದಗಿಸಲು ನ್ಯಾಯಾಲಯಗಳು ರಚನಾತ್ಮಕವಾಗಿ ಕಾನೂನನ್ನು ವ್ಯಾಖ್ಯಾನಿಸಿವೆ, ಸುಪ್ರೀಂ ಕೋರ್ಟ್ ಮತ್ತು ಹಲವಾರು ರಾಜ್ಯ ಉಚ್ಚ ನ್ಯಾಯಾಲಯಗಳು ವಸತಿ ಅಥವಾ ಆಶ್ರಯದ ಹಕ್ಕನ್ನು ಸಮರ್ಥಿಸಿದೆ ಎಂದು ವರದಿಯು ಉಲ್ಲೇಖಿಸಿದೆ.

ಸುದಾಮ ಸಿಂಗ್ ವರ್ಸಸ್ ದೆಹಲಿ ಸರ್ಕಾರ (2010) ಮತ್ತು ಅಜಯ್ ಮಾಕೆನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ (2019) ದಲ್ಲಿನ ಮಹತ್ವದ ತೀರ್ಪುಗಳು ಯಾವುದೇ ಬಲವಂತದ ತೆರವು ಕಾರ್ಯಾಚರಣೆ ನಡೆಸುವ ಮೊದಲು ಸಮೀಕ್ಷೆಯನ್ನು ನಡೆಸಲು ಮತ್ತು ಪುನರ್ವಸತಿಯನ್ನು ಒದಗಿಸುವ ಕರ್ತವ್ಯವನ್ನು ಅಧಿಕಾರಿಗಳು ವಹಿಸಬೇಕು. ಆದರೆ ಅದನ್ನು ಮಾಡಿಲ್ಲ ಎನ್ನುವುದು ಕಂಡು ಬಂದಿದೆ.

ವರದಿಯ ಪ್ರಕಾರ, 2022ರಲ್ಲಿ ದೇಶದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 178 ತೆರವು ಕಾರ್ಯಾಚರಣೆಗಳು ನಡೆದಿವೆ. ಇದರ ಪರಿಣಾಮವಾಗಿ 46,371 ಮನೆಗಳನ್ನು ಕೆಡವಲಾಯಿತು ಮತ್ತು 2.3ಲಕ್ಷ ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ. 2023ರಲ್ಲಿ 146 ತೆರವು ಕಾರ್ಯಾಚರಣೆ ನಡೆದಿದೆ. ಇದರ ಪರಿಣಾಮವಾಗಿ 107, 499 ಮನೆಗಳನ್ನು ಕೆಡವಲಾಯಿತು ಮತ್ತು ಕನಿಷ್ಠ 5.15 ಲಕ್ಷ ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. 2023ರ ಈ ಅಂಕಿ-ಅಂಶಗಳು ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತ್ಯಧಿಕ ಅಂಕಿ ಅಂಶವಾಗಿದೆ. ಈ ಅಂಕಿ-ಅಂಶಗಳು 2023ರಲ್ಲಿ ಪ್ರತಿದಿನ ಕನಿಷ್ಠ 294 ಮನೆಗಳ ಧ್ವಂಸ  ಮತ್ತು ಪ್ರತಿ ಗಂಟೆಗೆ 58 ಜನರ ಸ್ಥಳಾಂತರವನ್ನು ಬಿಂಬಿಸುತ್ತದೆ ಎಂದು HLRN ಲೆಕ್ಕಾಚಾರವು ಉಲ್ಲೇಖಿಸಿದೆ. ಆದರೆ 2022ರಲ್ಲಿ ಪ್ರತಿದಿನ ಕನಿಷ್ಠ 129 ಮನೆಗಳ ಧ್ವಂಸ  ಮತ್ತು ಪ್ರತಿ ಗಂಟೆಗೆ 25 ಜನರನ್ನು ತೆರವು  ಮಾಡಲಾಗಿದೆ ಎಂಬವುದನ್ನು ಅಂಕಿ-ಅಂಶಗಳು ಬಿಂಬಿಸುತ್ತದೆ ಎಂದು ವರದಿಯು ತಿಳಿಸಿದೆ.

ದೆಹಲಿಯ ತುಘಲಕಾಬಾದ್, ಅಹಮದಾಬಾದ್‌ನ ರಾಮ ಪಿರ್ ನೊ ಟೆಕ್ರೊ ಮತ್ತು ಫೈಜಾಬಾದ್-ನಯಾ ಘಾಟ್  ಗಳಲ್ಲಿನ ತೆರವು ಕಾರ್ಯಾಚರಣೆಯು ಜನರ ದೊಡ್ಡ ಗುಂಪಿನ ಮೇಲೆ ಪರಿಣಾಮವನ್ನು ಬೀರಿದೆ. HLRN ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ 59% ತೆರವು ಕಾರ್ಯಾಚರಣೆಯನ್ನು ‘ಸ್ಲಂ ಅಥವಾ ಭೂ ತೆರವು’ ಅಥವಾ ‘ಅತಿಕ್ರಮಣ’ ಅಥವಾ ‘ನಗರದ ಸೌಂದರ್ಯೀಕರಣ’ ನೆಪದಲ್ಲಿ ಮಾಡಲಾಗಿದೆ. 2023ರಲ್ಲಿ 2.9 ಲಕ್ಷಕ್ಕೂ ಹೆಚ್ಚು ಮತ್ತು 2022ರಲ್ಲಿ 1.43 ಲಕ್ಷಕ್ಕೂ ಹೆಚ್ಚು ಜನರನ್ನು ಈ ಉದ್ದೇಶದಿಂದ ತೆರವು ಮಾಡಲಾಗಿದೆ. ಇದಲ್ಲದೆ  ಸ್ಮಾರ್ಟ್ ಸಿಟಿ ಯೋಜನೆ, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಯೋಜನೆಯ ನೆಪದಲ್ಲಿ ತೆರವು ಕಾರ್ಯಾಚರಣೆಯನ್ನು ಮಾಡಲಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: SFI ನಾಯಕ ಅಭಿಮನ್ಯು ಹತ್ಯೆ ಪ್ರಕರಣ: ನ್ಯಾಯಾಲಯದಿಂದ ದಾಖಲೆಗಳು ನಾಪತ್ತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...