Homeಮುಖಪುಟಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

- Advertisement -
- Advertisement -

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ.

ಟರ್ಕಿಯ ಸ್ಥಳೀಯ ಅಧಿಕಾರಿಗಳು ಆರಂಭಿಕ ಸಾವಿನ ಸಂಖ್ಯೆ 53 ಎಂದು ಹೇಳಿದ್ದಾರೆ. ಆದರೆ ಇದು ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಏಕೆಂದರೆ ಎಲ್ಲರೂ ಮನೆಯಲ್ಲಿ ಮಲಗಿರುವಾಗ ಈ ಅವಾಂತರ ಸಂಭವಿಸಿರುವುದರಿಂದ ಕಟ್ಟಡ ನೆಲಸಮಗೊಂಡಿವೆ ಹಾಗಾಗಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ.

ಹಾನಿಗೊಳಗಾದ ಮನೆಗಳ ಅವಶೇಷಗಳ ಅಡಿಯಲ್ಲಿ ಅಗೆದು ಮೃತದೇಹಗಳನ್ನು ರಕ್ಷಕರು ಹೊರತೆಗೆಯುತ್ತಿರುವುದನ್ನು ಟರ್ಕಿಯ ಜನರು ಹಿಮದಲ್ಲಿ ನಿಂತು ಆತಂಕದಲ್ಲಿ ನೋಡುತ್ತಿದ್ದಾರೆ.

ಸುಮಾರು 17.9 ಕಿಲೋಮೀಟರ್ (11 ಮೈಲುಗಳು) ಪ್ರದೇಶದಲ್ಲಿ ಸ್ಥಳೀಯ ಸಮಯ (0117 GMT) 04:17 ಕ್ಕೆ ಈ ಭೂಕಂಪ ಸಂಭವಿಸಿದೆ. 15 ನಿಮಿಷಗಳ ನಂತರ 6.7-ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು US ಏಜೆನ್ಸಿ ತಿಳಿಸಿದೆ.

ಟರ್ಕಿಯ ಎಎಫ್‌ಎಡಿ ತುರ್ತು ಸೇವಾ ಕೇಂದ್ರವು ಮೊದಲ ಭೂಕಂಪದ ತೀವ್ರತೆಯನ್ನು 7.4 ಎಂದು ಹೇಳಿದೆ.

ಈ ಪ್ರದೇಶದಲ್ಲಿ ಸಂಭವಿಸಿದ ಇವತ್ತಿನ ಭೂಕಂಪನವು, ಕನಿಷ್ಠ ಒಂದು ಶತಮಾನದಲ್ಲೇ ಅತ್ಯಂತ ಭಯಾನಕ ಭೂಕಂಪನ ಇದಾಗಿದೆ.

”ಭೂಕಂಪದಿಂದ ಸಂತ್ರಸ್ತರಾದ ನಮ್ಮ ಎಲ್ಲಾ ನಾಗರಿಕರ ಜೊತೆ ನಾವಿದ್ದೇವೆ. ನಾವು ಸಾಧ್ಯವಾದಷ್ಟು ಬೇಗ ಮತ್ತು ಕನಿಷ್ಠ ಹಾನಿಯೊಂದಿಗೆ ಈ ದುರಂತದ ಮೂಲಕ ಹೊರಬರುತ್ತೇವೆ ಎಂದು ನಾವು ಭಾವಿಸುತ್ತೇವೆ” ಎಂದು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ದಕ್ಷಿಣ ಟರ್ಕಿ ಮತ್ತು ನೆರೆಯ ಸಿರಿಯಾದ ಪ್ರಮುಖ ನಗರಗಳಾದ್ಯಂತ ಅನೇಕ ಕಟ್ಟಡಗಳು ಈ ಭೂಕಂಪನದಿಂದ ನೆಲಸಮಗೊಂಡವು. ಈ ಪ್ರದೇಶ ಈಗಾಗಲೇ ಅತಿ ಹೆಚ್ಚು ಹಿಂಸಾಚಾರದಿಂದ ನಲುಗಿಹೋಗಿದೆ. ಅನೇಕರ ಸಾವುನೋವುಗಳು ಸಂಭವಿಸಿವೆ. ಇದೀಗ ಭೂಕಂಪನದ ದುರಂತವೊಂದು ನಡೆದಿದೆ.

ಟರ್ಕಿಶ್ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ಚಿತ್ರಗಳು ಕಹ್ರಮನ್ಮರಸ್ ಮತ್ತು ನೆರೆಯ ಗಜಿಯಾಂಟೆಪ್ ನಗರದಲ್ಲಿ ನೆಲಸಮವಾದ ಕಟ್ಟಡಗಳ ಅವಶೇಷಗಳ ಮೂಲಕ ರಕ್ಷಕರು ಅಗೆಯುವುದನ್ನು ತೋರಿಸುತ್ತಿವೆ.

ಕಹ್ರಮನ್ಮರಸ್‌ನ ಒಂದು ಚಿತ್ರದಲ್ಲಿ ಆಕಾಶದೆತ್ತರಕ್ಕೆ ಬೆಂಕಿಯು ಹೊತ್ತಿಕೊಂಡಿರುವುದು ಕಂಡುಬಂದಿದೆ ಆದರೆ ಅದರ ಮೂಲವು ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಅದ್ಯಾಮಾನ್, ಮಾಲತ್ಯ ಮತ್ತು ದಿಯರ್‌ಬಕಿರ್ ನಗರಗಳಲ್ಲಿ ಕಟ್ಟಡಗಳು ಕುಸಿದಿವೆ ಎಂದು NTV ಮಾಧ್ಯಮ ಹೇಳಿದೆ..

ಮಧ್ಯ ಟರ್ಕಿಯ ಕೆಲವು ಭಾಗಗಳಲ್ಲಿ ಮತ್ತು ರಾಜಧಾನಿ ಅಂಕಾರಾದಲ್ಲಿಯೂ ಭೂಕಂಪದ ಅನುಭವವಾಗಿದೆ ಎಂದು ಸಿಎನ್‌ಎನ್ ಟರ್ಕ್ ಮಾಧ್ಯಮ ಹೇಳಿದೆ.

‘ಅತಿದೊಡ್ಡ ಭೂಕಂಪ’

ಸಿರಿಯಾದ ಪಶ್ಚಿಮ ಕರಾವಳಿಯಲ್ಲಿರುವ ಲಟಾಕಿಯಾ ಬಳಿ ಕಟ್ಟಡವೊಂದು ಕುಸಿದಿದೆ ಎಂದು ಸಿರಿಯನ್ ಸ್ಟೇಟ್ ಮಾಧ್ಯಮ ವರದಿ ಮಾಡಿದೆ.

ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಿಂದ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ಮಾಧ್ಯಮಗಳು ತಿಳಿಸಿವೆ.

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರು.

ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಟರ್ಕಿ ಕೂಡ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...