Homeಮುಖಪುಟಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

- Advertisement -
- Advertisement -

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ.

ಟರ್ಕಿಯ ಸ್ಥಳೀಯ ಅಧಿಕಾರಿಗಳು ಆರಂಭಿಕ ಸಾವಿನ ಸಂಖ್ಯೆ 53 ಎಂದು ಹೇಳಿದ್ದಾರೆ. ಆದರೆ ಇದು ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಏಕೆಂದರೆ ಎಲ್ಲರೂ ಮನೆಯಲ್ಲಿ ಮಲಗಿರುವಾಗ ಈ ಅವಾಂತರ ಸಂಭವಿಸಿರುವುದರಿಂದ ಕಟ್ಟಡ ನೆಲಸಮಗೊಂಡಿವೆ ಹಾಗಾಗಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ.

ಹಾನಿಗೊಳಗಾದ ಮನೆಗಳ ಅವಶೇಷಗಳ ಅಡಿಯಲ್ಲಿ ಅಗೆದು ಮೃತದೇಹಗಳನ್ನು ರಕ್ಷಕರು ಹೊರತೆಗೆಯುತ್ತಿರುವುದನ್ನು ಟರ್ಕಿಯ ಜನರು ಹಿಮದಲ್ಲಿ ನಿಂತು ಆತಂಕದಲ್ಲಿ ನೋಡುತ್ತಿದ್ದಾರೆ.

ಸುಮಾರು 17.9 ಕಿಲೋಮೀಟರ್ (11 ಮೈಲುಗಳು) ಪ್ರದೇಶದಲ್ಲಿ ಸ್ಥಳೀಯ ಸಮಯ (0117 GMT) 04:17 ಕ್ಕೆ ಈ ಭೂಕಂಪ ಸಂಭವಿಸಿದೆ. 15 ನಿಮಿಷಗಳ ನಂತರ 6.7-ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು US ಏಜೆನ್ಸಿ ತಿಳಿಸಿದೆ.

ಟರ್ಕಿಯ ಎಎಫ್‌ಎಡಿ ತುರ್ತು ಸೇವಾ ಕೇಂದ್ರವು ಮೊದಲ ಭೂಕಂಪದ ತೀವ್ರತೆಯನ್ನು 7.4 ಎಂದು ಹೇಳಿದೆ.

ಈ ಪ್ರದೇಶದಲ್ಲಿ ಸಂಭವಿಸಿದ ಇವತ್ತಿನ ಭೂಕಂಪನವು, ಕನಿಷ್ಠ ಒಂದು ಶತಮಾನದಲ್ಲೇ ಅತ್ಯಂತ ಭಯಾನಕ ಭೂಕಂಪನ ಇದಾಗಿದೆ.

”ಭೂಕಂಪದಿಂದ ಸಂತ್ರಸ್ತರಾದ ನಮ್ಮ ಎಲ್ಲಾ ನಾಗರಿಕರ ಜೊತೆ ನಾವಿದ್ದೇವೆ. ನಾವು ಸಾಧ್ಯವಾದಷ್ಟು ಬೇಗ ಮತ್ತು ಕನಿಷ್ಠ ಹಾನಿಯೊಂದಿಗೆ ಈ ದುರಂತದ ಮೂಲಕ ಹೊರಬರುತ್ತೇವೆ ಎಂದು ನಾವು ಭಾವಿಸುತ್ತೇವೆ” ಎಂದು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ದಕ್ಷಿಣ ಟರ್ಕಿ ಮತ್ತು ನೆರೆಯ ಸಿರಿಯಾದ ಪ್ರಮುಖ ನಗರಗಳಾದ್ಯಂತ ಅನೇಕ ಕಟ್ಟಡಗಳು ಈ ಭೂಕಂಪನದಿಂದ ನೆಲಸಮಗೊಂಡವು. ಈ ಪ್ರದೇಶ ಈಗಾಗಲೇ ಅತಿ ಹೆಚ್ಚು ಹಿಂಸಾಚಾರದಿಂದ ನಲುಗಿಹೋಗಿದೆ. ಅನೇಕರ ಸಾವುನೋವುಗಳು ಸಂಭವಿಸಿವೆ. ಇದೀಗ ಭೂಕಂಪನದ ದುರಂತವೊಂದು ನಡೆದಿದೆ.

ಟರ್ಕಿಶ್ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ಚಿತ್ರಗಳು ಕಹ್ರಮನ್ಮರಸ್ ಮತ್ತು ನೆರೆಯ ಗಜಿಯಾಂಟೆಪ್ ನಗರದಲ್ಲಿ ನೆಲಸಮವಾದ ಕಟ್ಟಡಗಳ ಅವಶೇಷಗಳ ಮೂಲಕ ರಕ್ಷಕರು ಅಗೆಯುವುದನ್ನು ತೋರಿಸುತ್ತಿವೆ.

ಕಹ್ರಮನ್ಮರಸ್‌ನ ಒಂದು ಚಿತ್ರದಲ್ಲಿ ಆಕಾಶದೆತ್ತರಕ್ಕೆ ಬೆಂಕಿಯು ಹೊತ್ತಿಕೊಂಡಿರುವುದು ಕಂಡುಬಂದಿದೆ ಆದರೆ ಅದರ ಮೂಲವು ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಅದ್ಯಾಮಾನ್, ಮಾಲತ್ಯ ಮತ್ತು ದಿಯರ್‌ಬಕಿರ್ ನಗರಗಳಲ್ಲಿ ಕಟ್ಟಡಗಳು ಕುಸಿದಿವೆ ಎಂದು NTV ಮಾಧ್ಯಮ ಹೇಳಿದೆ..

ಮಧ್ಯ ಟರ್ಕಿಯ ಕೆಲವು ಭಾಗಗಳಲ್ಲಿ ಮತ್ತು ರಾಜಧಾನಿ ಅಂಕಾರಾದಲ್ಲಿಯೂ ಭೂಕಂಪದ ಅನುಭವವಾಗಿದೆ ಎಂದು ಸಿಎನ್‌ಎನ್ ಟರ್ಕ್ ಮಾಧ್ಯಮ ಹೇಳಿದೆ.

‘ಅತಿದೊಡ್ಡ ಭೂಕಂಪ’

ಸಿರಿಯಾದ ಪಶ್ಚಿಮ ಕರಾವಳಿಯಲ್ಲಿರುವ ಲಟಾಕಿಯಾ ಬಳಿ ಕಟ್ಟಡವೊಂದು ಕುಸಿದಿದೆ ಎಂದು ಸಿರಿಯನ್ ಸ್ಟೇಟ್ ಮಾಧ್ಯಮ ವರದಿ ಮಾಡಿದೆ.

ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಿಂದ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ಮಾಧ್ಯಮಗಳು ತಿಳಿಸಿವೆ.

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರು.

ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಟರ್ಕಿ ಕೂಡ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...