Homeಮುಖಪುಟಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

- Advertisement -
- Advertisement -

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ.

ಟರ್ಕಿಯ ಸ್ಥಳೀಯ ಅಧಿಕಾರಿಗಳು ಆರಂಭಿಕ ಸಾವಿನ ಸಂಖ್ಯೆ 53 ಎಂದು ಹೇಳಿದ್ದಾರೆ. ಆದರೆ ಇದು ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಏಕೆಂದರೆ ಎಲ್ಲರೂ ಮನೆಯಲ್ಲಿ ಮಲಗಿರುವಾಗ ಈ ಅವಾಂತರ ಸಂಭವಿಸಿರುವುದರಿಂದ ಕಟ್ಟಡ ನೆಲಸಮಗೊಂಡಿವೆ ಹಾಗಾಗಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ.

ಹಾನಿಗೊಳಗಾದ ಮನೆಗಳ ಅವಶೇಷಗಳ ಅಡಿಯಲ್ಲಿ ಅಗೆದು ಮೃತದೇಹಗಳನ್ನು ರಕ್ಷಕರು ಹೊರತೆಗೆಯುತ್ತಿರುವುದನ್ನು ಟರ್ಕಿಯ ಜನರು ಹಿಮದಲ್ಲಿ ನಿಂತು ಆತಂಕದಲ್ಲಿ ನೋಡುತ್ತಿದ್ದಾರೆ.

ಸುಮಾರು 17.9 ಕಿಲೋಮೀಟರ್ (11 ಮೈಲುಗಳು) ಪ್ರದೇಶದಲ್ಲಿ ಸ್ಥಳೀಯ ಸಮಯ (0117 GMT) 04:17 ಕ್ಕೆ ಈ ಭೂಕಂಪ ಸಂಭವಿಸಿದೆ. 15 ನಿಮಿಷಗಳ ನಂತರ 6.7-ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು US ಏಜೆನ್ಸಿ ತಿಳಿಸಿದೆ.

ಟರ್ಕಿಯ ಎಎಫ್‌ಎಡಿ ತುರ್ತು ಸೇವಾ ಕೇಂದ್ರವು ಮೊದಲ ಭೂಕಂಪದ ತೀವ್ರತೆಯನ್ನು 7.4 ಎಂದು ಹೇಳಿದೆ.

ಈ ಪ್ರದೇಶದಲ್ಲಿ ಸಂಭವಿಸಿದ ಇವತ್ತಿನ ಭೂಕಂಪನವು, ಕನಿಷ್ಠ ಒಂದು ಶತಮಾನದಲ್ಲೇ ಅತ್ಯಂತ ಭಯಾನಕ ಭೂಕಂಪನ ಇದಾಗಿದೆ.

”ಭೂಕಂಪದಿಂದ ಸಂತ್ರಸ್ತರಾದ ನಮ್ಮ ಎಲ್ಲಾ ನಾಗರಿಕರ ಜೊತೆ ನಾವಿದ್ದೇವೆ. ನಾವು ಸಾಧ್ಯವಾದಷ್ಟು ಬೇಗ ಮತ್ತು ಕನಿಷ್ಠ ಹಾನಿಯೊಂದಿಗೆ ಈ ದುರಂತದ ಮೂಲಕ ಹೊರಬರುತ್ತೇವೆ ಎಂದು ನಾವು ಭಾವಿಸುತ್ತೇವೆ” ಎಂದು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ದಕ್ಷಿಣ ಟರ್ಕಿ ಮತ್ತು ನೆರೆಯ ಸಿರಿಯಾದ ಪ್ರಮುಖ ನಗರಗಳಾದ್ಯಂತ ಅನೇಕ ಕಟ್ಟಡಗಳು ಈ ಭೂಕಂಪನದಿಂದ ನೆಲಸಮಗೊಂಡವು. ಈ ಪ್ರದೇಶ ಈಗಾಗಲೇ ಅತಿ ಹೆಚ್ಚು ಹಿಂಸಾಚಾರದಿಂದ ನಲುಗಿಹೋಗಿದೆ. ಅನೇಕರ ಸಾವುನೋವುಗಳು ಸಂಭವಿಸಿವೆ. ಇದೀಗ ಭೂಕಂಪನದ ದುರಂತವೊಂದು ನಡೆದಿದೆ.

ಟರ್ಕಿಶ್ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ಚಿತ್ರಗಳು ಕಹ್ರಮನ್ಮರಸ್ ಮತ್ತು ನೆರೆಯ ಗಜಿಯಾಂಟೆಪ್ ನಗರದಲ್ಲಿ ನೆಲಸಮವಾದ ಕಟ್ಟಡಗಳ ಅವಶೇಷಗಳ ಮೂಲಕ ರಕ್ಷಕರು ಅಗೆಯುವುದನ್ನು ತೋರಿಸುತ್ತಿವೆ.

ಕಹ್ರಮನ್ಮರಸ್‌ನ ಒಂದು ಚಿತ್ರದಲ್ಲಿ ಆಕಾಶದೆತ್ತರಕ್ಕೆ ಬೆಂಕಿಯು ಹೊತ್ತಿಕೊಂಡಿರುವುದು ಕಂಡುಬಂದಿದೆ ಆದರೆ ಅದರ ಮೂಲವು ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಅದ್ಯಾಮಾನ್, ಮಾಲತ್ಯ ಮತ್ತು ದಿಯರ್‌ಬಕಿರ್ ನಗರಗಳಲ್ಲಿ ಕಟ್ಟಡಗಳು ಕುಸಿದಿವೆ ಎಂದು NTV ಮಾಧ್ಯಮ ಹೇಳಿದೆ..

ಮಧ್ಯ ಟರ್ಕಿಯ ಕೆಲವು ಭಾಗಗಳಲ್ಲಿ ಮತ್ತು ರಾಜಧಾನಿ ಅಂಕಾರಾದಲ್ಲಿಯೂ ಭೂಕಂಪದ ಅನುಭವವಾಗಿದೆ ಎಂದು ಸಿಎನ್‌ಎನ್ ಟರ್ಕ್ ಮಾಧ್ಯಮ ಹೇಳಿದೆ.

‘ಅತಿದೊಡ್ಡ ಭೂಕಂಪ’

ಸಿರಿಯಾದ ಪಶ್ಚಿಮ ಕರಾವಳಿಯಲ್ಲಿರುವ ಲಟಾಕಿಯಾ ಬಳಿ ಕಟ್ಟಡವೊಂದು ಕುಸಿದಿದೆ ಎಂದು ಸಿರಿಯನ್ ಸ್ಟೇಟ್ ಮಾಧ್ಯಮ ವರದಿ ಮಾಡಿದೆ.

ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಿಂದ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ಮಾಧ್ಯಮಗಳು ತಿಳಿಸಿವೆ.

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರು.

ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಟರ್ಕಿ ಕೂಡ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...