Homeಮುಖಪುಟಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

- Advertisement -
- Advertisement -

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ.

ಟರ್ಕಿಯ ಸ್ಥಳೀಯ ಅಧಿಕಾರಿಗಳು ಆರಂಭಿಕ ಸಾವಿನ ಸಂಖ್ಯೆ 53 ಎಂದು ಹೇಳಿದ್ದಾರೆ. ಆದರೆ ಇದು ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಏಕೆಂದರೆ ಎಲ್ಲರೂ ಮನೆಯಲ್ಲಿ ಮಲಗಿರುವಾಗ ಈ ಅವಾಂತರ ಸಂಭವಿಸಿರುವುದರಿಂದ ಕಟ್ಟಡ ನೆಲಸಮಗೊಂಡಿವೆ ಹಾಗಾಗಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ.

ಹಾನಿಗೊಳಗಾದ ಮನೆಗಳ ಅವಶೇಷಗಳ ಅಡಿಯಲ್ಲಿ ಅಗೆದು ಮೃತದೇಹಗಳನ್ನು ರಕ್ಷಕರು ಹೊರತೆಗೆಯುತ್ತಿರುವುದನ್ನು ಟರ್ಕಿಯ ಜನರು ಹಿಮದಲ್ಲಿ ನಿಂತು ಆತಂಕದಲ್ಲಿ ನೋಡುತ್ತಿದ್ದಾರೆ.

ಸುಮಾರು 17.9 ಕಿಲೋಮೀಟರ್ (11 ಮೈಲುಗಳು) ಪ್ರದೇಶದಲ್ಲಿ ಸ್ಥಳೀಯ ಸಮಯ (0117 GMT) 04:17 ಕ್ಕೆ ಈ ಭೂಕಂಪ ಸಂಭವಿಸಿದೆ. 15 ನಿಮಿಷಗಳ ನಂತರ 6.7-ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು US ಏಜೆನ್ಸಿ ತಿಳಿಸಿದೆ.

ಟರ್ಕಿಯ ಎಎಫ್‌ಎಡಿ ತುರ್ತು ಸೇವಾ ಕೇಂದ್ರವು ಮೊದಲ ಭೂಕಂಪದ ತೀವ್ರತೆಯನ್ನು 7.4 ಎಂದು ಹೇಳಿದೆ.

ಈ ಪ್ರದೇಶದಲ್ಲಿ ಸಂಭವಿಸಿದ ಇವತ್ತಿನ ಭೂಕಂಪನವು, ಕನಿಷ್ಠ ಒಂದು ಶತಮಾನದಲ್ಲೇ ಅತ್ಯಂತ ಭಯಾನಕ ಭೂಕಂಪನ ಇದಾಗಿದೆ.

”ಭೂಕಂಪದಿಂದ ಸಂತ್ರಸ್ತರಾದ ನಮ್ಮ ಎಲ್ಲಾ ನಾಗರಿಕರ ಜೊತೆ ನಾವಿದ್ದೇವೆ. ನಾವು ಸಾಧ್ಯವಾದಷ್ಟು ಬೇಗ ಮತ್ತು ಕನಿಷ್ಠ ಹಾನಿಯೊಂದಿಗೆ ಈ ದುರಂತದ ಮೂಲಕ ಹೊರಬರುತ್ತೇವೆ ಎಂದು ನಾವು ಭಾವಿಸುತ್ತೇವೆ” ಎಂದು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ದಕ್ಷಿಣ ಟರ್ಕಿ ಮತ್ತು ನೆರೆಯ ಸಿರಿಯಾದ ಪ್ರಮುಖ ನಗರಗಳಾದ್ಯಂತ ಅನೇಕ ಕಟ್ಟಡಗಳು ಈ ಭೂಕಂಪನದಿಂದ ನೆಲಸಮಗೊಂಡವು. ಈ ಪ್ರದೇಶ ಈಗಾಗಲೇ ಅತಿ ಹೆಚ್ಚು ಹಿಂಸಾಚಾರದಿಂದ ನಲುಗಿಹೋಗಿದೆ. ಅನೇಕರ ಸಾವುನೋವುಗಳು ಸಂಭವಿಸಿವೆ. ಇದೀಗ ಭೂಕಂಪನದ ದುರಂತವೊಂದು ನಡೆದಿದೆ.

ಟರ್ಕಿಶ್ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ಚಿತ್ರಗಳು ಕಹ್ರಮನ್ಮರಸ್ ಮತ್ತು ನೆರೆಯ ಗಜಿಯಾಂಟೆಪ್ ನಗರದಲ್ಲಿ ನೆಲಸಮವಾದ ಕಟ್ಟಡಗಳ ಅವಶೇಷಗಳ ಮೂಲಕ ರಕ್ಷಕರು ಅಗೆಯುವುದನ್ನು ತೋರಿಸುತ್ತಿವೆ.

ಕಹ್ರಮನ್ಮರಸ್‌ನ ಒಂದು ಚಿತ್ರದಲ್ಲಿ ಆಕಾಶದೆತ್ತರಕ್ಕೆ ಬೆಂಕಿಯು ಹೊತ್ತಿಕೊಂಡಿರುವುದು ಕಂಡುಬಂದಿದೆ ಆದರೆ ಅದರ ಮೂಲವು ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಅದ್ಯಾಮಾನ್, ಮಾಲತ್ಯ ಮತ್ತು ದಿಯರ್‌ಬಕಿರ್ ನಗರಗಳಲ್ಲಿ ಕಟ್ಟಡಗಳು ಕುಸಿದಿವೆ ಎಂದು NTV ಮಾಧ್ಯಮ ಹೇಳಿದೆ..

ಮಧ್ಯ ಟರ್ಕಿಯ ಕೆಲವು ಭಾಗಗಳಲ್ಲಿ ಮತ್ತು ರಾಜಧಾನಿ ಅಂಕಾರಾದಲ್ಲಿಯೂ ಭೂಕಂಪದ ಅನುಭವವಾಗಿದೆ ಎಂದು ಸಿಎನ್‌ಎನ್ ಟರ್ಕ್ ಮಾಧ್ಯಮ ಹೇಳಿದೆ.

‘ಅತಿದೊಡ್ಡ ಭೂಕಂಪ’

ಸಿರಿಯಾದ ಪಶ್ಚಿಮ ಕರಾವಳಿಯಲ್ಲಿರುವ ಲಟಾಕಿಯಾ ಬಳಿ ಕಟ್ಟಡವೊಂದು ಕುಸಿದಿದೆ ಎಂದು ಸಿರಿಯನ್ ಸ್ಟೇಟ್ ಮಾಧ್ಯಮ ವರದಿ ಮಾಡಿದೆ.

ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಿಂದ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ಮಾಧ್ಯಮಗಳು ತಿಳಿಸಿವೆ.

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರು.

ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಟರ್ಕಿ ಕೂಡ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...