Homeಮುಖಪುಟಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

- Advertisement -
- Advertisement -

ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ಜನರಿಗೆ ರಾಜ್ಯ ಸರ್ಕಾರವು ಸಾಂಸ್ಥಿಕ ಕ್ವಾರಂಟೈನ್‌ ಅನ್ನು ಕಡ್ಡಾಯಗೊಳಿಸಿದೆ. ಕೇರಳದ ಪ್ರಯಾಣಿಕರು ಅಲ್ಲಿ ಒಂದು ವಾರದವರೆಗೆ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಮಂಗಳವಾರ ಹೇಳಿದ್ದಾರೆ.

ಲಸಿಕೆ ಹಾಕಿದ ಮತ್ತು ಆರ್‌ಟಿ-ಪಿಸಿಆರ್ ನಗೆಟಿವ್‌‌ ಪರೀಕ್ಷಾ ವರದಿಯನ್ನು ಹೊಂದಿರುವವರಿಗೂ ಈ ನಿಯಮ ಅನ್ವಯವಾಗುತ್ತದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಬೃಹತ್ ಪಾದಯಾತ್ರೆ ಆರಂಭಿಸಿದ ಬಿಜೆಪಿ: ಕೋವಿಡ್ ಉಲ್ಬಣದ ಆತಂಕ!

ಕೇರಳದಿಂದ ವಿಮಾನದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ. ಸಾಂಸ್ಥಿಕ ಕ್ವಾರಂಟೈನ್‌‌ಗೆ ಗೊತ್ತುಪಡಿಸಲಾಗಿರುವ ತಮ್ಮ ಆಯ್ಕೆಯ ಹೋಟೆಲ್ ಅನ್ನು ಈ ಪ್ರಯಾಣಿಕರು ಆಯ್ಕೆ ಮಾಡಿಕೊಳ್ಳಬಹುದು ಎಂದು ಸುಧಾಕರ್ ಹೇಳಿದ್ದಾರೆ.

ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡುವ ಇಂತಹ ಪ್ರಯಾಣಿಕರನ್ನು ಆರನೇ ದಿನದಂದು ಪರೀಕ್ಷಿಸಲಾಗುತ್ತದೆ ಮತ್ತು ಏಳನೇ ದಿನದಲ್ಲಿ ಕೊರೊನಾ ವರದಿ ನಗೆಟಿವ್‌‌ ಬಂದರೆ, ಅವರನ್ನು ಹೋಗಲು ಅನುಮತಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಕರಣಗಳ ಏರಿಕೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಕೇರಳದಲ್ಲಿ 19,622 ಹೊಸ ಪ್ರಕರಣಗಳು ಮತ್ತು 132 ಕೊರೊನಾ ಸಾವುಗಳು ದಾಖಲಾಗಿವೆ. ಭಾನುವಾರದಂದು ಅಲ್ಲಿ 29,836 ಹೊಸ ಪ್ರಕರಣಗಳು ಮತ್ತು 75 ಸಂಬಂಧಿತ ಸಾವುಗಳು ದಾಖಲಾಗಿದ್ದವು.

ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ರಾಜ್ಯ ಸರ್ಕಾರವು ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರದಂತಹ ಕೇರಳದ ಗಡಿ ಜಿಲ್ಲೆಗಳಲ್ಲಿ ಕೊರೊನಾ ತಡೆಗಟ್ಟುವಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಿ ಕಾರ್ಯತಂತ್ರ ರೂಪಿಸುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಹರಡುವುದನ್ನು ನಿಯಂತ್ರಿಸಲು ಗಡಿ ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಮುಂಬರುವ ಗಣೇಶ ಹಬ್ಬದ ಸಮಯದಲ್ಲಿ ಕೊರೊನಾ ಸಂಬಂಧಿತ ನಿರ್ಬಂಧಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ಆ ಸಮಯದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಹೆಚ್ಚಾಗಿದೆ. ಯಾವುದೇ ಸಾರ್ವಜನಿಕ ಸಮಾರಂಭಗಳು ನಡೆಯದಂತೆ ಆರೋಗ್ಯ ಇಲಾಖೆಯು ಒತ್ತಾಯಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...