Homeಮುಖಪುಟಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ...

ಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ…

- Advertisement -
- Advertisement -

ಪತ್ರಕರ್ತರ ರಕ್ಷಣಾ ಸಮಿತಿ(ಸಿಪಿಜೆ) 2023ರ ವರದಿಯನ್ನು ಬಿಡುಗಡೆ ಮಾಡಿದ್ದು, ಭಾರತದಲ್ಲಿ 7 ಮಾದ್ಯಮ ಪ್ರತಿನಿಧಿಗಳು ಜೈಲಿನಲ್ಲಿದ್ದು, ಅದರಲ್ಲಿ ಐವರಿಗೆ ಕಠಿಣ ಯುಎಪಿಎಯಡಿ ಜೈಲು ಶಿಕ್ಷೆ ನೀಡಲಾಗಿದೆ ಎಂದು  ತಿಳಿಸಿದೆ. ಮಾದ್ಯಮ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಮತ್ತು ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾರತದಲ್ಲಿ ಹೆಚ್ಚು ದಾಳಿ ನಡೆಯುತ್ತಿದೆ ಎಂಬುವುದನ್ನು ಈ ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

ಪತ್ರಕರ್ತರ ರಕ್ಷಣಾ ಸಮಿತಿಯ 2023ರ ಜೈಲು ಜನಗಣತಿ ವರದಿಯ ಪ್ರಕಾರ, ವಿಶ್ವದಾದ್ಯಂತ ಒಟ್ಟು 320 ಪತ್ರಕರ್ತರು ಜೈಲಿನಲ್ಲಿ ಬಂಧಿಸಲ್ಪಟ್ಟಿದ್ದಾರೆ. ಈ ಪೈಕಿ 7 ಮಾದ್ಯಮ ಪ್ರತಿನಿಧಿಗಳು ಭಾರತದಲ್ಲಿ ಬಂಧಿಯಾಗಿದ್ದಾರೆ. ಡಿಸೆಂಬರ್ 1ರವರೆಗೆ ದತ್ತಾಂಶವನ್ನು ಸಂಗ್ರಹಿಸಿ ವರದಿಯನ್ನು ಸಿದ್ದಪಡಿಸಲಾಗಿದ್ದು,  1992 ರ ಬಳಿಕ ಜೈಲಿನಲ್ಲಿರುವ ಪತ್ರಕರ್ತರ ಸಂಖ್ಯೆ ಇದು ಎರಡನೇ ಅತಿ ಹೆಚ್ಚು ಎಂದು ಹೇಳಿದೆ. ಈ ಅಂಕಿ ಅಂಶಗಳು ಇದು ಸ್ವತಂತ್ರ ಧ್ವನಿಗಳ ವಿರುದ್ಧದ ನಿರಂಕುಶಾಧಿಕಾರ ಮತ್ತು ಸರ್ಕಾರಗಳ ಕಟುವಾದ ನಿಲುವನ್ನು  ಸೂಚಿಸುತ್ತದೆ.

ಭಾರತದಲ್ಲಿ 7 ಪತ್ರಕರ್ತರು ಸೆರೆವಾಸದಲ್ಲಿದ್ದು, ಸತತ ಮೂರನೇ ವರ್ಷವೂ ದೇಶದಲ್ಲಿ ಪತ್ರಕರ್ತರ ಬಂಧನದಲ್ಲಿ ದಾಖಲೆಯ ಹೆಚ್ಚಳವನ್ನು ತೋರಿಸುತ್ತದೆ. ಕಳೆದ ವರ್ಷ ಮೂವರು ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿತ್ತು, ಆದರೆ ಆ ಬಳಿಕ ಮತ್ತೆ ಮೂವರನ್ನು ಬಂಧಿಸಲಾಗಿತ್ತು. ಭಾರತದಲ್ಲಿ ಜೈಲಿನಲ್ಲಿರುವ 7 ಪತ್ರಕರ್ತರಲ್ಲಿ ನಾಲ್ವರು ಜಮ್ಮು ಮತ್ತು ಕಾಶ್ಮೀರದವರಾಗಿದ್ದಾರೆ. ಐವರ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ.

ಪತ್ರಕರ್ತರ ಧ್ವನಿಯನ್ನು ಹತ್ತಿಕ್ಕಲು ಯುಎಪಿಎ,  ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯಿದೆ ಸೇರಿದಂತೆ ಭಯೋತ್ಪಾದನಾ-ವಿರೋಧಿ ಕಾನೂನುಗಳ ಬಳಕೆಯ ಬಗ್ಗೆ ಭಾರತವು ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗಳನ್ನು ಎದುರಿಸುತ್ತಿದೆ. ಪತ್ರಕರ್ತರ ಧ್ವನಿಗಳನ್ನು ಕಠಿಣ ಕಾನೂನುಗಳನ್ನು ವಿಧಿಸಿ ಹತ್ತಿಕ್ಕಲಾಗುತ್ತಿದೆ. ಪ್ರಜಾಪ್ರಭತ್ವ ದೇಶದಲ್ಲಿ ಪತ್ರಕರ್ತರನ್ನು ಬೆದರಿಸಲು ಸರಕಾರಿ ಸಂಸ್ಥೆಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಟೀಕೆ ಕೇಳಿ ಬರುತ್ತಿದೆ.

ಜೈಲಿನಲ್ಲಿರುವ ಪತ್ರಕರ್ತರು: 

ಆಸಿಫ್ ಸುಲ್ತಾನ್: ಇವರು ಕಾಶ್ಮೀರದ ಪತ್ರಕರ್ತರಾಗಿದ್ದು, ಶ್ರೀನಗರ ಮೂಲದ Kashmir Narrator( ಕಾಶ್ಮೀರ ನರೇಟರ್ಸ್‌) ನಿಯತಕಾಲಿಕದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಆಗಸ್ಟ್ 2018 ರಿಂದ ಜೈಲಿನಲ್ಲಿದ್ದಾರೆ. ಇವರ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆಸಿಫ್ ಸುಲ್ತಾನ್ ಉಗ್ರಗಾಮಿಗಳಿಗೆ ನೆರವು ನೀಡುತ್ತಿದ್ದಾರೆ ಮತ್ತು ಸಹಾನುಭೂತಿಯ ವರದಿಗಳನ್ನು ಪ್ರಕಟಿಸುತ್ತಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದರು. ಅವರ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಇದು ಆಧಾರರಹಿತ ಆರೋಪ ಎಂದು ಹೇಳಿದ್ದಾರೆ. ಆಸಿಫ್‌ ಸುಲ್ತಾನ್ ಬಂಧನದ ಬಳಿಕ ಅವರು ಕೆಲಸ ಮಾಡುತ್ತಿದ್ದ ನಿಯತಕಾಲಿಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

ಸಜಾದ್ ಗುಲ್:‘ದಿ ಕಾಶ್ಮೀರ್ ವಾಲಾ’ ಪೋರ್ಟಲ್‌ನ ಟ್ರೈನಿ ವರದಿಗಾರ ಮತ್ತು ವಿದ್ಯಾರ್ಥಿಯಾಗಿದ್ದ ಗುಲ್ ಅವರನ್ನು 2022ರ ಜನವರಿ 5ರಂದು ರಾತ್ರಿ ಬಂಡಿಪೋರಾ ಜಿಲ್ಲೆಯ ಹಾಜಿನ್ ಪ್ರದೇಶದ ಅವರ ಮನೆಯಿಂದ ಬಂಧಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120B (ಕ್ರಿಮಿನಲ್ ಪಿತೂರಿ), 153B ಮತ್ತು 505B ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ರೂಪೇಶ್ ಕುಮಾರ್ ಸಿಂಗ್: ಇವರು ಸ್ವತಂತ್ರ ಪತ್ರಕರ್ತರಾಗಿದ್ದು, ಜುಲೈ 2022 ರಿಂದ ಜೈಲಿನಲ್ಲಿದ್ದಾರೆ. ರೂಪೇಶ್ ಕುಮಾರ್ ಸಿಂಗ್ ಅವರು ಜಾರ್ಖಂಡ್‌ ಮೂಲದ ಪತ್ರಕರ್ತರಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಬುಡಕಟ್ಟು ಜನರ ಕಿರುಕುಳದ ಕುರಿತು ವರದಿಗೆ ಹೆಸರುವಾಸಿಯಾಗಿದ್ದರು.

ಗೌತಮ್ ನವ್ಲಾಖಾ; ಗೌತಮ್ ನವ್ಲಾಖಾ ಒಬ್ಬ ಭಾರತೀಯ ಮಾನವ ಹಕ್ಕುಗಳ ಕಾರ್ಯಕರ್ತ ಮತ್ತು ಪತ್ರಕರ್ತರಾಗಿದ್ದಾರೆ. ಅವರು ಕಾಶ್ಮೀರದಲ್ಲಿ ಸೇನೆ ನಡೆಸುವ ದೌರ್ಜನ್ಯಗಳ ಟೀಕಾಕಾರರಾಗಿದ್ದರು. ಅವರು ದೆಹಲಿಯ ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್‌ನ ಸದಸ್ಯರಾಗಿದ್ದಾರೆ. ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

ಪ್ರಬೀರ್ ಪುರ್ಕಾಯಸ್ಥ;

ನ್ಯೂಸ್‌ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥ ಅವರು ಕಳೆದ ವರ್ಷ ಅಕ್ಟೋಬರ್‌ನಿಂದ ಜೈಲಿನಲ್ಲಿದ್ದಾರೆ. ತಮ್ಮ ಸಂಸ್ಥೆಗೆ ಚೀನಾದಿಂದ ಆರ್ಥಿಕ ನೆರವು ಪಡೆದಿದ್ದಾರೆಂಬ ಆರೋಪದ ಮೇಲೆ ಯುಎಪಿಎ (ದೇಶದ್ರೋಹ) ಮತ್ತು ವಿದೇಶಿ ನಿಧಿ ಉಲ್ಲಂಘನೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅಕ್ಟೋಬರ್ 3ರಂದು ಅವರನ್ನು ಬಂಧಿಸಲಾಗಿತ್ತು.

ಮಜಿದ್ ಹೈದರಿ:

ಮಜಿದ್ ಹೈದರಿ ಜಮ್ಮು ಮತ್ತು ಕಾಶ್ಮೀರದ  ಸ್ವತಂತ್ರ ಪತ್ರಕರ್ತರಾಗಿದ್ದು, ಇವರನ್ನು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದು, ಆ ಬಳಿಕ ಅವರ ವಿರುದ್ಧ ಕಠಿಣ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇರ್ಫಾನ್ ಮೆಹರಾಜ್: 

ಇರ್ಫಾನ್ ಮೆಹರಾಜ್  ಕಾಶ್ಮೀರಿ ಮೂಲದ ಪತ್ರಕರ್ತರಾಗಿದ್ದು, ಅವರನ್ನು  ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಅಧಿಕಾರಿಗಳು  ಭಯೋತ್ಪಾದನೆ ಆರೋಪದಡಿಯಲ್ಲಿ ಬಂಧಿಸಿದ್ದಾರೆ. ನವೆಂಬರ್ 2021 ರಲ್ಲಿ “ಭಯೋತ್ಪಾದನೆ” ಮತ್ತು ಇತರ ಆರೋಪಗಳ ಮೇಲೆ ಪರ್ವೇಜ್ ಅವರನ್ನು ಬಂಧಿಸಲಾಯಿತು. ವಂದೆ ಮ್ಯಾಗಜೀನ್‌ನ ಸಂಸ್ಥಾಪಕ ಸಂಪಾದಕರಾಗಿರುವ ಮೆಹ್ರಾಜ್, TwoCircles.net ವೆಬ್‌ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಅಲ್ ಜಝೀರಾ ಸೇರಿದಂತೆ ಹಲವಾರು ಅಂತರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು.

ಪತ್ರಕರ್ತರನ್ನು ಜೈಲಿಗಟ್ಟಿರುವ ದೇಶಗಳ ಪೈಕಿ ಇರಾನ್‌ನೊಂದಿಗೆ ಭಾರತವು 6ನೇ ಸ್ಥಾನದಲ್ಲಿದೆ. ಅ.7ರಿಂದ  ಇಸ್ರೇಲ್-ಹಮಾಸ್‌ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ ವಿಶ್ವದಲ್ಲೇ ಅತಿ ಹೆಚ್ಚು ಪತ್ರಕರ್ತರನ್ನು  ಜೈಲಿಗಟ್ಟಿದ ದೇಶಗಳಲ್ಲಿ ಇಸ್ರೇಲ್‌ ಮುಂಚೂಣಿಯಲ್ಲಿದೆ ಎಂದು ಸಿಪಿಜೆ ವರದಿಯು ತಿಳಿಸಿದೆ.

ಇದನ್ನು ಓದಿ: ರಾಹುಲ್ ಗಾಂಧಿಯ ಲೋಕಸಭೆ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಪಿಐಎಲ್‌: ವಕೀಲನಿಗೆ ₹1ಲಕ್ಷ ದಂಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...