Homeಮುಖಪುಟಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ...

ಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ…

- Advertisement -
- Advertisement -

ಪತ್ರಕರ್ತರ ರಕ್ಷಣಾ ಸಮಿತಿ(ಸಿಪಿಜೆ) 2023ರ ವರದಿಯನ್ನು ಬಿಡುಗಡೆ ಮಾಡಿದ್ದು, ಭಾರತದಲ್ಲಿ 7 ಮಾದ್ಯಮ ಪ್ರತಿನಿಧಿಗಳು ಜೈಲಿನಲ್ಲಿದ್ದು, ಅದರಲ್ಲಿ ಐವರಿಗೆ ಕಠಿಣ ಯುಎಪಿಎಯಡಿ ಜೈಲು ಶಿಕ್ಷೆ ನೀಡಲಾಗಿದೆ ಎಂದು  ತಿಳಿಸಿದೆ. ಮಾದ್ಯಮ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಮತ್ತು ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾರತದಲ್ಲಿ ಹೆಚ್ಚು ದಾಳಿ ನಡೆಯುತ್ತಿದೆ ಎಂಬುವುದನ್ನು ಈ ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

ಪತ್ರಕರ್ತರ ರಕ್ಷಣಾ ಸಮಿತಿಯ 2023ರ ಜೈಲು ಜನಗಣತಿ ವರದಿಯ ಪ್ರಕಾರ, ವಿಶ್ವದಾದ್ಯಂತ ಒಟ್ಟು 320 ಪತ್ರಕರ್ತರು ಜೈಲಿನಲ್ಲಿ ಬಂಧಿಸಲ್ಪಟ್ಟಿದ್ದಾರೆ. ಈ ಪೈಕಿ 7 ಮಾದ್ಯಮ ಪ್ರತಿನಿಧಿಗಳು ಭಾರತದಲ್ಲಿ ಬಂಧಿಯಾಗಿದ್ದಾರೆ. ಡಿಸೆಂಬರ್ 1ರವರೆಗೆ ದತ್ತಾಂಶವನ್ನು ಸಂಗ್ರಹಿಸಿ ವರದಿಯನ್ನು ಸಿದ್ದಪಡಿಸಲಾಗಿದ್ದು,  1992 ರ ಬಳಿಕ ಜೈಲಿನಲ್ಲಿರುವ ಪತ್ರಕರ್ತರ ಸಂಖ್ಯೆ ಇದು ಎರಡನೇ ಅತಿ ಹೆಚ್ಚು ಎಂದು ಹೇಳಿದೆ. ಈ ಅಂಕಿ ಅಂಶಗಳು ಇದು ಸ್ವತಂತ್ರ ಧ್ವನಿಗಳ ವಿರುದ್ಧದ ನಿರಂಕುಶಾಧಿಕಾರ ಮತ್ತು ಸರ್ಕಾರಗಳ ಕಟುವಾದ ನಿಲುವನ್ನು  ಸೂಚಿಸುತ್ತದೆ.

ಭಾರತದಲ್ಲಿ 7 ಪತ್ರಕರ್ತರು ಸೆರೆವಾಸದಲ್ಲಿದ್ದು, ಸತತ ಮೂರನೇ ವರ್ಷವೂ ದೇಶದಲ್ಲಿ ಪತ್ರಕರ್ತರ ಬಂಧನದಲ್ಲಿ ದಾಖಲೆಯ ಹೆಚ್ಚಳವನ್ನು ತೋರಿಸುತ್ತದೆ. ಕಳೆದ ವರ್ಷ ಮೂವರು ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿತ್ತು, ಆದರೆ ಆ ಬಳಿಕ ಮತ್ತೆ ಮೂವರನ್ನು ಬಂಧಿಸಲಾಗಿತ್ತು. ಭಾರತದಲ್ಲಿ ಜೈಲಿನಲ್ಲಿರುವ 7 ಪತ್ರಕರ್ತರಲ್ಲಿ ನಾಲ್ವರು ಜಮ್ಮು ಮತ್ತು ಕಾಶ್ಮೀರದವರಾಗಿದ್ದಾರೆ. ಐವರ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ.

ಪತ್ರಕರ್ತರ ಧ್ವನಿಯನ್ನು ಹತ್ತಿಕ್ಕಲು ಯುಎಪಿಎ,  ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯಿದೆ ಸೇರಿದಂತೆ ಭಯೋತ್ಪಾದನಾ-ವಿರೋಧಿ ಕಾನೂನುಗಳ ಬಳಕೆಯ ಬಗ್ಗೆ ಭಾರತವು ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗಳನ್ನು ಎದುರಿಸುತ್ತಿದೆ. ಪತ್ರಕರ್ತರ ಧ್ವನಿಗಳನ್ನು ಕಠಿಣ ಕಾನೂನುಗಳನ್ನು ವಿಧಿಸಿ ಹತ್ತಿಕ್ಕಲಾಗುತ್ತಿದೆ. ಪ್ರಜಾಪ್ರಭತ್ವ ದೇಶದಲ್ಲಿ ಪತ್ರಕರ್ತರನ್ನು ಬೆದರಿಸಲು ಸರಕಾರಿ ಸಂಸ್ಥೆಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಟೀಕೆ ಕೇಳಿ ಬರುತ್ತಿದೆ.

ಜೈಲಿನಲ್ಲಿರುವ ಪತ್ರಕರ್ತರು: 

ಆಸಿಫ್ ಸುಲ್ತಾನ್: ಇವರು ಕಾಶ್ಮೀರದ ಪತ್ರಕರ್ತರಾಗಿದ್ದು, ಶ್ರೀನಗರ ಮೂಲದ Kashmir Narrator( ಕಾಶ್ಮೀರ ನರೇಟರ್ಸ್‌) ನಿಯತಕಾಲಿಕದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಆಗಸ್ಟ್ 2018 ರಿಂದ ಜೈಲಿನಲ್ಲಿದ್ದಾರೆ. ಇವರ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆಸಿಫ್ ಸುಲ್ತಾನ್ ಉಗ್ರಗಾಮಿಗಳಿಗೆ ನೆರವು ನೀಡುತ್ತಿದ್ದಾರೆ ಮತ್ತು ಸಹಾನುಭೂತಿಯ ವರದಿಗಳನ್ನು ಪ್ರಕಟಿಸುತ್ತಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದರು. ಅವರ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಇದು ಆಧಾರರಹಿತ ಆರೋಪ ಎಂದು ಹೇಳಿದ್ದಾರೆ. ಆಸಿಫ್‌ ಸುಲ್ತಾನ್ ಬಂಧನದ ಬಳಿಕ ಅವರು ಕೆಲಸ ಮಾಡುತ್ತಿದ್ದ ನಿಯತಕಾಲಿಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

ಸಜಾದ್ ಗುಲ್:‘ದಿ ಕಾಶ್ಮೀರ್ ವಾಲಾ’ ಪೋರ್ಟಲ್‌ನ ಟ್ರೈನಿ ವರದಿಗಾರ ಮತ್ತು ವಿದ್ಯಾರ್ಥಿಯಾಗಿದ್ದ ಗುಲ್ ಅವರನ್ನು 2022ರ ಜನವರಿ 5ರಂದು ರಾತ್ರಿ ಬಂಡಿಪೋರಾ ಜಿಲ್ಲೆಯ ಹಾಜಿನ್ ಪ್ರದೇಶದ ಅವರ ಮನೆಯಿಂದ ಬಂಧಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120B (ಕ್ರಿಮಿನಲ್ ಪಿತೂರಿ), 153B ಮತ್ತು 505B ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ರೂಪೇಶ್ ಕುಮಾರ್ ಸಿಂಗ್: ಇವರು ಸ್ವತಂತ್ರ ಪತ್ರಕರ್ತರಾಗಿದ್ದು, ಜುಲೈ 2022 ರಿಂದ ಜೈಲಿನಲ್ಲಿದ್ದಾರೆ. ರೂಪೇಶ್ ಕುಮಾರ್ ಸಿಂಗ್ ಅವರು ಜಾರ್ಖಂಡ್‌ ಮೂಲದ ಪತ್ರಕರ್ತರಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಬುಡಕಟ್ಟು ಜನರ ಕಿರುಕುಳದ ಕುರಿತು ವರದಿಗೆ ಹೆಸರುವಾಸಿಯಾಗಿದ್ದರು.

ಗೌತಮ್ ನವ್ಲಾಖಾ; ಗೌತಮ್ ನವ್ಲಾಖಾ ಒಬ್ಬ ಭಾರತೀಯ ಮಾನವ ಹಕ್ಕುಗಳ ಕಾರ್ಯಕರ್ತ ಮತ್ತು ಪತ್ರಕರ್ತರಾಗಿದ್ದಾರೆ. ಅವರು ಕಾಶ್ಮೀರದಲ್ಲಿ ಸೇನೆ ನಡೆಸುವ ದೌರ್ಜನ್ಯಗಳ ಟೀಕಾಕಾರರಾಗಿದ್ದರು. ಅವರು ದೆಹಲಿಯ ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್‌ನ ಸದಸ್ಯರಾಗಿದ್ದಾರೆ. ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

ಪ್ರಬೀರ್ ಪುರ್ಕಾಯಸ್ಥ;

ನ್ಯೂಸ್‌ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥ ಅವರು ಕಳೆದ ವರ್ಷ ಅಕ್ಟೋಬರ್‌ನಿಂದ ಜೈಲಿನಲ್ಲಿದ್ದಾರೆ. ತಮ್ಮ ಸಂಸ್ಥೆಗೆ ಚೀನಾದಿಂದ ಆರ್ಥಿಕ ನೆರವು ಪಡೆದಿದ್ದಾರೆಂಬ ಆರೋಪದ ಮೇಲೆ ಯುಎಪಿಎ (ದೇಶದ್ರೋಹ) ಮತ್ತು ವಿದೇಶಿ ನಿಧಿ ಉಲ್ಲಂಘನೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅಕ್ಟೋಬರ್ 3ರಂದು ಅವರನ್ನು ಬಂಧಿಸಲಾಗಿತ್ತು.

ಮಜಿದ್ ಹೈದರಿ:

ಮಜಿದ್ ಹೈದರಿ ಜಮ್ಮು ಮತ್ತು ಕಾಶ್ಮೀರದ  ಸ್ವತಂತ್ರ ಪತ್ರಕರ್ತರಾಗಿದ್ದು, ಇವರನ್ನು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದು, ಆ ಬಳಿಕ ಅವರ ವಿರುದ್ಧ ಕಠಿಣ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇರ್ಫಾನ್ ಮೆಹರಾಜ್: 

ಇರ್ಫಾನ್ ಮೆಹರಾಜ್  ಕಾಶ್ಮೀರಿ ಮೂಲದ ಪತ್ರಕರ್ತರಾಗಿದ್ದು, ಅವರನ್ನು  ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಅಧಿಕಾರಿಗಳು  ಭಯೋತ್ಪಾದನೆ ಆರೋಪದಡಿಯಲ್ಲಿ ಬಂಧಿಸಿದ್ದಾರೆ. ನವೆಂಬರ್ 2021 ರಲ್ಲಿ “ಭಯೋತ್ಪಾದನೆ” ಮತ್ತು ಇತರ ಆರೋಪಗಳ ಮೇಲೆ ಪರ್ವೇಜ್ ಅವರನ್ನು ಬಂಧಿಸಲಾಯಿತು. ವಂದೆ ಮ್ಯಾಗಜೀನ್‌ನ ಸಂಸ್ಥಾಪಕ ಸಂಪಾದಕರಾಗಿರುವ ಮೆಹ್ರಾಜ್, TwoCircles.net ವೆಬ್‌ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಅಲ್ ಜಝೀರಾ ಸೇರಿದಂತೆ ಹಲವಾರು ಅಂತರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು.

ಪತ್ರಕರ್ತರನ್ನು ಜೈಲಿಗಟ್ಟಿರುವ ದೇಶಗಳ ಪೈಕಿ ಇರಾನ್‌ನೊಂದಿಗೆ ಭಾರತವು 6ನೇ ಸ್ಥಾನದಲ್ಲಿದೆ. ಅ.7ರಿಂದ  ಇಸ್ರೇಲ್-ಹಮಾಸ್‌ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ ವಿಶ್ವದಲ್ಲೇ ಅತಿ ಹೆಚ್ಚು ಪತ್ರಕರ್ತರನ್ನು  ಜೈಲಿಗಟ್ಟಿದ ದೇಶಗಳಲ್ಲಿ ಇಸ್ರೇಲ್‌ ಮುಂಚೂಣಿಯಲ್ಲಿದೆ ಎಂದು ಸಿಪಿಜೆ ವರದಿಯು ತಿಳಿಸಿದೆ.

ಇದನ್ನು ಓದಿ: ರಾಹುಲ್ ಗಾಂಧಿಯ ಲೋಕಸಭೆ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಪಿಐಎಲ್‌: ವಕೀಲನಿಗೆ ₹1ಲಕ್ಷ ದಂಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...