HomeUncategorizedಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

- Advertisement -
- Advertisement -

ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಹೊರಗುಳಿದಿರುವ 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಸೇರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ, ಅಂದರೆ ಬರೊಬ್ಬರಿ 36% ಜನ ಮುಸ್ಲಿಮರು ಪೌರತ್ವದಿಂದ ಹೊರಗುಳಿದಿದ್ದಾರೆ ಎನ್ನುವುದು ಬಯಲಾಗಿದೆ.

ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, 5 ಲಕ್ಷ ಬಂಗಾಳಿ ಹಿಂದೂಗಳು, 2 ಲಕ್ಷ ಅಸ್ಸಾಮಿ ಹಿಂದೂ ಗುಂಪುಗಳಾದ ಕೋಚ್-ರಾಜ್‌ಬೊಂಗ್‌ಶಿ, ದಾಸ್, ಕಲಿತಾ ಮತ್ತು ಸರ್ಮಾ (ಅಸ್ಸಾಮಿ) ಮತ್ತು 1.5 ಲಕ್ಷ ಗೂರ್ಖಾಗಳನ್ನು ರಿಜಿಸ್ಟರ್‌ನಿಂದ ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

ಅಸ್ಸಾಂ ಆಗಸ್ಟ್ 31, 2019ರಂದು ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಿತ್ತು. ರಾಜ್ಯದಲ್ಲಿ ವಾಸಿಸುವ ದಾಖಲೆ ರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಈ ನೋಂದಾವಣಿಯನ್ನು ಮಾಡಲಾಗಿದೆ ಎಂದು ಅಸ್ಸಾಂ ಸರಕಾರ ಹೇಳಿಕೊಂಡಿದೆ. ಅಲ್ಲಿನ ನಿವಾಸಿಗಳು ತಾವು ಅಥವಾ ತಮ್ಮ ಪೂರ್ವಜರು ಅಸ್ಸಾಂನ್ನು ಮಾರ್ಚ್ 24, 1971ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದೇವೆ ಎಂದು ಸಾಬೀತು ಮಾಡಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ. ಮಾಹಿತಿಯಲ್ಲಿ 15.5 ಲಕ್ಷ ಜನರ ಬಗ್ಗೆ ಸಿಎಂ ಉಲ್ಲೇಖಿಸಿದ್ದಾರೆ, ಆದರೆ ಇನ್ನುಳಿದ 3.5 ಲಕ್ಷ ವ್ಯಕ್ತಿಗಳು ಯಾರು ಎಂಬುವುದು ಸ್ಪಷ್ಟವಾಗಿ ತಿಳಿಸಿಲ್ಲ. ಸುಮಾರು ಐದು ಲಕ್ಷದಿಂದ ಆರು ಲಕ್ಷ ಜನರು 1971ರ ಮೊದಲು ಧಾರ್ಮಿಕ ಕಿರುಕುಳದ ಕಾರಣದಿಂದ ಬಾಂಗ್ಲಾದೇಶದಿಂದ ವಲಸೆ ಬಂದವರು ಎಂದು ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ರಿಜಿಸ್ಟರ್‌ನಿಂದ ಹೊರಗಿಡಲ್ಪಟ್ಟವರಲ್ಲಿ ಮೂರು ಲಕ್ಷದಿಂದ ಆರು ಲಕ್ಷ ಜನರು ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು 2014ರ ಡಿಸೆಂಬರ್ 31ರ ಒಳಗೆ ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮುಸ್ಲಿಮರನ್ನು ಹೊರತುಪಡಿಸಿ ಆರು ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ತ್ವರಿತವಾಗಿ ನೀಡುವ ಗುರಿಯನ್ನು ಹೊಂದಿದೆ. ಪೌರತ್ವ ತಿದ್ದುಪಡಿ ಕಾಯಿದೆಯಡಿಯಲ್ಲಿ ರಾಜ್ಯವು ಕಡಿಮೆ ಸಂಖ್ಯೆಯ ಅರ್ಜಿಗಳನ್ನು ಪಡೆಯಲಿದೆ. ರಾಷ್ಟ್ರೀಯ ಪೌರತ್ವ ನೋಂದಣಿಗೆ ತಮ್ಮ ಹೆಸರನ್ನು ಸೇರಿಸಲು ಅರ್ಜಿ ಸಲ್ಲಿಸದಿರುವವರು ಪೌರತ್ವ ತಿದ್ದುಪಡಿ ಕಾಯ್ದೆಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಕಾಯ್ದೆಯಲ್ಲಿ ನಿರ್ದಿಷ್ಟ ದಿನಾಂಕದ ಬಗ್ಗೆ ಉಲ್ಲೇಖವಿದೆ. ಪೌರತ್ವ ತಿದ್ದುಪಡಿ ಕಾಯಿದೆಯು ಕಟ್-ಆಫ್ ದಿನಾಂಕದ ಮೊದಲು ದೇಶಕ್ಕೆ ಬಂದಿರುವ ಪುರಾವೆಗಳನ್ನು ಒದಗಿಸಬೇಕು ಎಂದು ಬಹಳ ಸ್ಪಷ್ಟವಾಗಿದೆ. ಯಾರಾದರೂ ರಾಷ್ಟ್ರೀಯ ನಾಗರಿಕರ ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ, ಅವನು ಅಥವಾ ಅವಳು 2014ರ ಮೊದಲು ಭಾರತಕ್ಕೆ ಬಂದಿಲ್ಲ ಎಂದರ್ಥ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ ಕಾರ್ಯವನ್ನು ಇದುವರೆಗೆ ಅಸ್ಸಾಂನಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ನವೆಂಬರ್ 2019ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ನಾಗರಿಕರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭಾರತದಾದ್ಯಂತ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದರು. ಈ ವೇಳೆ ವ್ಯಾಪಕ ವಿರೋಧ ಮತ್ತು ಪ್ರತಿಭಟನೆ ಭುಗಿಲೆದ್ದಿತ್ತು.

ರಾಷ್ಟ್ರೀಯ ಪೌರತ್ವ ನೋಂದಣಿಯು (ಎನ್‌ಆರ್‌ಸಿ) ದೇಶದ ಎಲ್ಲಾ ನಾಗರಿಕರ ವಿವರವನ್ನು ಒಳಗೊಂಡ ಪಟ್ಟಿಯಾಗಿದೆ. 1955ರ ಪೌರತ್ವ ಕಾಯ್ದೆಯಲ್ಲೇ (18ನೇ ಸೆಕ್ಷನ್‌ನ 1 ಮತ್ತು 2ನೇ ಉಪಸೆಕ್ಷನ್‌ಗಳು) ಎನ್‌ಆರ್‌ಸಿ ರಚನೆ ಮತ್ತು ನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ರಕಾರ 2003ರಲ್ಲಿ ವಾಜಪೇಯಿ ಸರ್ಕಾರವು ‘ರಾಷ್ಟ್ರೀಯ ಪೌರತ್ವ ನೋಂದಣಿ ನಿಯಮಗಳನ್ನು’ ರೂಪಿಸಿದೆ. ಈ ನಿಯಮಗಳ ಪ್ರಕಾರ ಅಸ್ಸಾಂನಲ್ಲಿ ಎನ್‌ಆರ್‌ಸಿ ಜಾರಿಗೆ ತರಲಾಗಿದೆ. ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ತಂದರೂ, ಈ ನಿಯಮಗಳನ್ನೇ ಅನುಸರಿಸಬೇಕಾಗುತ್ತದೆ. ಇಲ್ಲದಿದ್ದರೆ ತಿದ್ದುಪಡಿ ತಂದು, ನೂತನ ನಿಯಮ ರೂಪಿಸಬೇಕಾಗುತ್ತದೆ.

‘ಎನ್‌ಆರ್‌ಸಿ ಅಂದರೆ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್’ ಭಾರತ ದೇಶದಲ್ಲಿ ಇರುವ ಎಲ್ಲಾ ಪ್ರಜೆಗಳೂ ತಾವು ಈ ದೇಶದವರು ಎಂದು ಸಾಬೀತು ಮಾಡಬೇಕು. ಒಂದು ವೇಳೆ ತಾವು ಭಾರತದ ಮೂಲದವರು ಎಂದು ಸಾಬೀತು ಮಾಡಲು ಸಾಧ್ಯವಾಗದವರನ್ನು ಸರ್ಕಾರ ಪ್ರತ್ಯೇಕ ಕೇಂದ್ರಗಳಲ್ಲಿ ಬಂಧಿಸಿ ಇಡುತ್ತೆ. ಈ ರೀತಿ ಬಂಧನದಲ್ಲಿ ಇರುವ ವಲಸಿಗರು ಸಿಎಎ ಕಾಯ್ದೆ ಅನ್ವಯ ಭಾರತದ ಪೌರತ್ವ ಪಡೆಯಲು ಅರ್ಹರೇ ಎಂದು ಪರಿಶೀಲನೆ ಮಾಡಲಿದೆ.

ಇದನ್ನು ಓದಿ: ಮಾ.21ರೊಳಗೆ ಚುನಾವಣಾ ಬಾಂಡ್‌ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಗೊಳಿಸಿ: ಸುಪ್ರೀಂಕೋರ್ಟ್‌ನಿಂದ ಎಸ್‌ಬಿಐಗೆ ಖಡಕ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...