HomeUncategorizedಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

- Advertisement -
- Advertisement -

ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಹೊರಗುಳಿದಿರುವ 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಸೇರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ, ಅಂದರೆ ಬರೊಬ್ಬರಿ 36% ಜನ ಮುಸ್ಲಿಮರು ಪೌರತ್ವದಿಂದ ಹೊರಗುಳಿದಿದ್ದಾರೆ ಎನ್ನುವುದು ಬಯಲಾಗಿದೆ.

ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, 5 ಲಕ್ಷ ಬಂಗಾಳಿ ಹಿಂದೂಗಳು, 2 ಲಕ್ಷ ಅಸ್ಸಾಮಿ ಹಿಂದೂ ಗುಂಪುಗಳಾದ ಕೋಚ್-ರಾಜ್‌ಬೊಂಗ್‌ಶಿ, ದಾಸ್, ಕಲಿತಾ ಮತ್ತು ಸರ್ಮಾ (ಅಸ್ಸಾಮಿ) ಮತ್ತು 1.5 ಲಕ್ಷ ಗೂರ್ಖಾಗಳನ್ನು ರಿಜಿಸ್ಟರ್‌ನಿಂದ ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

ಅಸ್ಸಾಂ ಆಗಸ್ಟ್ 31, 2019ರಂದು ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಿತ್ತು. ರಾಜ್ಯದಲ್ಲಿ ವಾಸಿಸುವ ದಾಖಲೆ ರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಈ ನೋಂದಾವಣಿಯನ್ನು ಮಾಡಲಾಗಿದೆ ಎಂದು ಅಸ್ಸಾಂ ಸರಕಾರ ಹೇಳಿಕೊಂಡಿದೆ. ಅಲ್ಲಿನ ನಿವಾಸಿಗಳು ತಾವು ಅಥವಾ ತಮ್ಮ ಪೂರ್ವಜರು ಅಸ್ಸಾಂನ್ನು ಮಾರ್ಚ್ 24, 1971ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದೇವೆ ಎಂದು ಸಾಬೀತು ಮಾಡಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ. ಮಾಹಿತಿಯಲ್ಲಿ 15.5 ಲಕ್ಷ ಜನರ ಬಗ್ಗೆ ಸಿಎಂ ಉಲ್ಲೇಖಿಸಿದ್ದಾರೆ, ಆದರೆ ಇನ್ನುಳಿದ 3.5 ಲಕ್ಷ ವ್ಯಕ್ತಿಗಳು ಯಾರು ಎಂಬುವುದು ಸ್ಪಷ್ಟವಾಗಿ ತಿಳಿಸಿಲ್ಲ. ಸುಮಾರು ಐದು ಲಕ್ಷದಿಂದ ಆರು ಲಕ್ಷ ಜನರು 1971ರ ಮೊದಲು ಧಾರ್ಮಿಕ ಕಿರುಕುಳದ ಕಾರಣದಿಂದ ಬಾಂಗ್ಲಾದೇಶದಿಂದ ವಲಸೆ ಬಂದವರು ಎಂದು ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ರಿಜಿಸ್ಟರ್‌ನಿಂದ ಹೊರಗಿಡಲ್ಪಟ್ಟವರಲ್ಲಿ ಮೂರು ಲಕ್ಷದಿಂದ ಆರು ಲಕ್ಷ ಜನರು ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು 2014ರ ಡಿಸೆಂಬರ್ 31ರ ಒಳಗೆ ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮುಸ್ಲಿಮರನ್ನು ಹೊರತುಪಡಿಸಿ ಆರು ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ತ್ವರಿತವಾಗಿ ನೀಡುವ ಗುರಿಯನ್ನು ಹೊಂದಿದೆ. ಪೌರತ್ವ ತಿದ್ದುಪಡಿ ಕಾಯಿದೆಯಡಿಯಲ್ಲಿ ರಾಜ್ಯವು ಕಡಿಮೆ ಸಂಖ್ಯೆಯ ಅರ್ಜಿಗಳನ್ನು ಪಡೆಯಲಿದೆ. ರಾಷ್ಟ್ರೀಯ ಪೌರತ್ವ ನೋಂದಣಿಗೆ ತಮ್ಮ ಹೆಸರನ್ನು ಸೇರಿಸಲು ಅರ್ಜಿ ಸಲ್ಲಿಸದಿರುವವರು ಪೌರತ್ವ ತಿದ್ದುಪಡಿ ಕಾಯ್ದೆಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಕಾಯ್ದೆಯಲ್ಲಿ ನಿರ್ದಿಷ್ಟ ದಿನಾಂಕದ ಬಗ್ಗೆ ಉಲ್ಲೇಖವಿದೆ. ಪೌರತ್ವ ತಿದ್ದುಪಡಿ ಕಾಯಿದೆಯು ಕಟ್-ಆಫ್ ದಿನಾಂಕದ ಮೊದಲು ದೇಶಕ್ಕೆ ಬಂದಿರುವ ಪುರಾವೆಗಳನ್ನು ಒದಗಿಸಬೇಕು ಎಂದು ಬಹಳ ಸ್ಪಷ್ಟವಾಗಿದೆ. ಯಾರಾದರೂ ರಾಷ್ಟ್ರೀಯ ನಾಗರಿಕರ ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ, ಅವನು ಅಥವಾ ಅವಳು 2014ರ ಮೊದಲು ಭಾರತಕ್ಕೆ ಬಂದಿಲ್ಲ ಎಂದರ್ಥ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ ಕಾರ್ಯವನ್ನು ಇದುವರೆಗೆ ಅಸ್ಸಾಂನಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ನವೆಂಬರ್ 2019ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ನಾಗರಿಕರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭಾರತದಾದ್ಯಂತ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದರು. ಈ ವೇಳೆ ವ್ಯಾಪಕ ವಿರೋಧ ಮತ್ತು ಪ್ರತಿಭಟನೆ ಭುಗಿಲೆದ್ದಿತ್ತು.

ರಾಷ್ಟ್ರೀಯ ಪೌರತ್ವ ನೋಂದಣಿಯು (ಎನ್‌ಆರ್‌ಸಿ) ದೇಶದ ಎಲ್ಲಾ ನಾಗರಿಕರ ವಿವರವನ್ನು ಒಳಗೊಂಡ ಪಟ್ಟಿಯಾಗಿದೆ. 1955ರ ಪೌರತ್ವ ಕಾಯ್ದೆಯಲ್ಲೇ (18ನೇ ಸೆಕ್ಷನ್‌ನ 1 ಮತ್ತು 2ನೇ ಉಪಸೆಕ್ಷನ್‌ಗಳು) ಎನ್‌ಆರ್‌ಸಿ ರಚನೆ ಮತ್ತು ನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ರಕಾರ 2003ರಲ್ಲಿ ವಾಜಪೇಯಿ ಸರ್ಕಾರವು ‘ರಾಷ್ಟ್ರೀಯ ಪೌರತ್ವ ನೋಂದಣಿ ನಿಯಮಗಳನ್ನು’ ರೂಪಿಸಿದೆ. ಈ ನಿಯಮಗಳ ಪ್ರಕಾರ ಅಸ್ಸಾಂನಲ್ಲಿ ಎನ್‌ಆರ್‌ಸಿ ಜಾರಿಗೆ ತರಲಾಗಿದೆ. ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ತಂದರೂ, ಈ ನಿಯಮಗಳನ್ನೇ ಅನುಸರಿಸಬೇಕಾಗುತ್ತದೆ. ಇಲ್ಲದಿದ್ದರೆ ತಿದ್ದುಪಡಿ ತಂದು, ನೂತನ ನಿಯಮ ರೂಪಿಸಬೇಕಾಗುತ್ತದೆ.

‘ಎನ್‌ಆರ್‌ಸಿ ಅಂದರೆ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್’ ಭಾರತ ದೇಶದಲ್ಲಿ ಇರುವ ಎಲ್ಲಾ ಪ್ರಜೆಗಳೂ ತಾವು ಈ ದೇಶದವರು ಎಂದು ಸಾಬೀತು ಮಾಡಬೇಕು. ಒಂದು ವೇಳೆ ತಾವು ಭಾರತದ ಮೂಲದವರು ಎಂದು ಸಾಬೀತು ಮಾಡಲು ಸಾಧ್ಯವಾಗದವರನ್ನು ಸರ್ಕಾರ ಪ್ರತ್ಯೇಕ ಕೇಂದ್ರಗಳಲ್ಲಿ ಬಂಧಿಸಿ ಇಡುತ್ತೆ. ಈ ರೀತಿ ಬಂಧನದಲ್ಲಿ ಇರುವ ವಲಸಿಗರು ಸಿಎಎ ಕಾಯ್ದೆ ಅನ್ವಯ ಭಾರತದ ಪೌರತ್ವ ಪಡೆಯಲು ಅರ್ಹರೇ ಎಂದು ಪರಿಶೀಲನೆ ಮಾಡಲಿದೆ.

ಇದನ್ನು ಓದಿ: ಮಾ.21ರೊಳಗೆ ಚುನಾವಣಾ ಬಾಂಡ್‌ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಗೊಳಿಸಿ: ಸುಪ್ರೀಂಕೋರ್ಟ್‌ನಿಂದ ಎಸ್‌ಬಿಐಗೆ ಖಡಕ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...