HomeUncategorizedಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

- Advertisement -
- Advertisement -

ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಹೊರಗುಳಿದಿರುವ 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಸೇರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ, ಅಂದರೆ ಬರೊಬ್ಬರಿ 36% ಜನ ಮುಸ್ಲಿಮರು ಪೌರತ್ವದಿಂದ ಹೊರಗುಳಿದಿದ್ದಾರೆ ಎನ್ನುವುದು ಬಯಲಾಗಿದೆ.

ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, 5 ಲಕ್ಷ ಬಂಗಾಳಿ ಹಿಂದೂಗಳು, 2 ಲಕ್ಷ ಅಸ್ಸಾಮಿ ಹಿಂದೂ ಗುಂಪುಗಳಾದ ಕೋಚ್-ರಾಜ್‌ಬೊಂಗ್‌ಶಿ, ದಾಸ್, ಕಲಿತಾ ಮತ್ತು ಸರ್ಮಾ (ಅಸ್ಸಾಮಿ) ಮತ್ತು 1.5 ಲಕ್ಷ ಗೂರ್ಖಾಗಳನ್ನು ರಿಜಿಸ್ಟರ್‌ನಿಂದ ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

ಅಸ್ಸಾಂ ಆಗಸ್ಟ್ 31, 2019ರಂದು ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಿತ್ತು. ರಾಜ್ಯದಲ್ಲಿ ವಾಸಿಸುವ ದಾಖಲೆ ರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಈ ನೋಂದಾವಣಿಯನ್ನು ಮಾಡಲಾಗಿದೆ ಎಂದು ಅಸ್ಸಾಂ ಸರಕಾರ ಹೇಳಿಕೊಂಡಿದೆ. ಅಲ್ಲಿನ ನಿವಾಸಿಗಳು ತಾವು ಅಥವಾ ತಮ್ಮ ಪೂರ್ವಜರು ಅಸ್ಸಾಂನ್ನು ಮಾರ್ಚ್ 24, 1971ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದೇವೆ ಎಂದು ಸಾಬೀತು ಮಾಡಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ. ಮಾಹಿತಿಯಲ್ಲಿ 15.5 ಲಕ್ಷ ಜನರ ಬಗ್ಗೆ ಸಿಎಂ ಉಲ್ಲೇಖಿಸಿದ್ದಾರೆ, ಆದರೆ ಇನ್ನುಳಿದ 3.5 ಲಕ್ಷ ವ್ಯಕ್ತಿಗಳು ಯಾರು ಎಂಬುವುದು ಸ್ಪಷ್ಟವಾಗಿ ತಿಳಿಸಿಲ್ಲ. ಸುಮಾರು ಐದು ಲಕ್ಷದಿಂದ ಆರು ಲಕ್ಷ ಜನರು 1971ರ ಮೊದಲು ಧಾರ್ಮಿಕ ಕಿರುಕುಳದ ಕಾರಣದಿಂದ ಬಾಂಗ್ಲಾದೇಶದಿಂದ ವಲಸೆ ಬಂದವರು ಎಂದು ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ರಿಜಿಸ್ಟರ್‌ನಿಂದ ಹೊರಗಿಡಲ್ಪಟ್ಟವರಲ್ಲಿ ಮೂರು ಲಕ್ಷದಿಂದ ಆರು ಲಕ್ಷ ಜನರು ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು 2014ರ ಡಿಸೆಂಬರ್ 31ರ ಒಳಗೆ ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮುಸ್ಲಿಮರನ್ನು ಹೊರತುಪಡಿಸಿ ಆರು ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ತ್ವರಿತವಾಗಿ ನೀಡುವ ಗುರಿಯನ್ನು ಹೊಂದಿದೆ. ಪೌರತ್ವ ತಿದ್ದುಪಡಿ ಕಾಯಿದೆಯಡಿಯಲ್ಲಿ ರಾಜ್ಯವು ಕಡಿಮೆ ಸಂಖ್ಯೆಯ ಅರ್ಜಿಗಳನ್ನು ಪಡೆಯಲಿದೆ. ರಾಷ್ಟ್ರೀಯ ಪೌರತ್ವ ನೋಂದಣಿಗೆ ತಮ್ಮ ಹೆಸರನ್ನು ಸೇರಿಸಲು ಅರ್ಜಿ ಸಲ್ಲಿಸದಿರುವವರು ಪೌರತ್ವ ತಿದ್ದುಪಡಿ ಕಾಯ್ದೆಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಕಾಯ್ದೆಯಲ್ಲಿ ನಿರ್ದಿಷ್ಟ ದಿನಾಂಕದ ಬಗ್ಗೆ ಉಲ್ಲೇಖವಿದೆ. ಪೌರತ್ವ ತಿದ್ದುಪಡಿ ಕಾಯಿದೆಯು ಕಟ್-ಆಫ್ ದಿನಾಂಕದ ಮೊದಲು ದೇಶಕ್ಕೆ ಬಂದಿರುವ ಪುರಾವೆಗಳನ್ನು ಒದಗಿಸಬೇಕು ಎಂದು ಬಹಳ ಸ್ಪಷ್ಟವಾಗಿದೆ. ಯಾರಾದರೂ ರಾಷ್ಟ್ರೀಯ ನಾಗರಿಕರ ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ, ಅವನು ಅಥವಾ ಅವಳು 2014ರ ಮೊದಲು ಭಾರತಕ್ಕೆ ಬಂದಿಲ್ಲ ಎಂದರ್ಥ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ ಕಾರ್ಯವನ್ನು ಇದುವರೆಗೆ ಅಸ್ಸಾಂನಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ನವೆಂಬರ್ 2019ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ನಾಗರಿಕರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭಾರತದಾದ್ಯಂತ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದರು. ಈ ವೇಳೆ ವ್ಯಾಪಕ ವಿರೋಧ ಮತ್ತು ಪ್ರತಿಭಟನೆ ಭುಗಿಲೆದ್ದಿತ್ತು.

ರಾಷ್ಟ್ರೀಯ ಪೌರತ್ವ ನೋಂದಣಿಯು (ಎನ್‌ಆರ್‌ಸಿ) ದೇಶದ ಎಲ್ಲಾ ನಾಗರಿಕರ ವಿವರವನ್ನು ಒಳಗೊಂಡ ಪಟ್ಟಿಯಾಗಿದೆ. 1955ರ ಪೌರತ್ವ ಕಾಯ್ದೆಯಲ್ಲೇ (18ನೇ ಸೆಕ್ಷನ್‌ನ 1 ಮತ್ತು 2ನೇ ಉಪಸೆಕ್ಷನ್‌ಗಳು) ಎನ್‌ಆರ್‌ಸಿ ರಚನೆ ಮತ್ತು ನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ರಕಾರ 2003ರಲ್ಲಿ ವಾಜಪೇಯಿ ಸರ್ಕಾರವು ‘ರಾಷ್ಟ್ರೀಯ ಪೌರತ್ವ ನೋಂದಣಿ ನಿಯಮಗಳನ್ನು’ ರೂಪಿಸಿದೆ. ಈ ನಿಯಮಗಳ ಪ್ರಕಾರ ಅಸ್ಸಾಂನಲ್ಲಿ ಎನ್‌ಆರ್‌ಸಿ ಜಾರಿಗೆ ತರಲಾಗಿದೆ. ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ತಂದರೂ, ಈ ನಿಯಮಗಳನ್ನೇ ಅನುಸರಿಸಬೇಕಾಗುತ್ತದೆ. ಇಲ್ಲದಿದ್ದರೆ ತಿದ್ದುಪಡಿ ತಂದು, ನೂತನ ನಿಯಮ ರೂಪಿಸಬೇಕಾಗುತ್ತದೆ.

‘ಎನ್‌ಆರ್‌ಸಿ ಅಂದರೆ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್’ ಭಾರತ ದೇಶದಲ್ಲಿ ಇರುವ ಎಲ್ಲಾ ಪ್ರಜೆಗಳೂ ತಾವು ಈ ದೇಶದವರು ಎಂದು ಸಾಬೀತು ಮಾಡಬೇಕು. ಒಂದು ವೇಳೆ ತಾವು ಭಾರತದ ಮೂಲದವರು ಎಂದು ಸಾಬೀತು ಮಾಡಲು ಸಾಧ್ಯವಾಗದವರನ್ನು ಸರ್ಕಾರ ಪ್ರತ್ಯೇಕ ಕೇಂದ್ರಗಳಲ್ಲಿ ಬಂಧಿಸಿ ಇಡುತ್ತೆ. ಈ ರೀತಿ ಬಂಧನದಲ್ಲಿ ಇರುವ ವಲಸಿಗರು ಸಿಎಎ ಕಾಯ್ದೆ ಅನ್ವಯ ಭಾರತದ ಪೌರತ್ವ ಪಡೆಯಲು ಅರ್ಹರೇ ಎಂದು ಪರಿಶೀಲನೆ ಮಾಡಲಿದೆ.

ಇದನ್ನು ಓದಿ: ಮಾ.21ರೊಳಗೆ ಚುನಾವಣಾ ಬಾಂಡ್‌ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಗೊಳಿಸಿ: ಸುಪ್ರೀಂಕೋರ್ಟ್‌ನಿಂದ ಎಸ್‌ಬಿಐಗೆ ಖಡಕ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...