HomeUncategorizedಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

- Advertisement -
- Advertisement -

ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಹೊರಗುಳಿದಿರುವ 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಸೇರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ, ಅಂದರೆ ಬರೊಬ್ಬರಿ 36% ಜನ ಮುಸ್ಲಿಮರು ಪೌರತ್ವದಿಂದ ಹೊರಗುಳಿದಿದ್ದಾರೆ ಎನ್ನುವುದು ಬಯಲಾಗಿದೆ.

ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, 5 ಲಕ್ಷ ಬಂಗಾಳಿ ಹಿಂದೂಗಳು, 2 ಲಕ್ಷ ಅಸ್ಸಾಮಿ ಹಿಂದೂ ಗುಂಪುಗಳಾದ ಕೋಚ್-ರಾಜ್‌ಬೊಂಗ್‌ಶಿ, ದಾಸ್, ಕಲಿತಾ ಮತ್ತು ಸರ್ಮಾ (ಅಸ್ಸಾಮಿ) ಮತ್ತು 1.5 ಲಕ್ಷ ಗೂರ್ಖಾಗಳನ್ನು ರಿಜಿಸ್ಟರ್‌ನಿಂದ ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

ಅಸ್ಸಾಂ ಆಗಸ್ಟ್ 31, 2019ರಂದು ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಿತ್ತು. ರಾಜ್ಯದಲ್ಲಿ ವಾಸಿಸುವ ದಾಖಲೆ ರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಈ ನೋಂದಾವಣಿಯನ್ನು ಮಾಡಲಾಗಿದೆ ಎಂದು ಅಸ್ಸಾಂ ಸರಕಾರ ಹೇಳಿಕೊಂಡಿದೆ. ಅಲ್ಲಿನ ನಿವಾಸಿಗಳು ತಾವು ಅಥವಾ ತಮ್ಮ ಪೂರ್ವಜರು ಅಸ್ಸಾಂನ್ನು ಮಾರ್ಚ್ 24, 1971ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದೇವೆ ಎಂದು ಸಾಬೀತು ಮಾಡಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ. ಮಾಹಿತಿಯಲ್ಲಿ 15.5 ಲಕ್ಷ ಜನರ ಬಗ್ಗೆ ಸಿಎಂ ಉಲ್ಲೇಖಿಸಿದ್ದಾರೆ, ಆದರೆ ಇನ್ನುಳಿದ 3.5 ಲಕ್ಷ ವ್ಯಕ್ತಿಗಳು ಯಾರು ಎಂಬುವುದು ಸ್ಪಷ್ಟವಾಗಿ ತಿಳಿಸಿಲ್ಲ. ಸುಮಾರು ಐದು ಲಕ್ಷದಿಂದ ಆರು ಲಕ್ಷ ಜನರು 1971ರ ಮೊದಲು ಧಾರ್ಮಿಕ ಕಿರುಕುಳದ ಕಾರಣದಿಂದ ಬಾಂಗ್ಲಾದೇಶದಿಂದ ವಲಸೆ ಬಂದವರು ಎಂದು ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ರಿಜಿಸ್ಟರ್‌ನಿಂದ ಹೊರಗಿಡಲ್ಪಟ್ಟವರಲ್ಲಿ ಮೂರು ಲಕ್ಷದಿಂದ ಆರು ಲಕ್ಷ ಜನರು ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು 2014ರ ಡಿಸೆಂಬರ್ 31ರ ಒಳಗೆ ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮುಸ್ಲಿಮರನ್ನು ಹೊರತುಪಡಿಸಿ ಆರು ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ತ್ವರಿತವಾಗಿ ನೀಡುವ ಗುರಿಯನ್ನು ಹೊಂದಿದೆ. ಪೌರತ್ವ ತಿದ್ದುಪಡಿ ಕಾಯಿದೆಯಡಿಯಲ್ಲಿ ರಾಜ್ಯವು ಕಡಿಮೆ ಸಂಖ್ಯೆಯ ಅರ್ಜಿಗಳನ್ನು ಪಡೆಯಲಿದೆ. ರಾಷ್ಟ್ರೀಯ ಪೌರತ್ವ ನೋಂದಣಿಗೆ ತಮ್ಮ ಹೆಸರನ್ನು ಸೇರಿಸಲು ಅರ್ಜಿ ಸಲ್ಲಿಸದಿರುವವರು ಪೌರತ್ವ ತಿದ್ದುಪಡಿ ಕಾಯ್ದೆಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಕಾಯ್ದೆಯಲ್ಲಿ ನಿರ್ದಿಷ್ಟ ದಿನಾಂಕದ ಬಗ್ಗೆ ಉಲ್ಲೇಖವಿದೆ. ಪೌರತ್ವ ತಿದ್ದುಪಡಿ ಕಾಯಿದೆಯು ಕಟ್-ಆಫ್ ದಿನಾಂಕದ ಮೊದಲು ದೇಶಕ್ಕೆ ಬಂದಿರುವ ಪುರಾವೆಗಳನ್ನು ಒದಗಿಸಬೇಕು ಎಂದು ಬಹಳ ಸ್ಪಷ್ಟವಾಗಿದೆ. ಯಾರಾದರೂ ರಾಷ್ಟ್ರೀಯ ನಾಗರಿಕರ ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ, ಅವನು ಅಥವಾ ಅವಳು 2014ರ ಮೊದಲು ಭಾರತಕ್ಕೆ ಬಂದಿಲ್ಲ ಎಂದರ್ಥ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ ಕಾರ್ಯವನ್ನು ಇದುವರೆಗೆ ಅಸ್ಸಾಂನಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ನವೆಂಬರ್ 2019ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ನಾಗರಿಕರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭಾರತದಾದ್ಯಂತ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದರು. ಈ ವೇಳೆ ವ್ಯಾಪಕ ವಿರೋಧ ಮತ್ತು ಪ್ರತಿಭಟನೆ ಭುಗಿಲೆದ್ದಿತ್ತು.

ರಾಷ್ಟ್ರೀಯ ಪೌರತ್ವ ನೋಂದಣಿಯು (ಎನ್‌ಆರ್‌ಸಿ) ದೇಶದ ಎಲ್ಲಾ ನಾಗರಿಕರ ವಿವರವನ್ನು ಒಳಗೊಂಡ ಪಟ್ಟಿಯಾಗಿದೆ. 1955ರ ಪೌರತ್ವ ಕಾಯ್ದೆಯಲ್ಲೇ (18ನೇ ಸೆಕ್ಷನ್‌ನ 1 ಮತ್ತು 2ನೇ ಉಪಸೆಕ್ಷನ್‌ಗಳು) ಎನ್‌ಆರ್‌ಸಿ ರಚನೆ ಮತ್ತು ನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ರಕಾರ 2003ರಲ್ಲಿ ವಾಜಪೇಯಿ ಸರ್ಕಾರವು ‘ರಾಷ್ಟ್ರೀಯ ಪೌರತ್ವ ನೋಂದಣಿ ನಿಯಮಗಳನ್ನು’ ರೂಪಿಸಿದೆ. ಈ ನಿಯಮಗಳ ಪ್ರಕಾರ ಅಸ್ಸಾಂನಲ್ಲಿ ಎನ್‌ಆರ್‌ಸಿ ಜಾರಿಗೆ ತರಲಾಗಿದೆ. ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ತಂದರೂ, ಈ ನಿಯಮಗಳನ್ನೇ ಅನುಸರಿಸಬೇಕಾಗುತ್ತದೆ. ಇಲ್ಲದಿದ್ದರೆ ತಿದ್ದುಪಡಿ ತಂದು, ನೂತನ ನಿಯಮ ರೂಪಿಸಬೇಕಾಗುತ್ತದೆ.

‘ಎನ್‌ಆರ್‌ಸಿ ಅಂದರೆ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್’ ಭಾರತ ದೇಶದಲ್ಲಿ ಇರುವ ಎಲ್ಲಾ ಪ್ರಜೆಗಳೂ ತಾವು ಈ ದೇಶದವರು ಎಂದು ಸಾಬೀತು ಮಾಡಬೇಕು. ಒಂದು ವೇಳೆ ತಾವು ಭಾರತದ ಮೂಲದವರು ಎಂದು ಸಾಬೀತು ಮಾಡಲು ಸಾಧ್ಯವಾಗದವರನ್ನು ಸರ್ಕಾರ ಪ್ರತ್ಯೇಕ ಕೇಂದ್ರಗಳಲ್ಲಿ ಬಂಧಿಸಿ ಇಡುತ್ತೆ. ಈ ರೀತಿ ಬಂಧನದಲ್ಲಿ ಇರುವ ವಲಸಿಗರು ಸಿಎಎ ಕಾಯ್ದೆ ಅನ್ವಯ ಭಾರತದ ಪೌರತ್ವ ಪಡೆಯಲು ಅರ್ಹರೇ ಎಂದು ಪರಿಶೀಲನೆ ಮಾಡಲಿದೆ.

ಇದನ್ನು ಓದಿ: ಮಾ.21ರೊಳಗೆ ಚುನಾವಣಾ ಬಾಂಡ್‌ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಗೊಳಿಸಿ: ಸುಪ್ರೀಂಕೋರ್ಟ್‌ನಿಂದ ಎಸ್‌ಬಿಐಗೆ ಖಡಕ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...