HomeUncategorizedಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

- Advertisement -
- Advertisement -

ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಹೊರಗುಳಿದಿರುವ 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಸೇರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ, ಅಂದರೆ ಬರೊಬ್ಬರಿ 36% ಜನ ಮುಸ್ಲಿಮರು ಪೌರತ್ವದಿಂದ ಹೊರಗುಳಿದಿದ್ದಾರೆ ಎನ್ನುವುದು ಬಯಲಾಗಿದೆ.

ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, 5 ಲಕ್ಷ ಬಂಗಾಳಿ ಹಿಂದೂಗಳು, 2 ಲಕ್ಷ ಅಸ್ಸಾಮಿ ಹಿಂದೂ ಗುಂಪುಗಳಾದ ಕೋಚ್-ರಾಜ್‌ಬೊಂಗ್‌ಶಿ, ದಾಸ್, ಕಲಿತಾ ಮತ್ತು ಸರ್ಮಾ (ಅಸ್ಸಾಮಿ) ಮತ್ತು 1.5 ಲಕ್ಷ ಗೂರ್ಖಾಗಳನ್ನು ರಿಜಿಸ್ಟರ್‌ನಿಂದ ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

ಅಸ್ಸಾಂ ಆಗಸ್ಟ್ 31, 2019ರಂದು ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಿತ್ತು. ರಾಜ್ಯದಲ್ಲಿ ವಾಸಿಸುವ ದಾಖಲೆ ರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಈ ನೋಂದಾವಣಿಯನ್ನು ಮಾಡಲಾಗಿದೆ ಎಂದು ಅಸ್ಸಾಂ ಸರಕಾರ ಹೇಳಿಕೊಂಡಿದೆ. ಅಲ್ಲಿನ ನಿವಾಸಿಗಳು ತಾವು ಅಥವಾ ತಮ್ಮ ಪೂರ್ವಜರು ಅಸ್ಸಾಂನ್ನು ಮಾರ್ಚ್ 24, 1971ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದೇವೆ ಎಂದು ಸಾಬೀತು ಮಾಡಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ. ಮಾಹಿತಿಯಲ್ಲಿ 15.5 ಲಕ್ಷ ಜನರ ಬಗ್ಗೆ ಸಿಎಂ ಉಲ್ಲೇಖಿಸಿದ್ದಾರೆ, ಆದರೆ ಇನ್ನುಳಿದ 3.5 ಲಕ್ಷ ವ್ಯಕ್ತಿಗಳು ಯಾರು ಎಂಬುವುದು ಸ್ಪಷ್ಟವಾಗಿ ತಿಳಿಸಿಲ್ಲ. ಸುಮಾರು ಐದು ಲಕ್ಷದಿಂದ ಆರು ಲಕ್ಷ ಜನರು 1971ರ ಮೊದಲು ಧಾರ್ಮಿಕ ಕಿರುಕುಳದ ಕಾರಣದಿಂದ ಬಾಂಗ್ಲಾದೇಶದಿಂದ ವಲಸೆ ಬಂದವರು ಎಂದು ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ರಿಜಿಸ್ಟರ್‌ನಿಂದ ಹೊರಗಿಡಲ್ಪಟ್ಟವರಲ್ಲಿ ಮೂರು ಲಕ್ಷದಿಂದ ಆರು ಲಕ್ಷ ಜನರು ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು 2014ರ ಡಿಸೆಂಬರ್ 31ರ ಒಳಗೆ ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮುಸ್ಲಿಮರನ್ನು ಹೊರತುಪಡಿಸಿ ಆರು ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ತ್ವರಿತವಾಗಿ ನೀಡುವ ಗುರಿಯನ್ನು ಹೊಂದಿದೆ. ಪೌರತ್ವ ತಿದ್ದುಪಡಿ ಕಾಯಿದೆಯಡಿಯಲ್ಲಿ ರಾಜ್ಯವು ಕಡಿಮೆ ಸಂಖ್ಯೆಯ ಅರ್ಜಿಗಳನ್ನು ಪಡೆಯಲಿದೆ. ರಾಷ್ಟ್ರೀಯ ಪೌರತ್ವ ನೋಂದಣಿಗೆ ತಮ್ಮ ಹೆಸರನ್ನು ಸೇರಿಸಲು ಅರ್ಜಿ ಸಲ್ಲಿಸದಿರುವವರು ಪೌರತ್ವ ತಿದ್ದುಪಡಿ ಕಾಯ್ದೆಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಕಾಯ್ದೆಯಲ್ಲಿ ನಿರ್ದಿಷ್ಟ ದಿನಾಂಕದ ಬಗ್ಗೆ ಉಲ್ಲೇಖವಿದೆ. ಪೌರತ್ವ ತಿದ್ದುಪಡಿ ಕಾಯಿದೆಯು ಕಟ್-ಆಫ್ ದಿನಾಂಕದ ಮೊದಲು ದೇಶಕ್ಕೆ ಬಂದಿರುವ ಪುರಾವೆಗಳನ್ನು ಒದಗಿಸಬೇಕು ಎಂದು ಬಹಳ ಸ್ಪಷ್ಟವಾಗಿದೆ. ಯಾರಾದರೂ ರಾಷ್ಟ್ರೀಯ ನಾಗರಿಕರ ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ, ಅವನು ಅಥವಾ ಅವಳು 2014ರ ಮೊದಲು ಭಾರತಕ್ಕೆ ಬಂದಿಲ್ಲ ಎಂದರ್ಥ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ ಕಾರ್ಯವನ್ನು ಇದುವರೆಗೆ ಅಸ್ಸಾಂನಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ನವೆಂಬರ್ 2019ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ನಾಗರಿಕರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭಾರತದಾದ್ಯಂತ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದರು. ಈ ವೇಳೆ ವ್ಯಾಪಕ ವಿರೋಧ ಮತ್ತು ಪ್ರತಿಭಟನೆ ಭುಗಿಲೆದ್ದಿತ್ತು.

ರಾಷ್ಟ್ರೀಯ ಪೌರತ್ವ ನೋಂದಣಿಯು (ಎನ್‌ಆರ್‌ಸಿ) ದೇಶದ ಎಲ್ಲಾ ನಾಗರಿಕರ ವಿವರವನ್ನು ಒಳಗೊಂಡ ಪಟ್ಟಿಯಾಗಿದೆ. 1955ರ ಪೌರತ್ವ ಕಾಯ್ದೆಯಲ್ಲೇ (18ನೇ ಸೆಕ್ಷನ್‌ನ 1 ಮತ್ತು 2ನೇ ಉಪಸೆಕ್ಷನ್‌ಗಳು) ಎನ್‌ಆರ್‌ಸಿ ರಚನೆ ಮತ್ತು ನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ರಕಾರ 2003ರಲ್ಲಿ ವಾಜಪೇಯಿ ಸರ್ಕಾರವು ‘ರಾಷ್ಟ್ರೀಯ ಪೌರತ್ವ ನೋಂದಣಿ ನಿಯಮಗಳನ್ನು’ ರೂಪಿಸಿದೆ. ಈ ನಿಯಮಗಳ ಪ್ರಕಾರ ಅಸ್ಸಾಂನಲ್ಲಿ ಎನ್‌ಆರ್‌ಸಿ ಜಾರಿಗೆ ತರಲಾಗಿದೆ. ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ತಂದರೂ, ಈ ನಿಯಮಗಳನ್ನೇ ಅನುಸರಿಸಬೇಕಾಗುತ್ತದೆ. ಇಲ್ಲದಿದ್ದರೆ ತಿದ್ದುಪಡಿ ತಂದು, ನೂತನ ನಿಯಮ ರೂಪಿಸಬೇಕಾಗುತ್ತದೆ.

‘ಎನ್‌ಆರ್‌ಸಿ ಅಂದರೆ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್’ ಭಾರತ ದೇಶದಲ್ಲಿ ಇರುವ ಎಲ್ಲಾ ಪ್ರಜೆಗಳೂ ತಾವು ಈ ದೇಶದವರು ಎಂದು ಸಾಬೀತು ಮಾಡಬೇಕು. ಒಂದು ವೇಳೆ ತಾವು ಭಾರತದ ಮೂಲದವರು ಎಂದು ಸಾಬೀತು ಮಾಡಲು ಸಾಧ್ಯವಾಗದವರನ್ನು ಸರ್ಕಾರ ಪ್ರತ್ಯೇಕ ಕೇಂದ್ರಗಳಲ್ಲಿ ಬಂಧಿಸಿ ಇಡುತ್ತೆ. ಈ ರೀತಿ ಬಂಧನದಲ್ಲಿ ಇರುವ ವಲಸಿಗರು ಸಿಎಎ ಕಾಯ್ದೆ ಅನ್ವಯ ಭಾರತದ ಪೌರತ್ವ ಪಡೆಯಲು ಅರ್ಹರೇ ಎಂದು ಪರಿಶೀಲನೆ ಮಾಡಲಿದೆ.

ಇದನ್ನು ಓದಿ: ಮಾ.21ರೊಳಗೆ ಚುನಾವಣಾ ಬಾಂಡ್‌ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಗೊಳಿಸಿ: ಸುಪ್ರೀಂಕೋರ್ಟ್‌ನಿಂದ ಎಸ್‌ಬಿಐಗೆ ಖಡಕ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...