Homeಮುಖಪುಟಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

ಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

- Advertisement -
- Advertisement -

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮತ್ತು 32 ಲಕ್ಷ ರೂಪಾಯಿಗಳ ಸಾಮೂಹಿಕ ನಗದು ಬಹುಮಾನ ಘೋಷಣೆಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲರು ಶುಕ್ರವಾರ (ಜ.31) ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ನಕ್ಸಲರ “ಟೊಳ್ಳು” ಮತ್ತು “ಅಮಾನವೀಯ” ಮಾವೋವಾದಿ ಸಿದ್ಧಾಂತ ಮತ್ತು ಬುಡಕಟ್ಟು ಜನಾಂಗದವರ ಶೋಷಣೆಯಿಂದ ನಿರಾಶೆಗೊಂಡ ಕಾರಣ, 7 ಮಂದಿ ನಕ್ಸಲರು ಹಿರಿಯ ಪೊಲೀಸ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಕಂಕೇರ್‌ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಶರಣಾದವರಲ್ಲಿ ಮಮತಾ ಅಲಿಯಾಸ್ ಶಾಂತಾ ಅಲಿಯಾಸ್ ವಾಸಣ್ಣ ಬತ್ತುಳಾಯಿ (60), ದಿನೇಶ್ ಮತ್ತಾಮಿ (20) ಮತ್ತು ಆಯ್ತು ರಾಮ್ ಪೋತಾಯಿ (27) ಸೇರಿದ್ದಾರೆ. ಇವರ ಸೆರೆಗೆ ತಲಾ 8 ಲಕ್ಷ ರೂಪಾಯಿ ಬಹುಮಾನವನ್ನು ಸರ್ಕಾರ ಘೋಷಿಸಿತ್ತು ಎಂದು ವರದಿ ತಿಳಿಸಿದೆ.

ನೆರೆಯ ತೆಲಂಗಾಣದ ಕರೀಂನಗರ ಜಿಲ್ಲೆಯ ನಿವಾಸಿ ಮಮತಾ ಅವರು ವಿಭಾಗೀಯ ಸಮಿತಿ ಸದಸ್ಯರಾಗಿ ಸಕ್ರಿಯರಾಗಿದ್ದರು ಮತ್ತು ಸಂಘಟನೆಯ ವಿಭಾಗವಾದ ‘ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘನ್’ (ಕೆಎಎಂಎಸ್‌) ನ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥರಾಗಿದ್ದರು ಎಂದು ವರದಿ ವಿವರಿಸಿದೆ.

1996 ಮತ್ತು 2024ರ ನಡುವೆ, ಮಮತಾ ಅವರು 26 ನಕ್ಸಲ್ ಘಟನೆಗಳಲ್ಲಿ ಭಾಗಿಯಾಗಿದ್ದರು. ಇದರಲ್ಲಿ 2015ರಲ್ಲಿ ಕಂಕೇರ್ ಜಿಲ್ಲೆಯ ಕೊಯಾಲಿಬೇಡಾ ಪ್ರದೇಶದಲ್ಲಿ ಪಂಚಾಯತ್ ಚುನಾವಣೆಯ ಸಂದರ್ಭ ಇಬ್ಬರು ಸೇನಾ ಸಿಬ್ಬಂದಿಯ ಸಾವಿಗೆ ಕಾರಣವಾದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಮತ್ತು 2018ರಲ್ಲಿ ಇಬ್ಬರು ಬಿಎಸ್ಎಫ್ ಸಿಬ್ಬಂದಿಯ ಸಾವಿಗೆ ಕಾರಣವಾದ ಮಹ್ಲಾ ಹೊಂಚುದಾಳಿ ಸೇರಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾಗಿ ವರದಿ ಹೇಳಿದೆ.

ಮತ್ತಾಮಿ ಅವರು ಮಾವೋವಾದಿಗಳ ಮಿಲಿಟರಿ ಕಂಪನಿ ಸಂಖ್ಯೆ 10ರ ಸದಸ್ಯರಾಗಿ ಸಕ್ರಿಯರಾಗಿದ್ದರು. ಪೊಟೈ ಮಿಲಿಟರಿ ಕಂಪನಿ ಸಂಖ್ಯೆ 5ರ ಸದಸ್ಯರಾಗಿದ್ದರು.

ಶರಣಾದ ಮತ್ತೊಬ್ಬರು ನಕ್ಸಲ್ ಸದಸ್ಯೆ ಜಮುನಾ ಅಲಿಯಾಸ್ ನೀರಾ ನೇತಮ್ (50) ಪಾರ್ತಾಪುರ ಪ್ರದೇಶ ಸಮಿತಿಯ ಸದಸ್ಯೆಯಾಗಿ ಸಕ್ರಿಯರಾಗಿದ್ದರು.

2007ರಲ್ಲಿ ಭುಸ್ಕಿ-ಮಿಚ್‌ಗಾಂವ್ ಗ್ರಾಮದಲ್ಲಿ ಐವರು ಪೊಲೀಸರು ಸಾವನ್ನಪ್ಪಿ, 18 ಜನರು ಗಾಯಗೊಂಡಿದ್ದ ಹೊಂಚುದಾಳಿ ಸೇರಿದಂತೆ ಹಲವು ನಕ್ಸಲ್ ದಾಳಿಗಳಲ್ಲಿ ಜಮುನಾ ಭಾಗಿಯಾಗಿದ್ದರು ಎಂದು ಎಲೆಸೆಲಾ ಹೇಳಿದ್ದಾರೆ. ಇವರ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇತರ ಮೂವರು, ಪಾರ್ತಾಪುರ್ ಎಲ್‌ಜಿಎಸ್ (ಸ್ಥಳೀಯ ಗೆರಿಲ್ಲಾ ದಳ) ಸದಸ್ಯ ಇಟ್ವಾರಿನ್ ಪಡ್ಡಾ (25), ಪಾನಿಡೋಬಿರ್/ರೌಘಾಟ್ ಎಲ್‌ಒಎಸ್ (ಸ್ಥಳೀಯ ಸಮಿತಿ ದಳ) ಸಂಜಯ್ ನರೆಟಿ (23) ಮತ್ತು ಪಾನಿಡೋಬಿರ್ ಎಲ್‌ಒಎಸ್ ಸದಸ್ಯ ಸಗ್ನು ರಾಮ್ ಅಂಚಲಾ (24) ಸೇರಿದ್ದಾರೆ. ಇವರ ತಲೆಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಶರಣಾದ ಎಲ್ಲಾ ನಕ್ಸಲರಿಗೆ ತಲಾ 25,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗಿದೆ. ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಎಎಸ್‌ಪಿ ಹೇಳಿದ್ದಾರೆ. ಕಳೆದ ವರ್ಷ, ಕಂಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು.

ಕೃಪೆ : ಡೆಕ್ಕನ್ ಹೆರಾಲ್ಡ್

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...