Homeಮುಖಪುಟಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

ಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

- Advertisement -
- Advertisement -

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮತ್ತು 32 ಲಕ್ಷ ರೂಪಾಯಿಗಳ ಸಾಮೂಹಿಕ ನಗದು ಬಹುಮಾನ ಘೋಷಣೆಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲರು ಶುಕ್ರವಾರ (ಜ.31) ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ನಕ್ಸಲರ “ಟೊಳ್ಳು” ಮತ್ತು “ಅಮಾನವೀಯ” ಮಾವೋವಾದಿ ಸಿದ್ಧಾಂತ ಮತ್ತು ಬುಡಕಟ್ಟು ಜನಾಂಗದವರ ಶೋಷಣೆಯಿಂದ ನಿರಾಶೆಗೊಂಡ ಕಾರಣ, 7 ಮಂದಿ ನಕ್ಸಲರು ಹಿರಿಯ ಪೊಲೀಸ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಕಂಕೇರ್‌ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಶರಣಾದವರಲ್ಲಿ ಮಮತಾ ಅಲಿಯಾಸ್ ಶಾಂತಾ ಅಲಿಯಾಸ್ ವಾಸಣ್ಣ ಬತ್ತುಳಾಯಿ (60), ದಿನೇಶ್ ಮತ್ತಾಮಿ (20) ಮತ್ತು ಆಯ್ತು ರಾಮ್ ಪೋತಾಯಿ (27) ಸೇರಿದ್ದಾರೆ. ಇವರ ಸೆರೆಗೆ ತಲಾ 8 ಲಕ್ಷ ರೂಪಾಯಿ ಬಹುಮಾನವನ್ನು ಸರ್ಕಾರ ಘೋಷಿಸಿತ್ತು ಎಂದು ವರದಿ ತಿಳಿಸಿದೆ.

ನೆರೆಯ ತೆಲಂಗಾಣದ ಕರೀಂನಗರ ಜಿಲ್ಲೆಯ ನಿವಾಸಿ ಮಮತಾ ಅವರು ವಿಭಾಗೀಯ ಸಮಿತಿ ಸದಸ್ಯರಾಗಿ ಸಕ್ರಿಯರಾಗಿದ್ದರು ಮತ್ತು ಸಂಘಟನೆಯ ವಿಭಾಗವಾದ ‘ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘನ್’ (ಕೆಎಎಂಎಸ್‌) ನ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥರಾಗಿದ್ದರು ಎಂದು ವರದಿ ವಿವರಿಸಿದೆ.

1996 ಮತ್ತು 2024ರ ನಡುವೆ, ಮಮತಾ ಅವರು 26 ನಕ್ಸಲ್ ಘಟನೆಗಳಲ್ಲಿ ಭಾಗಿಯಾಗಿದ್ದರು. ಇದರಲ್ಲಿ 2015ರಲ್ಲಿ ಕಂಕೇರ್ ಜಿಲ್ಲೆಯ ಕೊಯಾಲಿಬೇಡಾ ಪ್ರದೇಶದಲ್ಲಿ ಪಂಚಾಯತ್ ಚುನಾವಣೆಯ ಸಂದರ್ಭ ಇಬ್ಬರು ಸೇನಾ ಸಿಬ್ಬಂದಿಯ ಸಾವಿಗೆ ಕಾರಣವಾದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಮತ್ತು 2018ರಲ್ಲಿ ಇಬ್ಬರು ಬಿಎಸ್ಎಫ್ ಸಿಬ್ಬಂದಿಯ ಸಾವಿಗೆ ಕಾರಣವಾದ ಮಹ್ಲಾ ಹೊಂಚುದಾಳಿ ಸೇರಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾಗಿ ವರದಿ ಹೇಳಿದೆ.

ಮತ್ತಾಮಿ ಅವರು ಮಾವೋವಾದಿಗಳ ಮಿಲಿಟರಿ ಕಂಪನಿ ಸಂಖ್ಯೆ 10ರ ಸದಸ್ಯರಾಗಿ ಸಕ್ರಿಯರಾಗಿದ್ದರು. ಪೊಟೈ ಮಿಲಿಟರಿ ಕಂಪನಿ ಸಂಖ್ಯೆ 5ರ ಸದಸ್ಯರಾಗಿದ್ದರು.

ಶರಣಾದ ಮತ್ತೊಬ್ಬರು ನಕ್ಸಲ್ ಸದಸ್ಯೆ ಜಮುನಾ ಅಲಿಯಾಸ್ ನೀರಾ ನೇತಮ್ (50) ಪಾರ್ತಾಪುರ ಪ್ರದೇಶ ಸಮಿತಿಯ ಸದಸ್ಯೆಯಾಗಿ ಸಕ್ರಿಯರಾಗಿದ್ದರು.

2007ರಲ್ಲಿ ಭುಸ್ಕಿ-ಮಿಚ್‌ಗಾಂವ್ ಗ್ರಾಮದಲ್ಲಿ ಐವರು ಪೊಲೀಸರು ಸಾವನ್ನಪ್ಪಿ, 18 ಜನರು ಗಾಯಗೊಂಡಿದ್ದ ಹೊಂಚುದಾಳಿ ಸೇರಿದಂತೆ ಹಲವು ನಕ್ಸಲ್ ದಾಳಿಗಳಲ್ಲಿ ಜಮುನಾ ಭಾಗಿಯಾಗಿದ್ದರು ಎಂದು ಎಲೆಸೆಲಾ ಹೇಳಿದ್ದಾರೆ. ಇವರ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇತರ ಮೂವರು, ಪಾರ್ತಾಪುರ್ ಎಲ್‌ಜಿಎಸ್ (ಸ್ಥಳೀಯ ಗೆರಿಲ್ಲಾ ದಳ) ಸದಸ್ಯ ಇಟ್ವಾರಿನ್ ಪಡ್ಡಾ (25), ಪಾನಿಡೋಬಿರ್/ರೌಘಾಟ್ ಎಲ್‌ಒಎಸ್ (ಸ್ಥಳೀಯ ಸಮಿತಿ ದಳ) ಸಂಜಯ್ ನರೆಟಿ (23) ಮತ್ತು ಪಾನಿಡೋಬಿರ್ ಎಲ್‌ಒಎಸ್ ಸದಸ್ಯ ಸಗ್ನು ರಾಮ್ ಅಂಚಲಾ (24) ಸೇರಿದ್ದಾರೆ. ಇವರ ತಲೆಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಶರಣಾದ ಎಲ್ಲಾ ನಕ್ಸಲರಿಗೆ ತಲಾ 25,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗಿದೆ. ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಎಎಸ್‌ಪಿ ಹೇಳಿದ್ದಾರೆ. ಕಳೆದ ವರ್ಷ, ಕಂಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು.

ಕೃಪೆ : ಡೆಕ್ಕನ್ ಹೆರಾಲ್ಡ್

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...