Homeಮುಖಪುಟಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

ಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

- Advertisement -
- Advertisement -

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮತ್ತು 32 ಲಕ್ಷ ರೂಪಾಯಿಗಳ ಸಾಮೂಹಿಕ ನಗದು ಬಹುಮಾನ ಘೋಷಣೆಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲರು ಶುಕ್ರವಾರ (ಜ.31) ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ನಕ್ಸಲರ “ಟೊಳ್ಳು” ಮತ್ತು “ಅಮಾನವೀಯ” ಮಾವೋವಾದಿ ಸಿದ್ಧಾಂತ ಮತ್ತು ಬುಡಕಟ್ಟು ಜನಾಂಗದವರ ಶೋಷಣೆಯಿಂದ ನಿರಾಶೆಗೊಂಡ ಕಾರಣ, 7 ಮಂದಿ ನಕ್ಸಲರು ಹಿರಿಯ ಪೊಲೀಸ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಕಂಕೇರ್‌ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಶರಣಾದವರಲ್ಲಿ ಮಮತಾ ಅಲಿಯಾಸ್ ಶಾಂತಾ ಅಲಿಯಾಸ್ ವಾಸಣ್ಣ ಬತ್ತುಳಾಯಿ (60), ದಿನೇಶ್ ಮತ್ತಾಮಿ (20) ಮತ್ತು ಆಯ್ತು ರಾಮ್ ಪೋತಾಯಿ (27) ಸೇರಿದ್ದಾರೆ. ಇವರ ಸೆರೆಗೆ ತಲಾ 8 ಲಕ್ಷ ರೂಪಾಯಿ ಬಹುಮಾನವನ್ನು ಸರ್ಕಾರ ಘೋಷಿಸಿತ್ತು ಎಂದು ವರದಿ ತಿಳಿಸಿದೆ.

ನೆರೆಯ ತೆಲಂಗಾಣದ ಕರೀಂನಗರ ಜಿಲ್ಲೆಯ ನಿವಾಸಿ ಮಮತಾ ಅವರು ವಿಭಾಗೀಯ ಸಮಿತಿ ಸದಸ್ಯರಾಗಿ ಸಕ್ರಿಯರಾಗಿದ್ದರು ಮತ್ತು ಸಂಘಟನೆಯ ವಿಭಾಗವಾದ ‘ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘನ್’ (ಕೆಎಎಂಎಸ್‌) ನ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥರಾಗಿದ್ದರು ಎಂದು ವರದಿ ವಿವರಿಸಿದೆ.

1996 ಮತ್ತು 2024ರ ನಡುವೆ, ಮಮತಾ ಅವರು 26 ನಕ್ಸಲ್ ಘಟನೆಗಳಲ್ಲಿ ಭಾಗಿಯಾಗಿದ್ದರು. ಇದರಲ್ಲಿ 2015ರಲ್ಲಿ ಕಂಕೇರ್ ಜಿಲ್ಲೆಯ ಕೊಯಾಲಿಬೇಡಾ ಪ್ರದೇಶದಲ್ಲಿ ಪಂಚಾಯತ್ ಚುನಾವಣೆಯ ಸಂದರ್ಭ ಇಬ್ಬರು ಸೇನಾ ಸಿಬ್ಬಂದಿಯ ಸಾವಿಗೆ ಕಾರಣವಾದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಮತ್ತು 2018ರಲ್ಲಿ ಇಬ್ಬರು ಬಿಎಸ್ಎಫ್ ಸಿಬ್ಬಂದಿಯ ಸಾವಿಗೆ ಕಾರಣವಾದ ಮಹ್ಲಾ ಹೊಂಚುದಾಳಿ ಸೇರಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾಗಿ ವರದಿ ಹೇಳಿದೆ.

ಮತ್ತಾಮಿ ಅವರು ಮಾವೋವಾದಿಗಳ ಮಿಲಿಟರಿ ಕಂಪನಿ ಸಂಖ್ಯೆ 10ರ ಸದಸ್ಯರಾಗಿ ಸಕ್ರಿಯರಾಗಿದ್ದರು. ಪೊಟೈ ಮಿಲಿಟರಿ ಕಂಪನಿ ಸಂಖ್ಯೆ 5ರ ಸದಸ್ಯರಾಗಿದ್ದರು.

ಶರಣಾದ ಮತ್ತೊಬ್ಬರು ನಕ್ಸಲ್ ಸದಸ್ಯೆ ಜಮುನಾ ಅಲಿಯಾಸ್ ನೀರಾ ನೇತಮ್ (50) ಪಾರ್ತಾಪುರ ಪ್ರದೇಶ ಸಮಿತಿಯ ಸದಸ್ಯೆಯಾಗಿ ಸಕ್ರಿಯರಾಗಿದ್ದರು.

2007ರಲ್ಲಿ ಭುಸ್ಕಿ-ಮಿಚ್‌ಗಾಂವ್ ಗ್ರಾಮದಲ್ಲಿ ಐವರು ಪೊಲೀಸರು ಸಾವನ್ನಪ್ಪಿ, 18 ಜನರು ಗಾಯಗೊಂಡಿದ್ದ ಹೊಂಚುದಾಳಿ ಸೇರಿದಂತೆ ಹಲವು ನಕ್ಸಲ್ ದಾಳಿಗಳಲ್ಲಿ ಜಮುನಾ ಭಾಗಿಯಾಗಿದ್ದರು ಎಂದು ಎಲೆಸೆಲಾ ಹೇಳಿದ್ದಾರೆ. ಇವರ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇತರ ಮೂವರು, ಪಾರ್ತಾಪುರ್ ಎಲ್‌ಜಿಎಸ್ (ಸ್ಥಳೀಯ ಗೆರಿಲ್ಲಾ ದಳ) ಸದಸ್ಯ ಇಟ್ವಾರಿನ್ ಪಡ್ಡಾ (25), ಪಾನಿಡೋಬಿರ್/ರೌಘಾಟ್ ಎಲ್‌ಒಎಸ್ (ಸ್ಥಳೀಯ ಸಮಿತಿ ದಳ) ಸಂಜಯ್ ನರೆಟಿ (23) ಮತ್ತು ಪಾನಿಡೋಬಿರ್ ಎಲ್‌ಒಎಸ್ ಸದಸ್ಯ ಸಗ್ನು ರಾಮ್ ಅಂಚಲಾ (24) ಸೇರಿದ್ದಾರೆ. ಇವರ ತಲೆಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಶರಣಾದ ಎಲ್ಲಾ ನಕ್ಸಲರಿಗೆ ತಲಾ 25,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗಿದೆ. ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಎಎಸ್‌ಪಿ ಹೇಳಿದ್ದಾರೆ. ಕಳೆದ ವರ್ಷ, ಕಂಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು.

ಕೃಪೆ : ಡೆಕ್ಕನ್ ಹೆರಾಲ್ಡ್

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...