Homeಮುಖಪುಟಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

ಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

- Advertisement -
- Advertisement -

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮತ್ತು 32 ಲಕ್ಷ ರೂಪಾಯಿಗಳ ಸಾಮೂಹಿಕ ನಗದು ಬಹುಮಾನ ಘೋಷಣೆಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲರು ಶುಕ್ರವಾರ (ಜ.31) ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ನಕ್ಸಲರ “ಟೊಳ್ಳು” ಮತ್ತು “ಅಮಾನವೀಯ” ಮಾವೋವಾದಿ ಸಿದ್ಧಾಂತ ಮತ್ತು ಬುಡಕಟ್ಟು ಜನಾಂಗದವರ ಶೋಷಣೆಯಿಂದ ನಿರಾಶೆಗೊಂಡ ಕಾರಣ, 7 ಮಂದಿ ನಕ್ಸಲರು ಹಿರಿಯ ಪೊಲೀಸ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಕಂಕೇರ್‌ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಶರಣಾದವರಲ್ಲಿ ಮಮತಾ ಅಲಿಯಾಸ್ ಶಾಂತಾ ಅಲಿಯಾಸ್ ವಾಸಣ್ಣ ಬತ್ತುಳಾಯಿ (60), ದಿನೇಶ್ ಮತ್ತಾಮಿ (20) ಮತ್ತು ಆಯ್ತು ರಾಮ್ ಪೋತಾಯಿ (27) ಸೇರಿದ್ದಾರೆ. ಇವರ ಸೆರೆಗೆ ತಲಾ 8 ಲಕ್ಷ ರೂಪಾಯಿ ಬಹುಮಾನವನ್ನು ಸರ್ಕಾರ ಘೋಷಿಸಿತ್ತು ಎಂದು ವರದಿ ತಿಳಿಸಿದೆ.

ನೆರೆಯ ತೆಲಂಗಾಣದ ಕರೀಂನಗರ ಜಿಲ್ಲೆಯ ನಿವಾಸಿ ಮಮತಾ ಅವರು ವಿಭಾಗೀಯ ಸಮಿತಿ ಸದಸ್ಯರಾಗಿ ಸಕ್ರಿಯರಾಗಿದ್ದರು ಮತ್ತು ಸಂಘಟನೆಯ ವಿಭಾಗವಾದ ‘ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘನ್’ (ಕೆಎಎಂಎಸ್‌) ನ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥರಾಗಿದ್ದರು ಎಂದು ವರದಿ ವಿವರಿಸಿದೆ.

1996 ಮತ್ತು 2024ರ ನಡುವೆ, ಮಮತಾ ಅವರು 26 ನಕ್ಸಲ್ ಘಟನೆಗಳಲ್ಲಿ ಭಾಗಿಯಾಗಿದ್ದರು. ಇದರಲ್ಲಿ 2015ರಲ್ಲಿ ಕಂಕೇರ್ ಜಿಲ್ಲೆಯ ಕೊಯಾಲಿಬೇಡಾ ಪ್ರದೇಶದಲ್ಲಿ ಪಂಚಾಯತ್ ಚುನಾವಣೆಯ ಸಂದರ್ಭ ಇಬ್ಬರು ಸೇನಾ ಸಿಬ್ಬಂದಿಯ ಸಾವಿಗೆ ಕಾರಣವಾದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಮತ್ತು 2018ರಲ್ಲಿ ಇಬ್ಬರು ಬಿಎಸ್ಎಫ್ ಸಿಬ್ಬಂದಿಯ ಸಾವಿಗೆ ಕಾರಣವಾದ ಮಹ್ಲಾ ಹೊಂಚುದಾಳಿ ಸೇರಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾಗಿ ವರದಿ ಹೇಳಿದೆ.

ಮತ್ತಾಮಿ ಅವರು ಮಾವೋವಾದಿಗಳ ಮಿಲಿಟರಿ ಕಂಪನಿ ಸಂಖ್ಯೆ 10ರ ಸದಸ್ಯರಾಗಿ ಸಕ್ರಿಯರಾಗಿದ್ದರು. ಪೊಟೈ ಮಿಲಿಟರಿ ಕಂಪನಿ ಸಂಖ್ಯೆ 5ರ ಸದಸ್ಯರಾಗಿದ್ದರು.

ಶರಣಾದ ಮತ್ತೊಬ್ಬರು ನಕ್ಸಲ್ ಸದಸ್ಯೆ ಜಮುನಾ ಅಲಿಯಾಸ್ ನೀರಾ ನೇತಮ್ (50) ಪಾರ್ತಾಪುರ ಪ್ರದೇಶ ಸಮಿತಿಯ ಸದಸ್ಯೆಯಾಗಿ ಸಕ್ರಿಯರಾಗಿದ್ದರು.

2007ರಲ್ಲಿ ಭುಸ್ಕಿ-ಮಿಚ್‌ಗಾಂವ್ ಗ್ರಾಮದಲ್ಲಿ ಐವರು ಪೊಲೀಸರು ಸಾವನ್ನಪ್ಪಿ, 18 ಜನರು ಗಾಯಗೊಂಡಿದ್ದ ಹೊಂಚುದಾಳಿ ಸೇರಿದಂತೆ ಹಲವು ನಕ್ಸಲ್ ದಾಳಿಗಳಲ್ಲಿ ಜಮುನಾ ಭಾಗಿಯಾಗಿದ್ದರು ಎಂದು ಎಲೆಸೆಲಾ ಹೇಳಿದ್ದಾರೆ. ಇವರ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇತರ ಮೂವರು, ಪಾರ್ತಾಪುರ್ ಎಲ್‌ಜಿಎಸ್ (ಸ್ಥಳೀಯ ಗೆರಿಲ್ಲಾ ದಳ) ಸದಸ್ಯ ಇಟ್ವಾರಿನ್ ಪಡ್ಡಾ (25), ಪಾನಿಡೋಬಿರ್/ರೌಘಾಟ್ ಎಲ್‌ಒಎಸ್ (ಸ್ಥಳೀಯ ಸಮಿತಿ ದಳ) ಸಂಜಯ್ ನರೆಟಿ (23) ಮತ್ತು ಪಾನಿಡೋಬಿರ್ ಎಲ್‌ಒಎಸ್ ಸದಸ್ಯ ಸಗ್ನು ರಾಮ್ ಅಂಚಲಾ (24) ಸೇರಿದ್ದಾರೆ. ಇವರ ತಲೆಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಶರಣಾದ ಎಲ್ಲಾ ನಕ್ಸಲರಿಗೆ ತಲಾ 25,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗಿದೆ. ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಎಎಸ್‌ಪಿ ಹೇಳಿದ್ದಾರೆ. ಕಳೆದ ವರ್ಷ, ಕಂಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು.

ಕೃಪೆ : ಡೆಕ್ಕನ್ ಹೆರಾಲ್ಡ್

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...