Homeಮುಖಪುಟಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್ ಲಾಮಾ ಅವರನ್ನು ಬೆಂಬಲಿಸಿ ಸಿಲಿಗುರಿಯ ಮತಿಗರಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, “2021ರ ವಿಧಾನಸಭಾ ಚುನಾವಣೆಯಲ್ಲಿ ಎಂಟು ಹಂತಗಳಲ್ಲಿ ಮತದಾನ ನಡೆದಾಗ ಇದೇ ರೀತಿಯ ಘಟನೆ ಸಂಭವಿಸಿದೆ. ಅದರ ನಂತರ, ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಹೊಸ ಅಲೆ ಅಪ್ಪಳಿಸಿತು” ಎಂದರು.

“2021ರಲ್ಲಿ ಉಲ್ಬಣಗೊಳ್ಳುತ್ತಿದ್ದ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಅಪಾಯಗಳನ್ನೂ ಪರಿಗಣಿಸದೆ, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳ ವಿಧಾನಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವನ್ನು ಒತ್ತಾಯಿಸಿತು. ನಂತರ ಏನಾಯಿತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ; ಮತ್ತೊಂದು ಅಲೆ ಬಂದು ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಈ ಜೀವಹಾನಿಗೆ ಹೊಣೆ ಯಾರು” ಎಂದು ಅಭಿಷೇಕ್ ಪ್ರಶ್ನಿಸಿದರು.

“ಬಿಜೆಪಿಯ ಆಜ್ಞೆಯ ಮೇರೆಗೆ ಚುನಾವಣಾ ಆಯೋಗವು ಈ ಬಾರಿ ಏಳು ಹಂತಗಳ ಚುನಾವಣೆಯನ್ನು ಆಯೋಜಿಸಿದೆ. ಇದರಿಂದಾಗಿ ದೆಹಲಿಯ ಬಿಜೆಪಿ ನಾಯಕರು ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಏಳು ಹಂತದ ಚುನಾವಣೆಗಳು ನಡೆಯುತ್ತಿವೆ, ಇದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರತಿ ಹಂತದ ಮೊದಲು ಪ್ರಚಾರ ಮಾಡಬಹುದು. ಆದರೆ, ಅವರ ಸುಳ್ಳನ್ನು ಜನರು ತಿರಸ್ಕರಿಸುತ್ತಾರೆ” ಎಂದು ಅವರು ಹೇಳಿದರು.

ತಮ್ಮ ಪಕ್ಷಕ್ಕೆ ಸತತ ನಾಲ್ಕನೇ ಅವಧಿಗೆ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಾಲಿ ಬಿಜೆಪಿ ಸಂಸದ ರಾಜು ಬಿಸ್ತಾ ವಿರುದ್ಧ ಟಿಎಂಸಿ ಲಾಮಾ ಅವರನ್ನು ಕಣಕ್ಕಿಳಿಸಿದೆ. ಲಾಮಾ ಅವರನ್ನು “ಭೂಮಿಪುತ್ರ” ಅಥವಾ ಮಣ್ಣಿನ ಮಗ ಎಂದು ಬಣ್ಣಿಸಿದ ಬ್ಯಾನರ್ಜಿ, ಬಿಸ್ತಾರನ್ನು “ವಲಸೆ ಹಕ್ಕಿ” ಎಂದು ಕರೆದರು.

ಸಾಂಕ್ರಾಮಿಕ ಸಮಯದಲ್ಲಿ ಬಿಸ್ತಾ ಜನರಿಗೆ ಸಹಾಯ ಮಾಡಲಿಲ್ಲ ಮತ್ತು ದೆಹಲಿಯಲ್ಲಿಯೇ ಇದ್ದರು. ಆದರೆ, ಆ ಸಮಯದಲ್ಲಿ ಟಿಎಂಸಿ ಕಾರ್ಯಕರ್ತರು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಜನರನ್ನು ಬೆಂಬಲಿಸಿದರು ಎಂದರು.

11 ಗೂರ್ಖಾ ಜನಾಂಗಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ ಎಂದು ಆರೋಪಿಸಿದರು.

ಮೊದಲ ಹಂತದ ಚುನಾವಣೆಗಳಲ್ಲಿ ಬಿಜೆಪಿಯ ಸಾಧನೆ ಕಳಪೆಯಾಗಿತ್ತು ಮತ್ತು ನಂತರದ ಹಂತಗಳಲ್ಲಿ ಅದು ಭಿನ್ನವಾಗಿರುವುದಿಲ್ಲ ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಂತರ, ಮಾಲ್ಡಾದ ಬೈಸ್ನಾಬ್‌ನಗರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಮಾಲ್ಡಾ ದಕ್ಷಿಣದ ಕಾಂಗ್ರೆಸ್ ಸಂಸದರಾಗಲೀ ಅಥವಾ ಮಾಲ್ಡಾ ಉತ್ತರದ ಬಿಜೆಪಿ ಸಂಸದರಾಗಲೀ ಕೇಂದ್ರದೊಂದಿಗೆ ಎಂಜಿಎನ್‌ಆರ್‌ಇಜಿಎ ಬಾಕಿಯ ವಿಷಯವನ್ನು ಪ್ರಸ್ತಾಪಿಸಲಿಲ್ಲ ಎಂದು ಆರೋಪ ಮಾಡಿದರು.

ಕಾಂಗ್ರೆಸ್‌ನ ಬಹರಂಪುರ ಸಂಸದ ಅಧೀರ್ ರಂಜನ್ ಚೌಧರಿ ಅವರು ರಾಜ್ಯದಲ್ಲಿ ಟಿಎಂಸಿ ಸರ್ಕಾರವನ್ನು ಅಪಖ್ಯಾತಿಗೊಳಿಸಲು ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳಿಂದ ಟಿಎಂಸಿ ನಾಯಕರಿಗೆ ಕಿರುಕುಳ ನೀಡುವ ಬಿಜೆಪಿಯ ಕಾರ್ಯಸೂಚಿಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

2021ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಟಿಎಂಸಿಯನ್ನು ವಿಭಜಿಸಲು ಬಿಜೆಪಿ ಪಿತೂರಿ ನಡೆಸಿದೆ. ಆದರೆ, ಪ್ರಯತ್ನಗಳನ್ನು ವಿಫಲಗೊಳಿಸಲಾಯಿತು ಎಂದರು.

ಇದನ್ನೂ ಓದಿ; ಸೊರೇನ್ ಜಾಮೀನು ಅರ್ಜಿಗೆ ಉತ್ತರಿಸಲು ಇಡಿಗೆ ಕಾಲಾವಕಾಶ ನೀಡಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...