Homeಮುಖಪುಟಮಧ್ಯಪ್ರದೇಶದಲ್ಲಿ ಪ್ರತಿದಿನ 7 ಎಸ್‌ಸಿ, ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಸರ್ಕಾರದಿಂದ ಮಾಹಿತಿ

ಮಧ್ಯಪ್ರದೇಶದಲ್ಲಿ ಪ್ರತಿದಿನ 7 ಎಸ್‌ಸಿ, ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಸರ್ಕಾರದಿಂದ ಮಾಹಿತಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ 2022 ರಿಂದ 2024ರ ನಡುವೆ ಒಟ್ಟು 7,418 ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. 558 ಮಹಿಳೆಯರನ್ನು ಕೊಲೆ ಮಾಡಲಾಗಿದೆ ಮತ್ತು 338 ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ರಾಜ್ಯ ಸರ್ಕಾರ ವಿಧಾನಸಭೆಗೆ ಮಾಹಿತಿ ನೀಡಿದೆ.

ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಪ್ರತಿದಿನ ಏಳು ಎಸ್‌ಸಿ/ಎಸ್‌ಟಿ ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಹೇಳಿದೆ.

ಗಮನಾರ್ಹವಾಗಿ, ಮಧ್ಯ ಪ್ರದೇಶದ ಒಟ್ಟು ಜನಸಂಖ್ಯೆಯ ಶೇಕಡ 38ರಷ್ಟು ಈ ಎರಡು ತಳ ಸಮುದಾಯಗಳ ಜನರಿದ್ದಾರೆ. ಒಟ್ಟು ಜನ ಸಂಖ್ಯೆಯಲ್ಲಿ ಎಸ್‌ಸಿಗಳ ಪ್ರಮಾಣ ಶೇಕಡ 16 ಮತ್ತು ಎಸ್‌ಟಿಗಳ ಪ್ರಮಾಣ ಶೇಕಡ 20ರಷ್ಟಿದೆ.

2022-2024 ರ ನಡುವೆ ಮಧ್ಯಪ್ರದೇಶದಲ್ಲಿ ಸುಮಾರು 558 ಎಸ್‌ಸಿ/ಎಸ್‌ಟಿ ಮಹಿಳೆಯರು ಕೊಲೆಯಾಗಿದ್ದಾರೆ. ಈ ಪೈಕಿ 411 ಪರಿಶಿಷ್ಟ ಪಂಗಡದ ಮಹಿಳೆಯರು ಮತ್ತು 147 ಪರಿಶಿಷ್ಟ ಜಾತಿಯವರು ಎಂದು ಸರ್ಕಾರ ತಿಳಿಸಿದೆ.

ಅದೇ ಅವಧಿಯಲ್ಲಿ ಎರಡೂ ಸಮುದಾಯಗಳ ಮಹಿಳೆಯರ ಮೇಲೆ ನಡೆದ 338 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಸಂತ್ರಸ್ತ ಮಹಿಳೆಯರ ಪೈಕಿ 186 ಮಂದಿ ಎಸ್‌ಟಿ 152 ಜನರು ಎಸ್‌ಸಿ ಸಮುದಾಯಕ್ಕೆ ಸೇರಿದವರು.

ಇದೇ ಅವಧಿಯಲ್ಲಿ ಒಟ್ಟು 5,983 ಎಸ್‌ಸಿ/ಎಸ್‌ಟಿ ಮಹಿಳೆಯರು ಕಿರುಕುಳಕ್ಕೊಳಗಾಗಿದ್ದಾರೆ. ಅಂದರೆ ಪ್ರತಿದಿನ ಐದು ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 3,367 ಸಂತ್ರಸ್ತರು ಪರಿಶಿಷ್ಟ ಜಾತಿಯವರು ಮತ್ತು 2,616 ಮಹಿಳೆಯರು ಪರಿಶಿಷ್ಟ ಪಂಗಡದವರು.

ಪರಿಶಿಷ್ಟ ಪಂಗಡದ ಮಹಿಳೆಯರು ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯಂತಹ ಹಿಂಸಾತ್ಮಕ ಮತ್ತು ಲೈಂಗಿಕ ಅಪರಾಧಗಳಿಗೆ ಹೆಚ್ಚು ಗುರಿಯಾಗಿದ್ದಾರೆ ಎಂದು ಹೇಳಲಾಗಿದ್ದರೂ, ಪರಿಶಿಷ್ಟ ಜಾತಿಯ ಮಹಿಳೆಯರು ತುಲನಾತ್ಮಕವಾಗಿ ಹೆಚ್ಚು ಕೌಟುಂಬಿಕ ಹಿಂಸಾಚಾರ ಮತ್ತು ಕಿರುಕುಳದ ಅಪಾಯವನ್ನು ಹೊಂದಿದ್ದಾರೆ ಎಂದು ದತ್ತಾಂಶವು ಬಹಿರಂಗಪಡಿಸಿದೆ.

ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲಿನ 1,906 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ 1,352 ಬಲಿಪಶುಗಳು ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು 554 ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಮೂರು ವರ್ಷಗಳ ಅವಧಿಯಲ್ಲಿ ಪ್ರತಿದಿನ ಸರಾಸರಿ ಇಬ್ಬರು ಎಸ್‌ಸಿ/ಎಸ್‌ಟಿ ಮಹಿಳೆಯರು ಕೌಟುಂಬಿಕ ದೌರ್ಜನ್ಯವನ್ನು ಎದುರಿಸಿದ್ದಾರೆ ಎಂದು ಸರ್ಕಾರದ ಅಂಕಿ ಅಂಶ ಹೇಳಿದೆ.

ಸದನದಲ್ಲಿ ಹಂಚಿಕೊಂಡ ಅಧಿಕೃತ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದಲ್ಲಿ ಮೂರು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ಮಹಿಳೆಯರ ವಿರುದ್ಧ ಒಟ್ಟು 44,978 ಅಪರಾಧ ಪ್ರಕರಣಗಳು ದಾಖಲಾಗಿವೆ, ಅಂದರೆ ದಿನಕ್ಕೆ ಸರಾಸರಿ 41 ಪ್ರಕರಣಗಳು ದಾಖಲಾಗಿವೆ.

ಈ ಆಘಾತಕಾರಿ ಅಂಕಿ ಅಂಶಗಳು ರಾಜ್ಯದ ತಳ ಸಮುದಾಯಗಳ ಮಹಿಳೆಯರ ಅಸಹಾಯಕತೆಯನ್ನು ಎತ್ತಿ ತೋರಸಿದೆ. ಅವರ ಸುರಕ್ಷತೆ ಮತ್ತು ನ್ಯಾಯ ಕೊಡಿಸಲು ಕ್ರಮಗಳ ತುರ್ತು ಅಗತ್ಯತೆಯನ್ನು ಒತ್ತಿ ಹೇಳಿದೆ.

ಬಿಹಾರ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಶಾರ್ಜೀಲ್ ಇಮಾಮ್ ಸ್ಪರ್ಧೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...