Homeಮುಖಪುಟಮಧ್ಯಪ್ರದೇಶದಲ್ಲಿ ಪ್ರತಿದಿನ 7 ಎಸ್‌ಸಿ, ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಸರ್ಕಾರದಿಂದ ಮಾಹಿತಿ

ಮಧ್ಯಪ್ರದೇಶದಲ್ಲಿ ಪ್ರತಿದಿನ 7 ಎಸ್‌ಸಿ, ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಸರ್ಕಾರದಿಂದ ಮಾಹಿತಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ 2022 ರಿಂದ 2024ರ ನಡುವೆ ಒಟ್ಟು 7,418 ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. 558 ಮಹಿಳೆಯರನ್ನು ಕೊಲೆ ಮಾಡಲಾಗಿದೆ ಮತ್ತು 338 ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ರಾಜ್ಯ ಸರ್ಕಾರ ವಿಧಾನಸಭೆಗೆ ಮಾಹಿತಿ ನೀಡಿದೆ.

ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಪ್ರತಿದಿನ ಏಳು ಎಸ್‌ಸಿ/ಎಸ್‌ಟಿ ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಹೇಳಿದೆ.

ಗಮನಾರ್ಹವಾಗಿ, ಮಧ್ಯ ಪ್ರದೇಶದ ಒಟ್ಟು ಜನಸಂಖ್ಯೆಯ ಶೇಕಡ 38ರಷ್ಟು ಈ ಎರಡು ತಳ ಸಮುದಾಯಗಳ ಜನರಿದ್ದಾರೆ. ಒಟ್ಟು ಜನ ಸಂಖ್ಯೆಯಲ್ಲಿ ಎಸ್‌ಸಿಗಳ ಪ್ರಮಾಣ ಶೇಕಡ 16 ಮತ್ತು ಎಸ್‌ಟಿಗಳ ಪ್ರಮಾಣ ಶೇಕಡ 20ರಷ್ಟಿದೆ.

2022-2024 ರ ನಡುವೆ ಮಧ್ಯಪ್ರದೇಶದಲ್ಲಿ ಸುಮಾರು 558 ಎಸ್‌ಸಿ/ಎಸ್‌ಟಿ ಮಹಿಳೆಯರು ಕೊಲೆಯಾಗಿದ್ದಾರೆ. ಈ ಪೈಕಿ 411 ಪರಿಶಿಷ್ಟ ಪಂಗಡದ ಮಹಿಳೆಯರು ಮತ್ತು 147 ಪರಿಶಿಷ್ಟ ಜಾತಿಯವರು ಎಂದು ಸರ್ಕಾರ ತಿಳಿಸಿದೆ.

ಅದೇ ಅವಧಿಯಲ್ಲಿ ಎರಡೂ ಸಮುದಾಯಗಳ ಮಹಿಳೆಯರ ಮೇಲೆ ನಡೆದ 338 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಸಂತ್ರಸ್ತ ಮಹಿಳೆಯರ ಪೈಕಿ 186 ಮಂದಿ ಎಸ್‌ಟಿ 152 ಜನರು ಎಸ್‌ಸಿ ಸಮುದಾಯಕ್ಕೆ ಸೇರಿದವರು.

ಇದೇ ಅವಧಿಯಲ್ಲಿ ಒಟ್ಟು 5,983 ಎಸ್‌ಸಿ/ಎಸ್‌ಟಿ ಮಹಿಳೆಯರು ಕಿರುಕುಳಕ್ಕೊಳಗಾಗಿದ್ದಾರೆ. ಅಂದರೆ ಪ್ರತಿದಿನ ಐದು ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 3,367 ಸಂತ್ರಸ್ತರು ಪರಿಶಿಷ್ಟ ಜಾತಿಯವರು ಮತ್ತು 2,616 ಮಹಿಳೆಯರು ಪರಿಶಿಷ್ಟ ಪಂಗಡದವರು.

ಪರಿಶಿಷ್ಟ ಪಂಗಡದ ಮಹಿಳೆಯರು ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯಂತಹ ಹಿಂಸಾತ್ಮಕ ಮತ್ತು ಲೈಂಗಿಕ ಅಪರಾಧಗಳಿಗೆ ಹೆಚ್ಚು ಗುರಿಯಾಗಿದ್ದಾರೆ ಎಂದು ಹೇಳಲಾಗಿದ್ದರೂ, ಪರಿಶಿಷ್ಟ ಜಾತಿಯ ಮಹಿಳೆಯರು ತುಲನಾತ್ಮಕವಾಗಿ ಹೆಚ್ಚು ಕೌಟುಂಬಿಕ ಹಿಂಸಾಚಾರ ಮತ್ತು ಕಿರುಕುಳದ ಅಪಾಯವನ್ನು ಹೊಂದಿದ್ದಾರೆ ಎಂದು ದತ್ತಾಂಶವು ಬಹಿರಂಗಪಡಿಸಿದೆ.

ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲಿನ 1,906 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ 1,352 ಬಲಿಪಶುಗಳು ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು 554 ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಮೂರು ವರ್ಷಗಳ ಅವಧಿಯಲ್ಲಿ ಪ್ರತಿದಿನ ಸರಾಸರಿ ಇಬ್ಬರು ಎಸ್‌ಸಿ/ಎಸ್‌ಟಿ ಮಹಿಳೆಯರು ಕೌಟುಂಬಿಕ ದೌರ್ಜನ್ಯವನ್ನು ಎದುರಿಸಿದ್ದಾರೆ ಎಂದು ಸರ್ಕಾರದ ಅಂಕಿ ಅಂಶ ಹೇಳಿದೆ.

ಸದನದಲ್ಲಿ ಹಂಚಿಕೊಂಡ ಅಧಿಕೃತ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದಲ್ಲಿ ಮೂರು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ಮಹಿಳೆಯರ ವಿರುದ್ಧ ಒಟ್ಟು 44,978 ಅಪರಾಧ ಪ್ರಕರಣಗಳು ದಾಖಲಾಗಿವೆ, ಅಂದರೆ ದಿನಕ್ಕೆ ಸರಾಸರಿ 41 ಪ್ರಕರಣಗಳು ದಾಖಲಾಗಿವೆ.

ಈ ಆಘಾತಕಾರಿ ಅಂಕಿ ಅಂಶಗಳು ರಾಜ್ಯದ ತಳ ಸಮುದಾಯಗಳ ಮಹಿಳೆಯರ ಅಸಹಾಯಕತೆಯನ್ನು ಎತ್ತಿ ತೋರಸಿದೆ. ಅವರ ಸುರಕ್ಷತೆ ಮತ್ತು ನ್ಯಾಯ ಕೊಡಿಸಲು ಕ್ರಮಗಳ ತುರ್ತು ಅಗತ್ಯತೆಯನ್ನು ಒತ್ತಿ ಹೇಳಿದೆ.

ಬಿಹಾರ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಶಾರ್ಜೀಲ್ ಇಮಾಮ್ ಸ್ಪರ್ಧೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...