Homeಕರೋನಾ ತಲ್ಲಣಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

- Advertisement -
- Advertisement -

ಹರಿದ್ವಾರದ ಕುಂಭಮೇಳದಲ್ಲಿ ಒಟ್ಟು ಸುಮಾರು ಎಪ್ಪತ್ತು ಲಕ್ಷ ಭಕ್ತರು ಭಾಗವಹಿಸಿದ್ದರು, ಇದು ಶುಕ್ರವಾರ ಕೊನೆಗೊಂಡಿದೆ. ಈ ಕಾರ್ಯಕ್ರಮ ಕೊರೋನಾ “ಸೂಪರ್-ಸ್ಪ್ರೆಡರ್” ಆಗಿ ಕೆಲಸ ಮಾಡಿದೆ ಎಂದು ಕೆಲವು ತಜ್ಞರು, ಹಿರಿಯ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹಲವಾರು ಸಲ ಕೋರ್ಟುಗಳು, ಈ ಮೇಳಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ.

ಸಾಮಾನ್ಯ ಪರಿಸ್ಥಿತಿಗಳಲ್ಲಿ ಮೂರು ತಿಂಗಳುಗಳ ಕಾಲ ನಡೆದ ಕುಂಭಮೇಳವು ಕೋವಿಡ್ ಕಳವಳದಿಂದಾಗಿ ಈ ಬಾರಿ ಔಪಚಾರಿಕವಾಗಿ ಏಪ್ರಿಲ್ 1 ರ ಹೊತ್ತಿಗೆ ಪ್ರಾರಂಭವಾಯಿತು. ಆದರೂ ಒಟ್ಟು ಸುಮಾರು 70 ಲಕ್ಷ ಜನರು ಭಾಗವಹಿಸಿದ ಈ ಮೇಳ ಕೊರೋನಾ ವೃದ್ಧಿಗೆ ಕಾರಣವಾಗಿತು ಎಂದು ಆರೋಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೇಳದಲ್ಲಿ ವೈದ್ಯಕೀಯ ಸಿಬ್ಬಂದಿ ನಡೆಸಿದ ಸುಮಾರು ಎರಡು ಲಕ್ಷ ಪರೀಕ್ಷೆಗಳಲ್ಲಿ ಸುಮಾರು 2,600 ಭಕ್ತರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತು. ಹಲವು ಹಿರಿಯ ಸಾಧುಗಳು ಸಾವಿಗೀಡಾದರು.

ಏಪ್ರಿಲ್ 12, 14 ಮತ್ತು 27 ರಂದು ಮೂರು ಶಾಹಿ ಸ್ನಾನಗಳು (ಪವಿತ್ರ ಸ್ನಾನ) ನಡೆದವು, ಕೋರ್ಟುಗಳು ಮತ್ತು ದೇಶದ ನಾಗರೀಕರ ಆಕ್ಷೇಪಕ್ಕೆ ಮಣಿದು ಕೊನೆಯ ಸ್ನಾನವನ್ನು ಸಾಂಕೇತಿಕವಾಗಿ ನಡೆಸಲಾಯಿತಾದರೂ ಭಕ್ತರ ಸಂಖ್ಯೆ ಇದ್ದೇ ಇತ್ತು.

ಕೊರೊನಾ ವೈರಸ್ ಉಲ್ಬಣವನ್ನು ಹೆಚ್ಚಿಸುವ ಸಾಧ್ಯತೆಯನ್ನು ಪರಿಗಣಿಸಿ ಕುಂಭವು ದೊಡ್ಡ ಸವಾಲಾಗಿತ್ತು ಎಂದು ಹರಿದ್ವಾರ ಮುಖ್ಯ ವೈದ್ಯಕೀಯ ಅಧಿಕಾರಿ ಎಸ್.ಕೆ. ಝಾ ಹೇಳಿದ್ದರು.
ಕುಂಭದ ವೈದ್ಯಕೀಯ ಅಧಿಕಾರಿ ಅರ್ಜುನ್ ಸಿಂಗ್ ಸೆಂಗಾರ್, ” ಹಿಂದಿನ ಸಲಕ್ಕಿಂತ ಜನಸಂದಣಿ ಕಡಿಮೆ ಇದ್ದರೂ, ಕೊರೊನಾ ಕಾರಣಕ್ಕಾಗಿ ಈ ಪರಿಸ್ಥಿತಿ ನಮಗೆ ಸವಾಲಾಗಿತ್ತು, ಸಾಮಾಜಿಕ ಅಂತರದ ಮಾನದಂಡಗಳನ್ನು ಉಲ್ಲಂಘಿಸುವಷ್ಟು ಜನಸಂದಣಿಯಂತೂ ಇತ್ತು’ ಎಂದು ಹೇಳಿದರು.

“ಭಕ್ತರಿಗೆ ಆರಂಭದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಇಷ್ಟವಿರಲಿಲ್ಲ. ಆದರೆ ಏಪ್ರಿಲ್ 14 ರಂದು ಎರಡನೇ ಶಾಹಿ ಸ್ನಾನದ ನಂತರ ಅವರು ಪಶ್ಚಾತ್ತಾಪಪಟ್ಟರು” ಎಂದು ಅವರು ಹೇಳಿದರು.

“ಉತ್ತರ ಪ್ರದೇಶದಿಂದ ಕರೆತಂದ ಆರೋಗ್ಯ ಸಿಬ್ಬಂದಿಯ ಸಹಾಯದಿಂದ ನಾವು ಒಟ್ಟು 1,90,083 ಪರೀಕ್ಷೆಗಳನ್ನು ನಡೆಸಿದ್ದೇವೆ, ಅದರಲ್ಲಿ 2642 ಪಾಸಿಟಿವ್ ವರದಿ ಬಂದಿವೆ’ ಎಂದು ಅವರು ಹೇಳಿದರು.

ಭಾರಿ ಟೀಕೆಗಳು ವ್ಯಕ್ತವಾದ ನಂತರ, ಕುಂಭದಲ್ಲಿ ತಮ್ಮ ಪ್ರಾತಿನಿಧ್ಯವನ್ನು ಸಾಂಕೇತಿಕವಾಗಿ ಇರಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರ ಜನಸಂದಣಿಯು ಹೊರಬರಲು ಪ್ರಾರಂಭಿಸಿತು.

ಮೇಳಕ್ಕೆ ಹಾಜರಾಗುವ ಪಂಗಡಗಳಲ್ಲಿ ಅತಿ ದೊಡ್ಡದಾದ ಜೂನಾ ಅಖಾಡಾ, ಪ್ರಧಾನಿ ಮೋದಿಯವರ ಮನವಿಗೆ ಮೊದಲ ಬಾರಿಗೆ ಸ್ಪಂದಿಸಿತು. ನಂತರ ಹಲವಾರು ಅಖಾಡಾಗಳು ಈ ಮೇಳದಿಂದ ಹಿಂದೆ ಸರಿದವು. ಆಗ ಸಾಮಾನ್ಯ ಭಕ್ತರು ಅವರ ಮಾದರಿಯನ್ನು ಅನುಸರಿಸಿದರು.

ಹರಿದ್ವಾರದಿಂದ ದೇವ್‌ಪ್ರಯಾಗ್‌ವರೆಗಿನ 641 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುಂಭ ಮೇಳ ಕ್ಷೇತ್ರದಲ್ಲಿ ಎಲ್ಲಿಯೂ ಗಂಭೀರವಾದ ಅಹಿತಕರ ಘಟನೆಗಳಿಲ್ಲದೆ ಈ ಮೇಳ ಸಂಭವಿಸಿದೆ ಎಂದು ಮೇಳದ ಸಂಘಟಕರು ಹೇಳುತ್ತಾರೆ.

ಆದರೆ ಕೋರ್ಟುಗಳು, ವೈದ್ಯಕೀಯ ತಜ್ಞರು ಈ ಮೇಳ ಕೊರೊನಾ ಸೂಪರ್-ಸ್ಪ್ರೆಡರ್ ಆಗಿತು ಎಂದು ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...