Homeಕರೋನಾ ತಲ್ಲಣಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

- Advertisement -
- Advertisement -

ಹರಿದ್ವಾರದ ಕುಂಭಮೇಳದಲ್ಲಿ ಒಟ್ಟು ಸುಮಾರು ಎಪ್ಪತ್ತು ಲಕ್ಷ ಭಕ್ತರು ಭಾಗವಹಿಸಿದ್ದರು, ಇದು ಶುಕ್ರವಾರ ಕೊನೆಗೊಂಡಿದೆ. ಈ ಕಾರ್ಯಕ್ರಮ ಕೊರೋನಾ “ಸೂಪರ್-ಸ್ಪ್ರೆಡರ್” ಆಗಿ ಕೆಲಸ ಮಾಡಿದೆ ಎಂದು ಕೆಲವು ತಜ್ಞರು, ಹಿರಿಯ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹಲವಾರು ಸಲ ಕೋರ್ಟುಗಳು, ಈ ಮೇಳಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ.

ಸಾಮಾನ್ಯ ಪರಿಸ್ಥಿತಿಗಳಲ್ಲಿ ಮೂರು ತಿಂಗಳುಗಳ ಕಾಲ ನಡೆದ ಕುಂಭಮೇಳವು ಕೋವಿಡ್ ಕಳವಳದಿಂದಾಗಿ ಈ ಬಾರಿ ಔಪಚಾರಿಕವಾಗಿ ಏಪ್ರಿಲ್ 1 ರ ಹೊತ್ತಿಗೆ ಪ್ರಾರಂಭವಾಯಿತು. ಆದರೂ ಒಟ್ಟು ಸುಮಾರು 70 ಲಕ್ಷ ಜನರು ಭಾಗವಹಿಸಿದ ಈ ಮೇಳ ಕೊರೋನಾ ವೃದ್ಧಿಗೆ ಕಾರಣವಾಗಿತು ಎಂದು ಆರೋಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೇಳದಲ್ಲಿ ವೈದ್ಯಕೀಯ ಸಿಬ್ಬಂದಿ ನಡೆಸಿದ ಸುಮಾರು ಎರಡು ಲಕ್ಷ ಪರೀಕ್ಷೆಗಳಲ್ಲಿ ಸುಮಾರು 2,600 ಭಕ್ತರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತು. ಹಲವು ಹಿರಿಯ ಸಾಧುಗಳು ಸಾವಿಗೀಡಾದರು.

ಏಪ್ರಿಲ್ 12, 14 ಮತ್ತು 27 ರಂದು ಮೂರು ಶಾಹಿ ಸ್ನಾನಗಳು (ಪವಿತ್ರ ಸ್ನಾನ) ನಡೆದವು, ಕೋರ್ಟುಗಳು ಮತ್ತು ದೇಶದ ನಾಗರೀಕರ ಆಕ್ಷೇಪಕ್ಕೆ ಮಣಿದು ಕೊನೆಯ ಸ್ನಾನವನ್ನು ಸಾಂಕೇತಿಕವಾಗಿ ನಡೆಸಲಾಯಿತಾದರೂ ಭಕ್ತರ ಸಂಖ್ಯೆ ಇದ್ದೇ ಇತ್ತು.

ಕೊರೊನಾ ವೈರಸ್ ಉಲ್ಬಣವನ್ನು ಹೆಚ್ಚಿಸುವ ಸಾಧ್ಯತೆಯನ್ನು ಪರಿಗಣಿಸಿ ಕುಂಭವು ದೊಡ್ಡ ಸವಾಲಾಗಿತ್ತು ಎಂದು ಹರಿದ್ವಾರ ಮುಖ್ಯ ವೈದ್ಯಕೀಯ ಅಧಿಕಾರಿ ಎಸ್.ಕೆ. ಝಾ ಹೇಳಿದ್ದರು.
ಕುಂಭದ ವೈದ್ಯಕೀಯ ಅಧಿಕಾರಿ ಅರ್ಜುನ್ ಸಿಂಗ್ ಸೆಂಗಾರ್, ” ಹಿಂದಿನ ಸಲಕ್ಕಿಂತ ಜನಸಂದಣಿ ಕಡಿಮೆ ಇದ್ದರೂ, ಕೊರೊನಾ ಕಾರಣಕ್ಕಾಗಿ ಈ ಪರಿಸ್ಥಿತಿ ನಮಗೆ ಸವಾಲಾಗಿತ್ತು, ಸಾಮಾಜಿಕ ಅಂತರದ ಮಾನದಂಡಗಳನ್ನು ಉಲ್ಲಂಘಿಸುವಷ್ಟು ಜನಸಂದಣಿಯಂತೂ ಇತ್ತು’ ಎಂದು ಹೇಳಿದರು.

“ಭಕ್ತರಿಗೆ ಆರಂಭದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಇಷ್ಟವಿರಲಿಲ್ಲ. ಆದರೆ ಏಪ್ರಿಲ್ 14 ರಂದು ಎರಡನೇ ಶಾಹಿ ಸ್ನಾನದ ನಂತರ ಅವರು ಪಶ್ಚಾತ್ತಾಪಪಟ್ಟರು” ಎಂದು ಅವರು ಹೇಳಿದರು.

“ಉತ್ತರ ಪ್ರದೇಶದಿಂದ ಕರೆತಂದ ಆರೋಗ್ಯ ಸಿಬ್ಬಂದಿಯ ಸಹಾಯದಿಂದ ನಾವು ಒಟ್ಟು 1,90,083 ಪರೀಕ್ಷೆಗಳನ್ನು ನಡೆಸಿದ್ದೇವೆ, ಅದರಲ್ಲಿ 2642 ಪಾಸಿಟಿವ್ ವರದಿ ಬಂದಿವೆ’ ಎಂದು ಅವರು ಹೇಳಿದರು.

ಭಾರಿ ಟೀಕೆಗಳು ವ್ಯಕ್ತವಾದ ನಂತರ, ಕುಂಭದಲ್ಲಿ ತಮ್ಮ ಪ್ರಾತಿನಿಧ್ಯವನ್ನು ಸಾಂಕೇತಿಕವಾಗಿ ಇರಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರ ಜನಸಂದಣಿಯು ಹೊರಬರಲು ಪ್ರಾರಂಭಿಸಿತು.

ಮೇಳಕ್ಕೆ ಹಾಜರಾಗುವ ಪಂಗಡಗಳಲ್ಲಿ ಅತಿ ದೊಡ್ಡದಾದ ಜೂನಾ ಅಖಾಡಾ, ಪ್ರಧಾನಿ ಮೋದಿಯವರ ಮನವಿಗೆ ಮೊದಲ ಬಾರಿಗೆ ಸ್ಪಂದಿಸಿತು. ನಂತರ ಹಲವಾರು ಅಖಾಡಾಗಳು ಈ ಮೇಳದಿಂದ ಹಿಂದೆ ಸರಿದವು. ಆಗ ಸಾಮಾನ್ಯ ಭಕ್ತರು ಅವರ ಮಾದರಿಯನ್ನು ಅನುಸರಿಸಿದರು.

ಹರಿದ್ವಾರದಿಂದ ದೇವ್‌ಪ್ರಯಾಗ್‌ವರೆಗಿನ 641 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುಂಭ ಮೇಳ ಕ್ಷೇತ್ರದಲ್ಲಿ ಎಲ್ಲಿಯೂ ಗಂಭೀರವಾದ ಅಹಿತಕರ ಘಟನೆಗಳಿಲ್ಲದೆ ಈ ಮೇಳ ಸಂಭವಿಸಿದೆ ಎಂದು ಮೇಳದ ಸಂಘಟಕರು ಹೇಳುತ್ತಾರೆ.

ಆದರೆ ಕೋರ್ಟುಗಳು, ವೈದ್ಯಕೀಯ ತಜ್ಞರು ಈ ಮೇಳ ಕೊರೊನಾ ಸೂಪರ್-ಸ್ಪ್ರೆಡರ್ ಆಗಿತು ಎಂದು ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...