Homeಕರೋನಾ ತಲ್ಲಣಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

- Advertisement -
- Advertisement -

ಹರಿದ್ವಾರದ ಕುಂಭಮೇಳದಲ್ಲಿ ಒಟ್ಟು ಸುಮಾರು ಎಪ್ಪತ್ತು ಲಕ್ಷ ಭಕ್ತರು ಭಾಗವಹಿಸಿದ್ದರು, ಇದು ಶುಕ್ರವಾರ ಕೊನೆಗೊಂಡಿದೆ. ಈ ಕಾರ್ಯಕ್ರಮ ಕೊರೋನಾ “ಸೂಪರ್-ಸ್ಪ್ರೆಡರ್” ಆಗಿ ಕೆಲಸ ಮಾಡಿದೆ ಎಂದು ಕೆಲವು ತಜ್ಞರು, ಹಿರಿಯ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹಲವಾರು ಸಲ ಕೋರ್ಟುಗಳು, ಈ ಮೇಳಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ.

ಸಾಮಾನ್ಯ ಪರಿಸ್ಥಿತಿಗಳಲ್ಲಿ ಮೂರು ತಿಂಗಳುಗಳ ಕಾಲ ನಡೆದ ಕುಂಭಮೇಳವು ಕೋವಿಡ್ ಕಳವಳದಿಂದಾಗಿ ಈ ಬಾರಿ ಔಪಚಾರಿಕವಾಗಿ ಏಪ್ರಿಲ್ 1 ರ ಹೊತ್ತಿಗೆ ಪ್ರಾರಂಭವಾಯಿತು. ಆದರೂ ಒಟ್ಟು ಸುಮಾರು 70 ಲಕ್ಷ ಜನರು ಭಾಗವಹಿಸಿದ ಈ ಮೇಳ ಕೊರೋನಾ ವೃದ್ಧಿಗೆ ಕಾರಣವಾಗಿತು ಎಂದು ಆರೋಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೇಳದಲ್ಲಿ ವೈದ್ಯಕೀಯ ಸಿಬ್ಬಂದಿ ನಡೆಸಿದ ಸುಮಾರು ಎರಡು ಲಕ್ಷ ಪರೀಕ್ಷೆಗಳಲ್ಲಿ ಸುಮಾರು 2,600 ಭಕ್ತರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತು. ಹಲವು ಹಿರಿಯ ಸಾಧುಗಳು ಸಾವಿಗೀಡಾದರು.

ಏಪ್ರಿಲ್ 12, 14 ಮತ್ತು 27 ರಂದು ಮೂರು ಶಾಹಿ ಸ್ನಾನಗಳು (ಪವಿತ್ರ ಸ್ನಾನ) ನಡೆದವು, ಕೋರ್ಟುಗಳು ಮತ್ತು ದೇಶದ ನಾಗರೀಕರ ಆಕ್ಷೇಪಕ್ಕೆ ಮಣಿದು ಕೊನೆಯ ಸ್ನಾನವನ್ನು ಸಾಂಕೇತಿಕವಾಗಿ ನಡೆಸಲಾಯಿತಾದರೂ ಭಕ್ತರ ಸಂಖ್ಯೆ ಇದ್ದೇ ಇತ್ತು.

ಕೊರೊನಾ ವೈರಸ್ ಉಲ್ಬಣವನ್ನು ಹೆಚ್ಚಿಸುವ ಸಾಧ್ಯತೆಯನ್ನು ಪರಿಗಣಿಸಿ ಕುಂಭವು ದೊಡ್ಡ ಸವಾಲಾಗಿತ್ತು ಎಂದು ಹರಿದ್ವಾರ ಮುಖ್ಯ ವೈದ್ಯಕೀಯ ಅಧಿಕಾರಿ ಎಸ್.ಕೆ. ಝಾ ಹೇಳಿದ್ದರು.
ಕುಂಭದ ವೈದ್ಯಕೀಯ ಅಧಿಕಾರಿ ಅರ್ಜುನ್ ಸಿಂಗ್ ಸೆಂಗಾರ್, ” ಹಿಂದಿನ ಸಲಕ್ಕಿಂತ ಜನಸಂದಣಿ ಕಡಿಮೆ ಇದ್ದರೂ, ಕೊರೊನಾ ಕಾರಣಕ್ಕಾಗಿ ಈ ಪರಿಸ್ಥಿತಿ ನಮಗೆ ಸವಾಲಾಗಿತ್ತು, ಸಾಮಾಜಿಕ ಅಂತರದ ಮಾನದಂಡಗಳನ್ನು ಉಲ್ಲಂಘಿಸುವಷ್ಟು ಜನಸಂದಣಿಯಂತೂ ಇತ್ತು’ ಎಂದು ಹೇಳಿದರು.

“ಭಕ್ತರಿಗೆ ಆರಂಭದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಇಷ್ಟವಿರಲಿಲ್ಲ. ಆದರೆ ಏಪ್ರಿಲ್ 14 ರಂದು ಎರಡನೇ ಶಾಹಿ ಸ್ನಾನದ ನಂತರ ಅವರು ಪಶ್ಚಾತ್ತಾಪಪಟ್ಟರು” ಎಂದು ಅವರು ಹೇಳಿದರು.

“ಉತ್ತರ ಪ್ರದೇಶದಿಂದ ಕರೆತಂದ ಆರೋಗ್ಯ ಸಿಬ್ಬಂದಿಯ ಸಹಾಯದಿಂದ ನಾವು ಒಟ್ಟು 1,90,083 ಪರೀಕ್ಷೆಗಳನ್ನು ನಡೆಸಿದ್ದೇವೆ, ಅದರಲ್ಲಿ 2642 ಪಾಸಿಟಿವ್ ವರದಿ ಬಂದಿವೆ’ ಎಂದು ಅವರು ಹೇಳಿದರು.

ಭಾರಿ ಟೀಕೆಗಳು ವ್ಯಕ್ತವಾದ ನಂತರ, ಕುಂಭದಲ್ಲಿ ತಮ್ಮ ಪ್ರಾತಿನಿಧ್ಯವನ್ನು ಸಾಂಕೇತಿಕವಾಗಿ ಇರಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರ ಜನಸಂದಣಿಯು ಹೊರಬರಲು ಪ್ರಾರಂಭಿಸಿತು.

ಮೇಳಕ್ಕೆ ಹಾಜರಾಗುವ ಪಂಗಡಗಳಲ್ಲಿ ಅತಿ ದೊಡ್ಡದಾದ ಜೂನಾ ಅಖಾಡಾ, ಪ್ರಧಾನಿ ಮೋದಿಯವರ ಮನವಿಗೆ ಮೊದಲ ಬಾರಿಗೆ ಸ್ಪಂದಿಸಿತು. ನಂತರ ಹಲವಾರು ಅಖಾಡಾಗಳು ಈ ಮೇಳದಿಂದ ಹಿಂದೆ ಸರಿದವು. ಆಗ ಸಾಮಾನ್ಯ ಭಕ್ತರು ಅವರ ಮಾದರಿಯನ್ನು ಅನುಸರಿಸಿದರು.

ಹರಿದ್ವಾರದಿಂದ ದೇವ್‌ಪ್ರಯಾಗ್‌ವರೆಗಿನ 641 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುಂಭ ಮೇಳ ಕ್ಷೇತ್ರದಲ್ಲಿ ಎಲ್ಲಿಯೂ ಗಂಭೀರವಾದ ಅಹಿತಕರ ಘಟನೆಗಳಿಲ್ಲದೆ ಈ ಮೇಳ ಸಂಭವಿಸಿದೆ ಎಂದು ಮೇಳದ ಸಂಘಟಕರು ಹೇಳುತ್ತಾರೆ.

ಆದರೆ ಕೋರ್ಟುಗಳು, ವೈದ್ಯಕೀಯ ತಜ್ಞರು ಈ ಮೇಳ ಕೊರೊನಾ ಸೂಪರ್-ಸ್ಪ್ರೆಡರ್ ಆಗಿತು ಎಂದು ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...