Homeಕರೋನಾ ತಲ್ಲಣಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

- Advertisement -
- Advertisement -

ಹರಿದ್ವಾರದ ಕುಂಭಮೇಳದಲ್ಲಿ ಒಟ್ಟು ಸುಮಾರು ಎಪ್ಪತ್ತು ಲಕ್ಷ ಭಕ್ತರು ಭಾಗವಹಿಸಿದ್ದರು, ಇದು ಶುಕ್ರವಾರ ಕೊನೆಗೊಂಡಿದೆ. ಈ ಕಾರ್ಯಕ್ರಮ ಕೊರೋನಾ “ಸೂಪರ್-ಸ್ಪ್ರೆಡರ್” ಆಗಿ ಕೆಲಸ ಮಾಡಿದೆ ಎಂದು ಕೆಲವು ತಜ್ಞರು, ಹಿರಿಯ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹಲವಾರು ಸಲ ಕೋರ್ಟುಗಳು, ಈ ಮೇಳಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ.

ಸಾಮಾನ್ಯ ಪರಿಸ್ಥಿತಿಗಳಲ್ಲಿ ಮೂರು ತಿಂಗಳುಗಳ ಕಾಲ ನಡೆದ ಕುಂಭಮೇಳವು ಕೋವಿಡ್ ಕಳವಳದಿಂದಾಗಿ ಈ ಬಾರಿ ಔಪಚಾರಿಕವಾಗಿ ಏಪ್ರಿಲ್ 1 ರ ಹೊತ್ತಿಗೆ ಪ್ರಾರಂಭವಾಯಿತು. ಆದರೂ ಒಟ್ಟು ಸುಮಾರು 70 ಲಕ್ಷ ಜನರು ಭಾಗವಹಿಸಿದ ಈ ಮೇಳ ಕೊರೋನಾ ವೃದ್ಧಿಗೆ ಕಾರಣವಾಗಿತು ಎಂದು ಆರೋಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೇಳದಲ್ಲಿ ವೈದ್ಯಕೀಯ ಸಿಬ್ಬಂದಿ ನಡೆಸಿದ ಸುಮಾರು ಎರಡು ಲಕ್ಷ ಪರೀಕ್ಷೆಗಳಲ್ಲಿ ಸುಮಾರು 2,600 ಭಕ್ತರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತು. ಹಲವು ಹಿರಿಯ ಸಾಧುಗಳು ಸಾವಿಗೀಡಾದರು.

ಏಪ್ರಿಲ್ 12, 14 ಮತ್ತು 27 ರಂದು ಮೂರು ಶಾಹಿ ಸ್ನಾನಗಳು (ಪವಿತ್ರ ಸ್ನಾನ) ನಡೆದವು, ಕೋರ್ಟುಗಳು ಮತ್ತು ದೇಶದ ನಾಗರೀಕರ ಆಕ್ಷೇಪಕ್ಕೆ ಮಣಿದು ಕೊನೆಯ ಸ್ನಾನವನ್ನು ಸಾಂಕೇತಿಕವಾಗಿ ನಡೆಸಲಾಯಿತಾದರೂ ಭಕ್ತರ ಸಂಖ್ಯೆ ಇದ್ದೇ ಇತ್ತು.

ಕೊರೊನಾ ವೈರಸ್ ಉಲ್ಬಣವನ್ನು ಹೆಚ್ಚಿಸುವ ಸಾಧ್ಯತೆಯನ್ನು ಪರಿಗಣಿಸಿ ಕುಂಭವು ದೊಡ್ಡ ಸವಾಲಾಗಿತ್ತು ಎಂದು ಹರಿದ್ವಾರ ಮುಖ್ಯ ವೈದ್ಯಕೀಯ ಅಧಿಕಾರಿ ಎಸ್.ಕೆ. ಝಾ ಹೇಳಿದ್ದರು.
ಕುಂಭದ ವೈದ್ಯಕೀಯ ಅಧಿಕಾರಿ ಅರ್ಜುನ್ ಸಿಂಗ್ ಸೆಂಗಾರ್, ” ಹಿಂದಿನ ಸಲಕ್ಕಿಂತ ಜನಸಂದಣಿ ಕಡಿಮೆ ಇದ್ದರೂ, ಕೊರೊನಾ ಕಾರಣಕ್ಕಾಗಿ ಈ ಪರಿಸ್ಥಿತಿ ನಮಗೆ ಸವಾಲಾಗಿತ್ತು, ಸಾಮಾಜಿಕ ಅಂತರದ ಮಾನದಂಡಗಳನ್ನು ಉಲ್ಲಂಘಿಸುವಷ್ಟು ಜನಸಂದಣಿಯಂತೂ ಇತ್ತು’ ಎಂದು ಹೇಳಿದರು.

“ಭಕ್ತರಿಗೆ ಆರಂಭದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಇಷ್ಟವಿರಲಿಲ್ಲ. ಆದರೆ ಏಪ್ರಿಲ್ 14 ರಂದು ಎರಡನೇ ಶಾಹಿ ಸ್ನಾನದ ನಂತರ ಅವರು ಪಶ್ಚಾತ್ತಾಪಪಟ್ಟರು” ಎಂದು ಅವರು ಹೇಳಿದರು.

“ಉತ್ತರ ಪ್ರದೇಶದಿಂದ ಕರೆತಂದ ಆರೋಗ್ಯ ಸಿಬ್ಬಂದಿಯ ಸಹಾಯದಿಂದ ನಾವು ಒಟ್ಟು 1,90,083 ಪರೀಕ್ಷೆಗಳನ್ನು ನಡೆಸಿದ್ದೇವೆ, ಅದರಲ್ಲಿ 2642 ಪಾಸಿಟಿವ್ ವರದಿ ಬಂದಿವೆ’ ಎಂದು ಅವರು ಹೇಳಿದರು.

ಭಾರಿ ಟೀಕೆಗಳು ವ್ಯಕ್ತವಾದ ನಂತರ, ಕುಂಭದಲ್ಲಿ ತಮ್ಮ ಪ್ರಾತಿನಿಧ್ಯವನ್ನು ಸಾಂಕೇತಿಕವಾಗಿ ಇರಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರ ಜನಸಂದಣಿಯು ಹೊರಬರಲು ಪ್ರಾರಂಭಿಸಿತು.

ಮೇಳಕ್ಕೆ ಹಾಜರಾಗುವ ಪಂಗಡಗಳಲ್ಲಿ ಅತಿ ದೊಡ್ಡದಾದ ಜೂನಾ ಅಖಾಡಾ, ಪ್ರಧಾನಿ ಮೋದಿಯವರ ಮನವಿಗೆ ಮೊದಲ ಬಾರಿಗೆ ಸ್ಪಂದಿಸಿತು. ನಂತರ ಹಲವಾರು ಅಖಾಡಾಗಳು ಈ ಮೇಳದಿಂದ ಹಿಂದೆ ಸರಿದವು. ಆಗ ಸಾಮಾನ್ಯ ಭಕ್ತರು ಅವರ ಮಾದರಿಯನ್ನು ಅನುಸರಿಸಿದರು.

ಹರಿದ್ವಾರದಿಂದ ದೇವ್‌ಪ್ರಯಾಗ್‌ವರೆಗಿನ 641 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುಂಭ ಮೇಳ ಕ್ಷೇತ್ರದಲ್ಲಿ ಎಲ್ಲಿಯೂ ಗಂಭೀರವಾದ ಅಹಿತಕರ ಘಟನೆಗಳಿಲ್ಲದೆ ಈ ಮೇಳ ಸಂಭವಿಸಿದೆ ಎಂದು ಮೇಳದ ಸಂಘಟಕರು ಹೇಳುತ್ತಾರೆ.

ಆದರೆ ಕೋರ್ಟುಗಳು, ವೈದ್ಯಕೀಯ ತಜ್ಞರು ಈ ಮೇಳ ಕೊರೊನಾ ಸೂಪರ್-ಸ್ಪ್ರೆಡರ್ ಆಗಿತು ಎಂದು ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....