Homeಕರೋನಾ ತಲ್ಲಣಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

- Advertisement -
- Advertisement -

ಹರಿದ್ವಾರದ ಕುಂಭಮೇಳದಲ್ಲಿ ಒಟ್ಟು ಸುಮಾರು ಎಪ್ಪತ್ತು ಲಕ್ಷ ಭಕ್ತರು ಭಾಗವಹಿಸಿದ್ದರು, ಇದು ಶುಕ್ರವಾರ ಕೊನೆಗೊಂಡಿದೆ. ಈ ಕಾರ್ಯಕ್ರಮ ಕೊರೋನಾ “ಸೂಪರ್-ಸ್ಪ್ರೆಡರ್” ಆಗಿ ಕೆಲಸ ಮಾಡಿದೆ ಎಂದು ಕೆಲವು ತಜ್ಞರು, ಹಿರಿಯ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹಲವಾರು ಸಲ ಕೋರ್ಟುಗಳು, ಈ ಮೇಳಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ.

ಸಾಮಾನ್ಯ ಪರಿಸ್ಥಿತಿಗಳಲ್ಲಿ ಮೂರು ತಿಂಗಳುಗಳ ಕಾಲ ನಡೆದ ಕುಂಭಮೇಳವು ಕೋವಿಡ್ ಕಳವಳದಿಂದಾಗಿ ಈ ಬಾರಿ ಔಪಚಾರಿಕವಾಗಿ ಏಪ್ರಿಲ್ 1 ರ ಹೊತ್ತಿಗೆ ಪ್ರಾರಂಭವಾಯಿತು. ಆದರೂ ಒಟ್ಟು ಸುಮಾರು 70 ಲಕ್ಷ ಜನರು ಭಾಗವಹಿಸಿದ ಈ ಮೇಳ ಕೊರೋನಾ ವೃದ್ಧಿಗೆ ಕಾರಣವಾಗಿತು ಎಂದು ಆರೋಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೇಳದಲ್ಲಿ ವೈದ್ಯಕೀಯ ಸಿಬ್ಬಂದಿ ನಡೆಸಿದ ಸುಮಾರು ಎರಡು ಲಕ್ಷ ಪರೀಕ್ಷೆಗಳಲ್ಲಿ ಸುಮಾರು 2,600 ಭಕ್ತರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತು. ಹಲವು ಹಿರಿಯ ಸಾಧುಗಳು ಸಾವಿಗೀಡಾದರು.

ಏಪ್ರಿಲ್ 12, 14 ಮತ್ತು 27 ರಂದು ಮೂರು ಶಾಹಿ ಸ್ನಾನಗಳು (ಪವಿತ್ರ ಸ್ನಾನ) ನಡೆದವು, ಕೋರ್ಟುಗಳು ಮತ್ತು ದೇಶದ ನಾಗರೀಕರ ಆಕ್ಷೇಪಕ್ಕೆ ಮಣಿದು ಕೊನೆಯ ಸ್ನಾನವನ್ನು ಸಾಂಕೇತಿಕವಾಗಿ ನಡೆಸಲಾಯಿತಾದರೂ ಭಕ್ತರ ಸಂಖ್ಯೆ ಇದ್ದೇ ಇತ್ತು.

ಕೊರೊನಾ ವೈರಸ್ ಉಲ್ಬಣವನ್ನು ಹೆಚ್ಚಿಸುವ ಸಾಧ್ಯತೆಯನ್ನು ಪರಿಗಣಿಸಿ ಕುಂಭವು ದೊಡ್ಡ ಸವಾಲಾಗಿತ್ತು ಎಂದು ಹರಿದ್ವಾರ ಮುಖ್ಯ ವೈದ್ಯಕೀಯ ಅಧಿಕಾರಿ ಎಸ್.ಕೆ. ಝಾ ಹೇಳಿದ್ದರು.
ಕುಂಭದ ವೈದ್ಯಕೀಯ ಅಧಿಕಾರಿ ಅರ್ಜುನ್ ಸಿಂಗ್ ಸೆಂಗಾರ್, ” ಹಿಂದಿನ ಸಲಕ್ಕಿಂತ ಜನಸಂದಣಿ ಕಡಿಮೆ ಇದ್ದರೂ, ಕೊರೊನಾ ಕಾರಣಕ್ಕಾಗಿ ಈ ಪರಿಸ್ಥಿತಿ ನಮಗೆ ಸವಾಲಾಗಿತ್ತು, ಸಾಮಾಜಿಕ ಅಂತರದ ಮಾನದಂಡಗಳನ್ನು ಉಲ್ಲಂಘಿಸುವಷ್ಟು ಜನಸಂದಣಿಯಂತೂ ಇತ್ತು’ ಎಂದು ಹೇಳಿದರು.

“ಭಕ್ತರಿಗೆ ಆರಂಭದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಇಷ್ಟವಿರಲಿಲ್ಲ. ಆದರೆ ಏಪ್ರಿಲ್ 14 ರಂದು ಎರಡನೇ ಶಾಹಿ ಸ್ನಾನದ ನಂತರ ಅವರು ಪಶ್ಚಾತ್ತಾಪಪಟ್ಟರು” ಎಂದು ಅವರು ಹೇಳಿದರು.

“ಉತ್ತರ ಪ್ರದೇಶದಿಂದ ಕರೆತಂದ ಆರೋಗ್ಯ ಸಿಬ್ಬಂದಿಯ ಸಹಾಯದಿಂದ ನಾವು ಒಟ್ಟು 1,90,083 ಪರೀಕ್ಷೆಗಳನ್ನು ನಡೆಸಿದ್ದೇವೆ, ಅದರಲ್ಲಿ 2642 ಪಾಸಿಟಿವ್ ವರದಿ ಬಂದಿವೆ’ ಎಂದು ಅವರು ಹೇಳಿದರು.

ಭಾರಿ ಟೀಕೆಗಳು ವ್ಯಕ್ತವಾದ ನಂತರ, ಕುಂಭದಲ್ಲಿ ತಮ್ಮ ಪ್ರಾತಿನಿಧ್ಯವನ್ನು ಸಾಂಕೇತಿಕವಾಗಿ ಇರಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರ ಜನಸಂದಣಿಯು ಹೊರಬರಲು ಪ್ರಾರಂಭಿಸಿತು.

ಮೇಳಕ್ಕೆ ಹಾಜರಾಗುವ ಪಂಗಡಗಳಲ್ಲಿ ಅತಿ ದೊಡ್ಡದಾದ ಜೂನಾ ಅಖಾಡಾ, ಪ್ರಧಾನಿ ಮೋದಿಯವರ ಮನವಿಗೆ ಮೊದಲ ಬಾರಿಗೆ ಸ್ಪಂದಿಸಿತು. ನಂತರ ಹಲವಾರು ಅಖಾಡಾಗಳು ಈ ಮೇಳದಿಂದ ಹಿಂದೆ ಸರಿದವು. ಆಗ ಸಾಮಾನ್ಯ ಭಕ್ತರು ಅವರ ಮಾದರಿಯನ್ನು ಅನುಸರಿಸಿದರು.

ಹರಿದ್ವಾರದಿಂದ ದೇವ್‌ಪ್ರಯಾಗ್‌ವರೆಗಿನ 641 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುಂಭ ಮೇಳ ಕ್ಷೇತ್ರದಲ್ಲಿ ಎಲ್ಲಿಯೂ ಗಂಭೀರವಾದ ಅಹಿತಕರ ಘಟನೆಗಳಿಲ್ಲದೆ ಈ ಮೇಳ ಸಂಭವಿಸಿದೆ ಎಂದು ಮೇಳದ ಸಂಘಟಕರು ಹೇಳುತ್ತಾರೆ.

ಆದರೆ ಕೋರ್ಟುಗಳು, ವೈದ್ಯಕೀಯ ತಜ್ಞರು ಈ ಮೇಳ ಕೊರೊನಾ ಸೂಪರ್-ಸ್ಪ್ರೆಡರ್ ಆಗಿತು ಎಂದು ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...