Homeಕರ್ನಾಟಕಕರ್ನಾಟಕದಲ್ಲಿ ಶೇ.70 ರಷ್ಟು ತಾಯಂದಿರ ಸಾವುಗಳನ್ನು ತಪ್ಪಿಸಬಹುದಾಗಿತ್ತು: ವರದಿ

ಕರ್ನಾಟಕದಲ್ಲಿ ಶೇ.70 ರಷ್ಟು ತಾಯಂದಿರ ಸಾವುಗಳನ್ನು ತಪ್ಪಿಸಬಹುದಾಗಿತ್ತು: ವರದಿ

- Advertisement -
- Advertisement -

2024 ರ ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ಕರ್ನಾಟಕದಲ್ಲಿ ಸಂಭವಿಸಿದ ಶೇ.70 ಕ್ಕೂ ಹೆಚ್ಚು ತಾಯಂದಿರ ಸಾವುಗಳನ್ನು ತಡೆಯಬಹುದಿತ್ತು ಎಂದು ರಾಜ್ಯದಲ್ಲಿ ತಾಯಂದಿರ ಮರಣಗಳ ಕುರಿತಾದ ಮಧ್ಯಂತರ ಲೆಕ್ಕಪರಿಶೋಧನಾ ವರದಿ ಹೇಳಿದೆ.

ಶುಕ್ರವಾರ 18 ಪುಟಗಳ ಮಧ್ಯಂತರ ವರದಿಯನ್ನು ಮಂಡಿಸಿದ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂಬತ್ತು ತಿಂಗಳ ಈ ಅವಧಿಯಲ್ಲಿ ಒಟ್ಟು 464 ತಾಯಂದಿರ ಸಾವುಗಳನ್ನು ಲೆಕ್ಕಪರಿಶೋಧಿಸಲಾಗಿದ್ದು, ಬೆಂಗಳೂರು ನಗರ (71), ಬಳ್ಳಾರಿ (38), ಧಾರವಾಡ (35), ಕಲಬುರಗಿ (33), ಮತ್ತು ಬೆಳಗಾವಿ (31) ಅತಿ ಹೆಚ್ಚು ದಾಖಲಾಗಿವೆ. ಇದರಲ್ಲಿ ಇತರ ರಾಜ್ಯಗಳ 18 ಮಹಿಳೆಯರ ಸಾವುಗಳು ಸಹ ಸೇರಿವೆ.

ಸಾವುಗಳಲ್ಲಿ ಸುಮಾರು ಶೇ.80 ರಷ್ಟು 19 ಮತ್ತು 30 ವರ್ಷ ವಯಸ್ಸಿನ ಮಹಿಳೆಯರಲ್ಲಿ ಸಂಭವಿಸಿವೆ. ಪ್ರಸವಪೂರ್ವ ಆರೈಕೆಯ ಸಮಯದಲ್ಲಿ ಸಾವನ್ನಪ್ಪಿದ ಮಹಿಳೆಯರಲ್ಲಿ ಸುಮಾರು 62.6% ರಷ್ಟು ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದರು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಏಳು ಹುಡುಗಿಯರು ಸಹ ಈ ಅವಧಿಯಲ್ಲಿ ಸಾವನ್ನಪ್ಪಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆದ ಐದು ತಾಯಂದಿರ ಮರಣದ ನಂತರ, ಎಲ್ಲಾ ತಾಯಂದಿರ ಮರಣಗಳ ಸಂಭವನೀಯ ಕಾರಣಗಳನ್ನು ಗುರುತಿಸಲು ಇಲಾಖೆಯು 15 ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತು. ಬಳ್ಳಾರಿಯ ತಾಯಂದಿರ ಮರಣಗಳು ಎಂಡೋಟಾಕ್ಸಿನ್‌ಗಳಿಂದಾಗಿ ‘ಹೆಚ್ಚಾಗಿ’ ಸಂಭವಿಸಿವೆ. ಪಶ್ಚಿಮ ಬಂಗಾ ಫಾರ್ಮಾಸ್ಯುಟಿಕಲ್ಸ್‌ನ ಕಳಪೆ-ಗುಣಮಟ್ಟದ ರಿಂಗರ್ಸ್ ಲ್ಯಾಕ್ಟೇಟ್ ದ್ರಾವಣಕ್ಕೆ ಸಂಬಂಧಿಸಿವೆ ಎಂದು ಸಮಿತಿ ಕಂಡುಕೊಂಡಿದೆ.

ಏಪ್ರಿಲ್ ಮತ್ತು ಡಿಸೆಂಬರ್ ನಡುವೆ, ಅದೇ ಕಂಪನಿಯ ರಿಂಗರ್ಸ್ ಲ್ಯಾಕ್ಟೇಟ್ ಇತರ 13 ಸಾವುಗಳಿಗೆ ಸಂಬಂಧಿಸಿದೆ ಎಂದು ಅವರು ಕಂಡುಕೊಂಡರು. ರಾಯಚೂರು ಮತ್ತು ಬೆಂಗಳೂರು ನಗರದಲ್ಲಿ ತಲಾ ನಾಲ್ಕು, ಉತ್ತರ ಕನ್ನಡದಲ್ಲಿ ಮೂರು ಮತ್ತು ಯಾದಗಿರಿ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.

2024-25ರ ವೇಳೆಗೆ ರಾಜ್ಯದ ತಾಯಂದಿರ ಮರಣ ಪ್ರಮಾಣ (ಎಂಎಂಆರ್‌) 57 ರಷ್ಟಿದೆ, ತಡೆಗಟ್ಟಬಹುದಾದ ತಾಯಂದಿರ ಮರಣಗಳನ್ನು ಶೂನ್ಯಕ್ಕೆ ತರುವ ಇಲಾಖೆಯ ರೂ. 320 ಕೋಟಿ ಮಿಷನ್ ನಡೆಯುತ್ತಿದೆ ಎಂದು ಗುಂಡೂ ರಾವ್ ಹೇಳಿದ್ದಾರೆ. ಎರಡು ವರ್ಷಗಳಲ್ಲಿ ಎಂಎಂಆರ್‌ ಅನ್ನು ಕೇರಳದ 19 ಕ್ಕೆ ಸಮನಾಗಿಸುವ ಗುರಿಯನ್ನು ಅವರು ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

ಕರ್ನಾಟಕವು ಈ ವರ್ಷದ ಮೊದಲ ಮೂರು ತಿಂಗಳಲ್ಲಿ 102 ತಾಯಂದಿರ ಸಾವುಗಳನ್ನು ವರದಿ ಮಾಡಿದೆ, ಕಳೆದ ವರ್ಷದ ಇದೇ ಅವಧಿಯಲ್ಲಿ 148 ಸಾವುಗಳು ಸಂಭವಿಸಿದ್ದವು.

ಲೆಕ್ಕಪರಿಶೋಧನೆಯ ಹಲವು ವಿವರಗಳಲ್ಲಿ, ಸಾವನ್ನಪ್ಪಿದ 319 ಮಹಿಳೆಯರು (68.75%) ಹೆಚ್ಚಿನ ಅಪಾಯದ ಗರ್ಭಧಾರಣೆಯನ್ನು ಹೊಂದಿದ್ದರು ಎಂದು ಕಂಡುಬಂದಿದೆ. ಇದರಲ್ಲಿ ಗರ್ಭಾವಸ್ಥೆಯಲ್ಲಿ ಅಧಿಕ ರಕ್ತದೊತ್ತಡದ ಅಸ್ವಸ್ಥತೆ ಹೊಂದಿರುವ 153 ಮಹಿಳೆಯರು (33%) ಮತ್ತು ರಕ್ತಸ್ರಾವದಿಂದ ಸಾವನ್ನಪ್ಪಿದ 125 ಮಹಿಳೆಯರು (27%) ಸೇರಿದ್ದಾರೆ. ಸೆಪ್ಸಿಸ್ (9%), ಹೃದಯ ಸಮಸ್ಯೆಗಳು (4%), ಸೋಂಕುಗಳು (4%), ಪಲ್ಮನರಿ ಎಂಬಾಲಿಸಮ್ (3%) ಸೇರಿದಂತೆ ಇತರ ಕಾರಣಗಳನ್ನು ಗುರುತಿಸಲಾಗಿದೆ.

ಅಪಾಯಕಾರಿ ಅಂಶಗಳಿಗೆ ಮೊದಲೇ ಚಿಕಿತ್ಸೆ ನೀಡಿ, ಎಸ್‌ಒಪಿಗಳನ್ನು ಅಳವಡಿಸಿಕೊಂಡಿದ್ದರೆ; ರಕ್ತ ನಿಧಿಗಳು ಮತ್ತು ಇತರ ಉಪಕರಣಗಳನ್ನು ಸಿದ್ಧವಾಗಿರಿಸಿದ್ದರೆ, ಪ್ರಸವಪೂರ್ವ ಆರೈಕೆಯನ್ನು ಸುಧಾರಿಸಿದ್ದರೆ ಮತ್ತು ನೈಸರ್ಗಿಕ ಜನನಗಳನ್ನು ಉತ್ತೇಜಿಸಿದ್ದರೆ, ಕನಿಷ್ಠ 70% ಸಾವುಗಳನ್ನು ತಪ್ಪಿಸಬಹುದಿತ್ತು ಎಂದು ಸಮಿತಿಯು ಕಂಡುಹಿಡಿದಿದೆ.

ಮೊದಲ ತ್ರೈಮಾಸಿಕದಲ್ಲಿ ಎಲ್ಲ ಗರ್ಭಿಣಿಯರನ್ನು ಹೆಚ್ಚಿನ ಅಪಾಯಕಾರಿ ಅಂಶಗಳಿಗಾಗಿ ಪರೀಕ್ಷಿಸುವುದು, ಅಸ್ತಿತ್ವದಲ್ಲಿರುವ ಸೋಂಕುಗಳನ್ನು (ಎಚ್‌ಐವಿ, ಸಿಫಿಲಿಸ್, ಟಿಬಿ, ಹೆಪಟೈಟಿಸ್ ಇತ್ಯಾದಿ) ಮೇಲ್ವಿಚಾರಣೆ ಮಾಡುವುದು, ರಕ್ತ ಸಂಗ್ರಹ ಘಟಕಗಳು ಮತ್ತು ರಾಜ್ಯಾದ್ಯಂತ ಔಷಧಗಳು ಮತ್ತು ಇತರ ಉಪಕರಣಗಳನ್ನು ಬಲಪಡಿಸುವುದು; ಸಾಮಾನ್ಯ ಹೆರಿಗೆಗಳಿಗೆ ಮೂರು ದಿನಗಳ ಆಸ್ಪತ್ರೆ ವಾಸ್ತವ್ಯ ಮತ್ತು ಸಿ-ಸೆಕ್ಷನ್ ನಂತರ ಏಳು ದಿನಗಳವರೆಗೆ ಕಡ್ಡಾಯಗೊಳಿಸುವುದು ಸೇರಿದಂತೆ ತಾಯಂದಿರ ಮರಣವನ್ನು ಕಡಿಮೆ ಮಾಡಲು 27 ಶಿಫಾರಸುಗಳನ್ನು ಸಮಿತಿ ಪಟ್ಟಿ ಮಾಡಿದೆ.

“ರಕ್ತಹೀನತೆಯ ಚಿತಿತ್ಸೆಗೆ ನಾವು ಈಗ ಎಫ್‌ಸಿಎಂ (ಫೆರಿಕ್ ಕಾರ್ಬಾಕ್ಸಿಮಾಲ್ಟೋಸ್) ಇಂಜೆಕ್ಷನ್ ಅನ್ನು ಖರೀದಿಸುತ್ತಿದ್ದೇವೆ. ಎರಡನೇ ಮತ್ತು ಏಳನೇ ತಿಂಗಳ ನಡುವೆ, ಪ್ರತಿ ಪ್ರಸವಪೂರ್ವ ತಾಯಿಗೆ ಮಾಸಿಕವಾಗಿ (ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರಿಂದ) ಸಲಹೆ ನೀಡಬೇಕು, ಎಂಟನೇ ತಿಂಗಳಲ್ಲಿ ಎರಡು ಬಾರಿ ಮತ್ತು ಒಂಬತ್ತನೇ ತಿಂಗಳಲ್ಲಿ ವಾರಕ್ಕೊಮ್ಮೆ ನೀಡಬೇಕು” ಎಂದು ಗುಂಡೂರಾವ್ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ರಾಜ್ಯದ ಎಂಎಂಆರ್ ಕುಸಿಯುತ್ತಿದ್ದರೂ, “ವ್ಯವಸ್ಥಿತ ವೈಫಲ್ಯಗಳನ್ನು” ಪರಿಹರಿಸಲು ಬಹಳಷ್ಟು ಮಾಡಬೇಕಾಗಿದೆ ಎಂಬುದನ್ನು ಗುಂಡೂರಾವ್ ಗಮನಿಸಿದರು.

464 ಸಾವುಗಳಲ್ಲಿ 65.7% ಸರ್ಕಾರಿ ಸೌಲಭ್ಯದಲ್ಲಿ, 22.1% ಖಾಸಗಿ ಸೌಲಭ್ಯಗಳಲ್ಲಿ ಮತ್ತು ಸುಮಾರು 10% ಮನೆಯಿಂದ ಆಸ್ಪತ್ರೆಗೆ ಅಥವಾ ಆಸ್ಪತ್ರೆಗಳ ನಡುವೆ ಸಾಗಣೆಯಲ್ಲಿ ಸಂಭವಿಸಿದೆ. “10 ಪ್ರಕರಣಗಳಲ್ಲಿ, ವೈದ್ಯರ ನಿರ್ಲಕ್ಷ್ಯ ಕಂಡುಬಂದಿದೆ, ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಅವರಿಗೆ ನೋಟಿಸ್‌ಗಳನ್ನು ಸಲ್ಲಿಸಿದ್ದೇವೆ” ಎಂದು ಅವರು ಹೇಳಿದರು.

ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...