Homeಕರ್ನಾಟಕಕರ್ನಾಟಕದಲ್ಲಿ ಶೇ.70 ರಷ್ಟು ತಾಯಂದಿರ ಸಾವುಗಳನ್ನು ತಪ್ಪಿಸಬಹುದಾಗಿತ್ತು: ವರದಿ

ಕರ್ನಾಟಕದಲ್ಲಿ ಶೇ.70 ರಷ್ಟು ತಾಯಂದಿರ ಸಾವುಗಳನ್ನು ತಪ್ಪಿಸಬಹುದಾಗಿತ್ತು: ವರದಿ

- Advertisement -
- Advertisement -

2024 ರ ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ಕರ್ನಾಟಕದಲ್ಲಿ ಸಂಭವಿಸಿದ ಶೇ.70 ಕ್ಕೂ ಹೆಚ್ಚು ತಾಯಂದಿರ ಸಾವುಗಳನ್ನು ತಡೆಯಬಹುದಿತ್ತು ಎಂದು ರಾಜ್ಯದಲ್ಲಿ ತಾಯಂದಿರ ಮರಣಗಳ ಕುರಿತಾದ ಮಧ್ಯಂತರ ಲೆಕ್ಕಪರಿಶೋಧನಾ ವರದಿ ಹೇಳಿದೆ.

ಶುಕ್ರವಾರ 18 ಪುಟಗಳ ಮಧ್ಯಂತರ ವರದಿಯನ್ನು ಮಂಡಿಸಿದ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂಬತ್ತು ತಿಂಗಳ ಈ ಅವಧಿಯಲ್ಲಿ ಒಟ್ಟು 464 ತಾಯಂದಿರ ಸಾವುಗಳನ್ನು ಲೆಕ್ಕಪರಿಶೋಧಿಸಲಾಗಿದ್ದು, ಬೆಂಗಳೂರು ನಗರ (71), ಬಳ್ಳಾರಿ (38), ಧಾರವಾಡ (35), ಕಲಬುರಗಿ (33), ಮತ್ತು ಬೆಳಗಾವಿ (31) ಅತಿ ಹೆಚ್ಚು ದಾಖಲಾಗಿವೆ. ಇದರಲ್ಲಿ ಇತರ ರಾಜ್ಯಗಳ 18 ಮಹಿಳೆಯರ ಸಾವುಗಳು ಸಹ ಸೇರಿವೆ.

ಸಾವುಗಳಲ್ಲಿ ಸುಮಾರು ಶೇ.80 ರಷ್ಟು 19 ಮತ್ತು 30 ವರ್ಷ ವಯಸ್ಸಿನ ಮಹಿಳೆಯರಲ್ಲಿ ಸಂಭವಿಸಿವೆ. ಪ್ರಸವಪೂರ್ವ ಆರೈಕೆಯ ಸಮಯದಲ್ಲಿ ಸಾವನ್ನಪ್ಪಿದ ಮಹಿಳೆಯರಲ್ಲಿ ಸುಮಾರು 62.6% ರಷ್ಟು ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದರು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಏಳು ಹುಡುಗಿಯರು ಸಹ ಈ ಅವಧಿಯಲ್ಲಿ ಸಾವನ್ನಪ್ಪಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆದ ಐದು ತಾಯಂದಿರ ಮರಣದ ನಂತರ, ಎಲ್ಲಾ ತಾಯಂದಿರ ಮರಣಗಳ ಸಂಭವನೀಯ ಕಾರಣಗಳನ್ನು ಗುರುತಿಸಲು ಇಲಾಖೆಯು 15 ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತು. ಬಳ್ಳಾರಿಯ ತಾಯಂದಿರ ಮರಣಗಳು ಎಂಡೋಟಾಕ್ಸಿನ್‌ಗಳಿಂದಾಗಿ ‘ಹೆಚ್ಚಾಗಿ’ ಸಂಭವಿಸಿವೆ. ಪಶ್ಚಿಮ ಬಂಗಾ ಫಾರ್ಮಾಸ್ಯುಟಿಕಲ್ಸ್‌ನ ಕಳಪೆ-ಗುಣಮಟ್ಟದ ರಿಂಗರ್ಸ್ ಲ್ಯಾಕ್ಟೇಟ್ ದ್ರಾವಣಕ್ಕೆ ಸಂಬಂಧಿಸಿವೆ ಎಂದು ಸಮಿತಿ ಕಂಡುಕೊಂಡಿದೆ.

ಏಪ್ರಿಲ್ ಮತ್ತು ಡಿಸೆಂಬರ್ ನಡುವೆ, ಅದೇ ಕಂಪನಿಯ ರಿಂಗರ್ಸ್ ಲ್ಯಾಕ್ಟೇಟ್ ಇತರ 13 ಸಾವುಗಳಿಗೆ ಸಂಬಂಧಿಸಿದೆ ಎಂದು ಅವರು ಕಂಡುಕೊಂಡರು. ರಾಯಚೂರು ಮತ್ತು ಬೆಂಗಳೂರು ನಗರದಲ್ಲಿ ತಲಾ ನಾಲ್ಕು, ಉತ್ತರ ಕನ್ನಡದಲ್ಲಿ ಮೂರು ಮತ್ತು ಯಾದಗಿರಿ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.

2024-25ರ ವೇಳೆಗೆ ರಾಜ್ಯದ ತಾಯಂದಿರ ಮರಣ ಪ್ರಮಾಣ (ಎಂಎಂಆರ್‌) 57 ರಷ್ಟಿದೆ, ತಡೆಗಟ್ಟಬಹುದಾದ ತಾಯಂದಿರ ಮರಣಗಳನ್ನು ಶೂನ್ಯಕ್ಕೆ ತರುವ ಇಲಾಖೆಯ ರೂ. 320 ಕೋಟಿ ಮಿಷನ್ ನಡೆಯುತ್ತಿದೆ ಎಂದು ಗುಂಡೂ ರಾವ್ ಹೇಳಿದ್ದಾರೆ. ಎರಡು ವರ್ಷಗಳಲ್ಲಿ ಎಂಎಂಆರ್‌ ಅನ್ನು ಕೇರಳದ 19 ಕ್ಕೆ ಸಮನಾಗಿಸುವ ಗುರಿಯನ್ನು ಅವರು ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

ಕರ್ನಾಟಕವು ಈ ವರ್ಷದ ಮೊದಲ ಮೂರು ತಿಂಗಳಲ್ಲಿ 102 ತಾಯಂದಿರ ಸಾವುಗಳನ್ನು ವರದಿ ಮಾಡಿದೆ, ಕಳೆದ ವರ್ಷದ ಇದೇ ಅವಧಿಯಲ್ಲಿ 148 ಸಾವುಗಳು ಸಂಭವಿಸಿದ್ದವು.

ಲೆಕ್ಕಪರಿಶೋಧನೆಯ ಹಲವು ವಿವರಗಳಲ್ಲಿ, ಸಾವನ್ನಪ್ಪಿದ 319 ಮಹಿಳೆಯರು (68.75%) ಹೆಚ್ಚಿನ ಅಪಾಯದ ಗರ್ಭಧಾರಣೆಯನ್ನು ಹೊಂದಿದ್ದರು ಎಂದು ಕಂಡುಬಂದಿದೆ. ಇದರಲ್ಲಿ ಗರ್ಭಾವಸ್ಥೆಯಲ್ಲಿ ಅಧಿಕ ರಕ್ತದೊತ್ತಡದ ಅಸ್ವಸ್ಥತೆ ಹೊಂದಿರುವ 153 ಮಹಿಳೆಯರು (33%) ಮತ್ತು ರಕ್ತಸ್ರಾವದಿಂದ ಸಾವನ್ನಪ್ಪಿದ 125 ಮಹಿಳೆಯರು (27%) ಸೇರಿದ್ದಾರೆ. ಸೆಪ್ಸಿಸ್ (9%), ಹೃದಯ ಸಮಸ್ಯೆಗಳು (4%), ಸೋಂಕುಗಳು (4%), ಪಲ್ಮನರಿ ಎಂಬಾಲಿಸಮ್ (3%) ಸೇರಿದಂತೆ ಇತರ ಕಾರಣಗಳನ್ನು ಗುರುತಿಸಲಾಗಿದೆ.

ಅಪಾಯಕಾರಿ ಅಂಶಗಳಿಗೆ ಮೊದಲೇ ಚಿಕಿತ್ಸೆ ನೀಡಿ, ಎಸ್‌ಒಪಿಗಳನ್ನು ಅಳವಡಿಸಿಕೊಂಡಿದ್ದರೆ; ರಕ್ತ ನಿಧಿಗಳು ಮತ್ತು ಇತರ ಉಪಕರಣಗಳನ್ನು ಸಿದ್ಧವಾಗಿರಿಸಿದ್ದರೆ, ಪ್ರಸವಪೂರ್ವ ಆರೈಕೆಯನ್ನು ಸುಧಾರಿಸಿದ್ದರೆ ಮತ್ತು ನೈಸರ್ಗಿಕ ಜನನಗಳನ್ನು ಉತ್ತೇಜಿಸಿದ್ದರೆ, ಕನಿಷ್ಠ 70% ಸಾವುಗಳನ್ನು ತಪ್ಪಿಸಬಹುದಿತ್ತು ಎಂದು ಸಮಿತಿಯು ಕಂಡುಹಿಡಿದಿದೆ.

ಮೊದಲ ತ್ರೈಮಾಸಿಕದಲ್ಲಿ ಎಲ್ಲ ಗರ್ಭಿಣಿಯರನ್ನು ಹೆಚ್ಚಿನ ಅಪಾಯಕಾರಿ ಅಂಶಗಳಿಗಾಗಿ ಪರೀಕ್ಷಿಸುವುದು, ಅಸ್ತಿತ್ವದಲ್ಲಿರುವ ಸೋಂಕುಗಳನ್ನು (ಎಚ್‌ಐವಿ, ಸಿಫಿಲಿಸ್, ಟಿಬಿ, ಹೆಪಟೈಟಿಸ್ ಇತ್ಯಾದಿ) ಮೇಲ್ವಿಚಾರಣೆ ಮಾಡುವುದು, ರಕ್ತ ಸಂಗ್ರಹ ಘಟಕಗಳು ಮತ್ತು ರಾಜ್ಯಾದ್ಯಂತ ಔಷಧಗಳು ಮತ್ತು ಇತರ ಉಪಕರಣಗಳನ್ನು ಬಲಪಡಿಸುವುದು; ಸಾಮಾನ್ಯ ಹೆರಿಗೆಗಳಿಗೆ ಮೂರು ದಿನಗಳ ಆಸ್ಪತ್ರೆ ವಾಸ್ತವ್ಯ ಮತ್ತು ಸಿ-ಸೆಕ್ಷನ್ ನಂತರ ಏಳು ದಿನಗಳವರೆಗೆ ಕಡ್ಡಾಯಗೊಳಿಸುವುದು ಸೇರಿದಂತೆ ತಾಯಂದಿರ ಮರಣವನ್ನು ಕಡಿಮೆ ಮಾಡಲು 27 ಶಿಫಾರಸುಗಳನ್ನು ಸಮಿತಿ ಪಟ್ಟಿ ಮಾಡಿದೆ.

“ರಕ್ತಹೀನತೆಯ ಚಿತಿತ್ಸೆಗೆ ನಾವು ಈಗ ಎಫ್‌ಸಿಎಂ (ಫೆರಿಕ್ ಕಾರ್ಬಾಕ್ಸಿಮಾಲ್ಟೋಸ್) ಇಂಜೆಕ್ಷನ್ ಅನ್ನು ಖರೀದಿಸುತ್ತಿದ್ದೇವೆ. ಎರಡನೇ ಮತ್ತು ಏಳನೇ ತಿಂಗಳ ನಡುವೆ, ಪ್ರತಿ ಪ್ರಸವಪೂರ್ವ ತಾಯಿಗೆ ಮಾಸಿಕವಾಗಿ (ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರಿಂದ) ಸಲಹೆ ನೀಡಬೇಕು, ಎಂಟನೇ ತಿಂಗಳಲ್ಲಿ ಎರಡು ಬಾರಿ ಮತ್ತು ಒಂಬತ್ತನೇ ತಿಂಗಳಲ್ಲಿ ವಾರಕ್ಕೊಮ್ಮೆ ನೀಡಬೇಕು” ಎಂದು ಗುಂಡೂರಾವ್ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ರಾಜ್ಯದ ಎಂಎಂಆರ್ ಕುಸಿಯುತ್ತಿದ್ದರೂ, “ವ್ಯವಸ್ಥಿತ ವೈಫಲ್ಯಗಳನ್ನು” ಪರಿಹರಿಸಲು ಬಹಳಷ್ಟು ಮಾಡಬೇಕಾಗಿದೆ ಎಂಬುದನ್ನು ಗುಂಡೂರಾವ್ ಗಮನಿಸಿದರು.

464 ಸಾವುಗಳಲ್ಲಿ 65.7% ಸರ್ಕಾರಿ ಸೌಲಭ್ಯದಲ್ಲಿ, 22.1% ಖಾಸಗಿ ಸೌಲಭ್ಯಗಳಲ್ಲಿ ಮತ್ತು ಸುಮಾರು 10% ಮನೆಯಿಂದ ಆಸ್ಪತ್ರೆಗೆ ಅಥವಾ ಆಸ್ಪತ್ರೆಗಳ ನಡುವೆ ಸಾಗಣೆಯಲ್ಲಿ ಸಂಭವಿಸಿದೆ. “10 ಪ್ರಕರಣಗಳಲ್ಲಿ, ವೈದ್ಯರ ನಿರ್ಲಕ್ಷ್ಯ ಕಂಡುಬಂದಿದೆ, ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಅವರಿಗೆ ನೋಟಿಸ್‌ಗಳನ್ನು ಸಲ್ಲಿಸಿದ್ದೇವೆ” ಎಂದು ಅವರು ಹೇಳಿದರು.

ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...