Homeಕರ್ನಾಟಕಕರ್ನಾಟಕದಲ್ಲಿ ಶೇ.70 ರಷ್ಟು ತಾಯಂದಿರ ಸಾವುಗಳನ್ನು ತಪ್ಪಿಸಬಹುದಾಗಿತ್ತು: ವರದಿ

ಕರ್ನಾಟಕದಲ್ಲಿ ಶೇ.70 ರಷ್ಟು ತಾಯಂದಿರ ಸಾವುಗಳನ್ನು ತಪ್ಪಿಸಬಹುದಾಗಿತ್ತು: ವರದಿ

- Advertisement -
- Advertisement -

2024 ರ ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ಕರ್ನಾಟಕದಲ್ಲಿ ಸಂಭವಿಸಿದ ಶೇ.70 ಕ್ಕೂ ಹೆಚ್ಚು ತಾಯಂದಿರ ಸಾವುಗಳನ್ನು ತಡೆಯಬಹುದಿತ್ತು ಎಂದು ರಾಜ್ಯದಲ್ಲಿ ತಾಯಂದಿರ ಮರಣಗಳ ಕುರಿತಾದ ಮಧ್ಯಂತರ ಲೆಕ್ಕಪರಿಶೋಧನಾ ವರದಿ ಹೇಳಿದೆ.

ಶುಕ್ರವಾರ 18 ಪುಟಗಳ ಮಧ್ಯಂತರ ವರದಿಯನ್ನು ಮಂಡಿಸಿದ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂಬತ್ತು ತಿಂಗಳ ಈ ಅವಧಿಯಲ್ಲಿ ಒಟ್ಟು 464 ತಾಯಂದಿರ ಸಾವುಗಳನ್ನು ಲೆಕ್ಕಪರಿಶೋಧಿಸಲಾಗಿದ್ದು, ಬೆಂಗಳೂರು ನಗರ (71), ಬಳ್ಳಾರಿ (38), ಧಾರವಾಡ (35), ಕಲಬುರಗಿ (33), ಮತ್ತು ಬೆಳಗಾವಿ (31) ಅತಿ ಹೆಚ್ಚು ದಾಖಲಾಗಿವೆ. ಇದರಲ್ಲಿ ಇತರ ರಾಜ್ಯಗಳ 18 ಮಹಿಳೆಯರ ಸಾವುಗಳು ಸಹ ಸೇರಿವೆ.

ಸಾವುಗಳಲ್ಲಿ ಸುಮಾರು ಶೇ.80 ರಷ್ಟು 19 ಮತ್ತು 30 ವರ್ಷ ವಯಸ್ಸಿನ ಮಹಿಳೆಯರಲ್ಲಿ ಸಂಭವಿಸಿವೆ. ಪ್ರಸವಪೂರ್ವ ಆರೈಕೆಯ ಸಮಯದಲ್ಲಿ ಸಾವನ್ನಪ್ಪಿದ ಮಹಿಳೆಯರಲ್ಲಿ ಸುಮಾರು 62.6% ರಷ್ಟು ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದರು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಏಳು ಹುಡುಗಿಯರು ಸಹ ಈ ಅವಧಿಯಲ್ಲಿ ಸಾವನ್ನಪ್ಪಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆದ ಐದು ತಾಯಂದಿರ ಮರಣದ ನಂತರ, ಎಲ್ಲಾ ತಾಯಂದಿರ ಮರಣಗಳ ಸಂಭವನೀಯ ಕಾರಣಗಳನ್ನು ಗುರುತಿಸಲು ಇಲಾಖೆಯು 15 ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತು. ಬಳ್ಳಾರಿಯ ತಾಯಂದಿರ ಮರಣಗಳು ಎಂಡೋಟಾಕ್ಸಿನ್‌ಗಳಿಂದಾಗಿ ‘ಹೆಚ್ಚಾಗಿ’ ಸಂಭವಿಸಿವೆ. ಪಶ್ಚಿಮ ಬಂಗಾ ಫಾರ್ಮಾಸ್ಯುಟಿಕಲ್ಸ್‌ನ ಕಳಪೆ-ಗುಣಮಟ್ಟದ ರಿಂಗರ್ಸ್ ಲ್ಯಾಕ್ಟೇಟ್ ದ್ರಾವಣಕ್ಕೆ ಸಂಬಂಧಿಸಿವೆ ಎಂದು ಸಮಿತಿ ಕಂಡುಕೊಂಡಿದೆ.

ಏಪ್ರಿಲ್ ಮತ್ತು ಡಿಸೆಂಬರ್ ನಡುವೆ, ಅದೇ ಕಂಪನಿಯ ರಿಂಗರ್ಸ್ ಲ್ಯಾಕ್ಟೇಟ್ ಇತರ 13 ಸಾವುಗಳಿಗೆ ಸಂಬಂಧಿಸಿದೆ ಎಂದು ಅವರು ಕಂಡುಕೊಂಡರು. ರಾಯಚೂರು ಮತ್ತು ಬೆಂಗಳೂರು ನಗರದಲ್ಲಿ ತಲಾ ನಾಲ್ಕು, ಉತ್ತರ ಕನ್ನಡದಲ್ಲಿ ಮೂರು ಮತ್ತು ಯಾದಗಿರಿ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.

2024-25ರ ವೇಳೆಗೆ ರಾಜ್ಯದ ತಾಯಂದಿರ ಮರಣ ಪ್ರಮಾಣ (ಎಂಎಂಆರ್‌) 57 ರಷ್ಟಿದೆ, ತಡೆಗಟ್ಟಬಹುದಾದ ತಾಯಂದಿರ ಮರಣಗಳನ್ನು ಶೂನ್ಯಕ್ಕೆ ತರುವ ಇಲಾಖೆಯ ರೂ. 320 ಕೋಟಿ ಮಿಷನ್ ನಡೆಯುತ್ತಿದೆ ಎಂದು ಗುಂಡೂ ರಾವ್ ಹೇಳಿದ್ದಾರೆ. ಎರಡು ವರ್ಷಗಳಲ್ಲಿ ಎಂಎಂಆರ್‌ ಅನ್ನು ಕೇರಳದ 19 ಕ್ಕೆ ಸಮನಾಗಿಸುವ ಗುರಿಯನ್ನು ಅವರು ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

ಕರ್ನಾಟಕವು ಈ ವರ್ಷದ ಮೊದಲ ಮೂರು ತಿಂಗಳಲ್ಲಿ 102 ತಾಯಂದಿರ ಸಾವುಗಳನ್ನು ವರದಿ ಮಾಡಿದೆ, ಕಳೆದ ವರ್ಷದ ಇದೇ ಅವಧಿಯಲ್ಲಿ 148 ಸಾವುಗಳು ಸಂಭವಿಸಿದ್ದವು.

ಲೆಕ್ಕಪರಿಶೋಧನೆಯ ಹಲವು ವಿವರಗಳಲ್ಲಿ, ಸಾವನ್ನಪ್ಪಿದ 319 ಮಹಿಳೆಯರು (68.75%) ಹೆಚ್ಚಿನ ಅಪಾಯದ ಗರ್ಭಧಾರಣೆಯನ್ನು ಹೊಂದಿದ್ದರು ಎಂದು ಕಂಡುಬಂದಿದೆ. ಇದರಲ್ಲಿ ಗರ್ಭಾವಸ್ಥೆಯಲ್ಲಿ ಅಧಿಕ ರಕ್ತದೊತ್ತಡದ ಅಸ್ವಸ್ಥತೆ ಹೊಂದಿರುವ 153 ಮಹಿಳೆಯರು (33%) ಮತ್ತು ರಕ್ತಸ್ರಾವದಿಂದ ಸಾವನ್ನಪ್ಪಿದ 125 ಮಹಿಳೆಯರು (27%) ಸೇರಿದ್ದಾರೆ. ಸೆಪ್ಸಿಸ್ (9%), ಹೃದಯ ಸಮಸ್ಯೆಗಳು (4%), ಸೋಂಕುಗಳು (4%), ಪಲ್ಮನರಿ ಎಂಬಾಲಿಸಮ್ (3%) ಸೇರಿದಂತೆ ಇತರ ಕಾರಣಗಳನ್ನು ಗುರುತಿಸಲಾಗಿದೆ.

ಅಪಾಯಕಾರಿ ಅಂಶಗಳಿಗೆ ಮೊದಲೇ ಚಿಕಿತ್ಸೆ ನೀಡಿ, ಎಸ್‌ಒಪಿಗಳನ್ನು ಅಳವಡಿಸಿಕೊಂಡಿದ್ದರೆ; ರಕ್ತ ನಿಧಿಗಳು ಮತ್ತು ಇತರ ಉಪಕರಣಗಳನ್ನು ಸಿದ್ಧವಾಗಿರಿಸಿದ್ದರೆ, ಪ್ರಸವಪೂರ್ವ ಆರೈಕೆಯನ್ನು ಸುಧಾರಿಸಿದ್ದರೆ ಮತ್ತು ನೈಸರ್ಗಿಕ ಜನನಗಳನ್ನು ಉತ್ತೇಜಿಸಿದ್ದರೆ, ಕನಿಷ್ಠ 70% ಸಾವುಗಳನ್ನು ತಪ್ಪಿಸಬಹುದಿತ್ತು ಎಂದು ಸಮಿತಿಯು ಕಂಡುಹಿಡಿದಿದೆ.

ಮೊದಲ ತ್ರೈಮಾಸಿಕದಲ್ಲಿ ಎಲ್ಲ ಗರ್ಭಿಣಿಯರನ್ನು ಹೆಚ್ಚಿನ ಅಪಾಯಕಾರಿ ಅಂಶಗಳಿಗಾಗಿ ಪರೀಕ್ಷಿಸುವುದು, ಅಸ್ತಿತ್ವದಲ್ಲಿರುವ ಸೋಂಕುಗಳನ್ನು (ಎಚ್‌ಐವಿ, ಸಿಫಿಲಿಸ್, ಟಿಬಿ, ಹೆಪಟೈಟಿಸ್ ಇತ್ಯಾದಿ) ಮೇಲ್ವಿಚಾರಣೆ ಮಾಡುವುದು, ರಕ್ತ ಸಂಗ್ರಹ ಘಟಕಗಳು ಮತ್ತು ರಾಜ್ಯಾದ್ಯಂತ ಔಷಧಗಳು ಮತ್ತು ಇತರ ಉಪಕರಣಗಳನ್ನು ಬಲಪಡಿಸುವುದು; ಸಾಮಾನ್ಯ ಹೆರಿಗೆಗಳಿಗೆ ಮೂರು ದಿನಗಳ ಆಸ್ಪತ್ರೆ ವಾಸ್ತವ್ಯ ಮತ್ತು ಸಿ-ಸೆಕ್ಷನ್ ನಂತರ ಏಳು ದಿನಗಳವರೆಗೆ ಕಡ್ಡಾಯಗೊಳಿಸುವುದು ಸೇರಿದಂತೆ ತಾಯಂದಿರ ಮರಣವನ್ನು ಕಡಿಮೆ ಮಾಡಲು 27 ಶಿಫಾರಸುಗಳನ್ನು ಸಮಿತಿ ಪಟ್ಟಿ ಮಾಡಿದೆ.

“ರಕ್ತಹೀನತೆಯ ಚಿತಿತ್ಸೆಗೆ ನಾವು ಈಗ ಎಫ್‌ಸಿಎಂ (ಫೆರಿಕ್ ಕಾರ್ಬಾಕ್ಸಿಮಾಲ್ಟೋಸ್) ಇಂಜೆಕ್ಷನ್ ಅನ್ನು ಖರೀದಿಸುತ್ತಿದ್ದೇವೆ. ಎರಡನೇ ಮತ್ತು ಏಳನೇ ತಿಂಗಳ ನಡುವೆ, ಪ್ರತಿ ಪ್ರಸವಪೂರ್ವ ತಾಯಿಗೆ ಮಾಸಿಕವಾಗಿ (ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರಿಂದ) ಸಲಹೆ ನೀಡಬೇಕು, ಎಂಟನೇ ತಿಂಗಳಲ್ಲಿ ಎರಡು ಬಾರಿ ಮತ್ತು ಒಂಬತ್ತನೇ ತಿಂಗಳಲ್ಲಿ ವಾರಕ್ಕೊಮ್ಮೆ ನೀಡಬೇಕು” ಎಂದು ಗುಂಡೂರಾವ್ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ರಾಜ್ಯದ ಎಂಎಂಆರ್ ಕುಸಿಯುತ್ತಿದ್ದರೂ, “ವ್ಯವಸ್ಥಿತ ವೈಫಲ್ಯಗಳನ್ನು” ಪರಿಹರಿಸಲು ಬಹಳಷ್ಟು ಮಾಡಬೇಕಾಗಿದೆ ಎಂಬುದನ್ನು ಗುಂಡೂರಾವ್ ಗಮನಿಸಿದರು.

464 ಸಾವುಗಳಲ್ಲಿ 65.7% ಸರ್ಕಾರಿ ಸೌಲಭ್ಯದಲ್ಲಿ, 22.1% ಖಾಸಗಿ ಸೌಲಭ್ಯಗಳಲ್ಲಿ ಮತ್ತು ಸುಮಾರು 10% ಮನೆಯಿಂದ ಆಸ್ಪತ್ರೆಗೆ ಅಥವಾ ಆಸ್ಪತ್ರೆಗಳ ನಡುವೆ ಸಾಗಣೆಯಲ್ಲಿ ಸಂಭವಿಸಿದೆ. “10 ಪ್ರಕರಣಗಳಲ್ಲಿ, ವೈದ್ಯರ ನಿರ್ಲಕ್ಷ್ಯ ಕಂಡುಬಂದಿದೆ, ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಅವರಿಗೆ ನೋಟಿಸ್‌ಗಳನ್ನು ಸಲ್ಲಿಸಿದ್ದೇವೆ” ಎಂದು ಅವರು ಹೇಳಿದರು.

ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...