Homeಮುಖಪುಟಅಸ್ಸಾಂ: ಪ್ರವಾಹ ಹಾಗೂ ಭೂಕುಸಿತದಿಂದ 70 ಜನರು ಮೃತ

ಅಸ್ಸಾಂ: ಪ್ರವಾಹ ಹಾಗೂ ಭೂಕುಸಿತದಿಂದ 70 ಜನರು ಮೃತ

ಅರುಣಾಚಲ ಪ್ರದೇಶದಲ್ಲಿ ಕೂಡಾ ಪ್ರವಾಹವು ಪಾಸಿಘಾಟ್, ನಮ್ಸಾಯಿ ಮತ್ತು ದಿಬಾಂಗ್ ಪಟ್ಟಣಗಳ ತಗ್ಗು ಪ್ರದೇಶಗಳನ್ನು ಮುಳುಗಿಸಿದೆ.

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ಭಾನುವಾರ ಸಂಭವಿಸಿದ ಧಾರಾಕಾರ ಮಳೆಯಿಂದಾದ ಪ್ರವಾಹ ಮತ್ತು ಭೂಕುಸಿತದಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಇವುಗಳೊಂದಿಗೆ ಪ್ರವಾಹ ಹಾಗು ಭೂಕುಸಿತದಿಂದಾದ ಸಾವು 70 ಕ್ಕೆ ಏರಿದೆ.

ನಾಗಾವ್ನ್ ಜಿಲ್ಲೆಯ ಪ್ರವಾಹದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಕಮ್ರೂಪ್ (ಮೆಟ್ರೋ) ಜಿಲ್ಲೆಯ ಗುವಾಹಟಿಯ ಹೊರವಲಯದಲ್ಲಿರುವ ಜೋರಾಬತ್‌ನಲ್ಲಿ ಭೂಕುಸಿತ ಸಂಭವಿಸಿದ ಘಟನೆಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ರಾಜ್ಯದ 24 ಜಿಲ್ಲೆಗಳಲ್ಲಿ 2,015 ಹಳ್ಳಿಗಳು ನೆರೆ ಪೀಡಿತವಾಗಿದ್ದು, 12.97 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ಥರಾಗಿದ್ದಾರೆ. 82,546 ಹೆಕ್ಟೇರ್ ಪ್ರದೇಶಗಳಲ್ಲಿರುವ ಬೆಲೆಗಳ ಮೇಲೆ ಪರಿಣಾಮ ಬೀರಿದೆ.

ಪ್ರವಾಹದ ನೀರು ನದಿಗಳನ್ನು ಮೀರಿ ಹರಿಯುತ್ತಿದ್ದು, ಸೇತುವೆಗಳು ಮತ್ತು ರಸ್ತೆಗಳನ್ನು ಹಾನಿಗೊಳಿಸಿದೆ. ಪ್ರಮುಖ ನದಿಗಳಾದ ಬ್ರಹ್ಮಪುತ್ರ, ಬುರ್ಹಿ ಡೆಹಿಂಗ್, ಧನ್ಸಿರಿ, ಜಿಯಾ ಭಾರಾಲಿ, ಪುತಿಮರಿ, ಬೆಕಿ, ಕೋಪಿಲಿ ಮತ್ತು ಸಂಕೋಷ್ ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರ ನದಿಯೂ ಹಲವಾರು ಕಡೆಗಳಲ್ಲಿ ಅಪಾಯ ಮಟ್ಟದ ಎರಡು ಅಡಿಗಿಂತ ಹೆಚ್ಚು ಹರಿಯುತ್ತಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

16 ಜಿಲ್ಲೆಗಳಲ್ಲಿ 224 ಪರಿಹಾರ ಶಿಬಿರಗಳನ್ನು ಪ್ರಾರಂಭಿಸಿದ್ದು, ಅಲ್ಲಿ 21,071 ನಿರಾಶ್ರಿತರು ಆಶ್ರಯ ಪಡೆಯುತ್ತಿದ್ದಾರೆ. ಸ್ಥಳೀಯರನ್ನು ಹೊರತುಪಡಿಸಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ ಸಿಬ್ಬಂದಿ ಜನರನ್ನು ರಕ್ಷಿಸುವಲ್ಲಿ ನಿರತರಾಗಿದೆ.

ಪ್ರವಾಹಕ್ಕೆ ಸಿಲುಕಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 41 ಪ್ರಾಣಿಗಳು ಈವರೆಗೆ ಸಾವನ್ನಪ್ಪಿದೆ. ಇವುಗಳಲ್ಲಿ ಕೆಲವು ಪ್ರಾಣಿಗಳ ಸಾವು ಉದ್ಯಾನವನದ ಪಕ್ಕದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ವಾಹನ ಅಫಘಾತದಿಂದ ಸಂಭವಿಸಿವೆ.

ಭಾನುವಾರ ನಡೆದ ಸಭೆಯಲ್ಲಿ ಪರಿಸ್ಥಿತಿಯನ್ನು ಗಮನಿಸಿದ ನಂತರ, ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಸಚಿವರು, ಸಂಸದರು ಮತ್ತು ಶಾಸಕರಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಅಂದಾಜು ಮಾಡಲು ಸೂಚಿಸಿದರು. ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ಯುದ್ದೋಪಾದಿಯಲ್ಲಿ ಸರಿಪಡಿಸಬೇಕು ಎಂದು ಅವರು ನಿರ್ದೇಶಿಸಿದರು.

ನೆರೆಯ ಅರುಣಾಚಲ ಪ್ರದೇಶದಲ್ಲಿ ಕೂಡಾ ಪ್ರವಾಹವು ಪಾಸಿಘಾಟ್, ನಮ್ಸಾಯಿ ಮತ್ತು ದಿಬಾಂಗ್ ಪಟ್ಟಣಗಳ ತಗ್ಗು ಪ್ರದೇಶಗಳನ್ನು ಮುಳುಗಿಸಿದೆ. ಭೂಕುಸಿತದಿಂದಾಗಿ ರಾಜ್ಯದ ಹಲವಾರು ಭಾಗಗಳ ಸಂಪರ್ಕ ಕಡಿತಗೊಂಡಿದೆ. ಎರಡು ದಿನಗಳ ಹಿಂದೆ ಪಾಪುಮ್ ಪಾರೆ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಭೂಕುಸಿತ ಘಟನೆಗಳಲ್ಲಿ ಎಂಟು ಜನರು ಮೃತಪಟ್ಟಿದ್ದರು. ಸಿಯಾಂಗ್, ಡಿಕ್ರಾಂಗ್, ಡಿಬಾಂಗ್ ಮತ್ತು ಸುಬನ್ಸಿರಿ ಮುಂತಾದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ವರದಿಯಾಗಿವೆ.


ಓದಿ: ಅಸ್ಸಾಂನಲ್ಲಿ ಮತ್ತೆ ಪ್ರವಾಹ; 25 ಜಿಲ್ಲೆಗಳಲ್ಲಿ ಭಾರೀ ಮಳೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...