Homeಮುಖಪುಟಅಸ್ಸಾಂ: ಪ್ರವಾಹ ಹಾಗೂ ಭೂಕುಸಿತದಿಂದ 70 ಜನರು ಮೃತ

ಅಸ್ಸಾಂ: ಪ್ರವಾಹ ಹಾಗೂ ಭೂಕುಸಿತದಿಂದ 70 ಜನರು ಮೃತ

ಅರುಣಾಚಲ ಪ್ರದೇಶದಲ್ಲಿ ಕೂಡಾ ಪ್ರವಾಹವು ಪಾಸಿಘಾಟ್, ನಮ್ಸಾಯಿ ಮತ್ತು ದಿಬಾಂಗ್ ಪಟ್ಟಣಗಳ ತಗ್ಗು ಪ್ರದೇಶಗಳನ್ನು ಮುಳುಗಿಸಿದೆ.

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ಭಾನುವಾರ ಸಂಭವಿಸಿದ ಧಾರಾಕಾರ ಮಳೆಯಿಂದಾದ ಪ್ರವಾಹ ಮತ್ತು ಭೂಕುಸಿತದಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಇವುಗಳೊಂದಿಗೆ ಪ್ರವಾಹ ಹಾಗು ಭೂಕುಸಿತದಿಂದಾದ ಸಾವು 70 ಕ್ಕೆ ಏರಿದೆ.

ನಾಗಾವ್ನ್ ಜಿಲ್ಲೆಯ ಪ್ರವಾಹದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಕಮ್ರೂಪ್ (ಮೆಟ್ರೋ) ಜಿಲ್ಲೆಯ ಗುವಾಹಟಿಯ ಹೊರವಲಯದಲ್ಲಿರುವ ಜೋರಾಬತ್‌ನಲ್ಲಿ ಭೂಕುಸಿತ ಸಂಭವಿಸಿದ ಘಟನೆಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ರಾಜ್ಯದ 24 ಜಿಲ್ಲೆಗಳಲ್ಲಿ 2,015 ಹಳ್ಳಿಗಳು ನೆರೆ ಪೀಡಿತವಾಗಿದ್ದು, 12.97 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ಥರಾಗಿದ್ದಾರೆ. 82,546 ಹೆಕ್ಟೇರ್ ಪ್ರದೇಶಗಳಲ್ಲಿರುವ ಬೆಲೆಗಳ ಮೇಲೆ ಪರಿಣಾಮ ಬೀರಿದೆ.

ಪ್ರವಾಹದ ನೀರು ನದಿಗಳನ್ನು ಮೀರಿ ಹರಿಯುತ್ತಿದ್ದು, ಸೇತುವೆಗಳು ಮತ್ತು ರಸ್ತೆಗಳನ್ನು ಹಾನಿಗೊಳಿಸಿದೆ. ಪ್ರಮುಖ ನದಿಗಳಾದ ಬ್ರಹ್ಮಪುತ್ರ, ಬುರ್ಹಿ ಡೆಹಿಂಗ್, ಧನ್ಸಿರಿ, ಜಿಯಾ ಭಾರಾಲಿ, ಪುತಿಮರಿ, ಬೆಕಿ, ಕೋಪಿಲಿ ಮತ್ತು ಸಂಕೋಷ್ ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರ ನದಿಯೂ ಹಲವಾರು ಕಡೆಗಳಲ್ಲಿ ಅಪಾಯ ಮಟ್ಟದ ಎರಡು ಅಡಿಗಿಂತ ಹೆಚ್ಚು ಹರಿಯುತ್ತಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

16 ಜಿಲ್ಲೆಗಳಲ್ಲಿ 224 ಪರಿಹಾರ ಶಿಬಿರಗಳನ್ನು ಪ್ರಾರಂಭಿಸಿದ್ದು, ಅಲ್ಲಿ 21,071 ನಿರಾಶ್ರಿತರು ಆಶ್ರಯ ಪಡೆಯುತ್ತಿದ್ದಾರೆ. ಸ್ಥಳೀಯರನ್ನು ಹೊರತುಪಡಿಸಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ ಸಿಬ್ಬಂದಿ ಜನರನ್ನು ರಕ್ಷಿಸುವಲ್ಲಿ ನಿರತರಾಗಿದೆ.

ಪ್ರವಾಹಕ್ಕೆ ಸಿಲುಕಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 41 ಪ್ರಾಣಿಗಳು ಈವರೆಗೆ ಸಾವನ್ನಪ್ಪಿದೆ. ಇವುಗಳಲ್ಲಿ ಕೆಲವು ಪ್ರಾಣಿಗಳ ಸಾವು ಉದ್ಯಾನವನದ ಪಕ್ಕದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ವಾಹನ ಅಫಘಾತದಿಂದ ಸಂಭವಿಸಿವೆ.

ಭಾನುವಾರ ನಡೆದ ಸಭೆಯಲ್ಲಿ ಪರಿಸ್ಥಿತಿಯನ್ನು ಗಮನಿಸಿದ ನಂತರ, ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಸಚಿವರು, ಸಂಸದರು ಮತ್ತು ಶಾಸಕರಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಅಂದಾಜು ಮಾಡಲು ಸೂಚಿಸಿದರು. ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ಯುದ್ದೋಪಾದಿಯಲ್ಲಿ ಸರಿಪಡಿಸಬೇಕು ಎಂದು ಅವರು ನಿರ್ದೇಶಿಸಿದರು.

ನೆರೆಯ ಅರುಣಾಚಲ ಪ್ರದೇಶದಲ್ಲಿ ಕೂಡಾ ಪ್ರವಾಹವು ಪಾಸಿಘಾಟ್, ನಮ್ಸಾಯಿ ಮತ್ತು ದಿಬಾಂಗ್ ಪಟ್ಟಣಗಳ ತಗ್ಗು ಪ್ರದೇಶಗಳನ್ನು ಮುಳುಗಿಸಿದೆ. ಭೂಕುಸಿತದಿಂದಾಗಿ ರಾಜ್ಯದ ಹಲವಾರು ಭಾಗಗಳ ಸಂಪರ್ಕ ಕಡಿತಗೊಂಡಿದೆ. ಎರಡು ದಿನಗಳ ಹಿಂದೆ ಪಾಪುಮ್ ಪಾರೆ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಭೂಕುಸಿತ ಘಟನೆಗಳಲ್ಲಿ ಎಂಟು ಜನರು ಮೃತಪಟ್ಟಿದ್ದರು. ಸಿಯಾಂಗ್, ಡಿಕ್ರಾಂಗ್, ಡಿಬಾಂಗ್ ಮತ್ತು ಸುಬನ್ಸಿರಿ ಮುಂತಾದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ವರದಿಯಾಗಿವೆ.


ಓದಿ: ಅಸ್ಸಾಂನಲ್ಲಿ ಮತ್ತೆ ಪ್ರವಾಹ; 25 ಜಿಲ್ಲೆಗಳಲ್ಲಿ ಭಾರೀ ಮಳೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...