Homeಮುಖಪುಟಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

ಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

- Advertisement -
- Advertisement -

ಕೊರೊನ ರೋಗದಿಂದ ರಾಜ್ಯದಲ್ಲಿ ಒಬ್ಬೊಬ್ಬರೇ ಬಲಿಯಾಗುತ್ತಿರುವ ಚಿಂತಾಜನಕ ಸ್ಥಿತಿ ನಮ್ಮ ಕಣ್ಣ ಮುಂದಿದೆ. ಇಂಥ ಸ್ಥಿತಿಯಲ್ಲಿ ಸಾವಿಗೆ ಮರುಗುವ ಮತ್ತು ರೋಗ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ಬದಲು ರಾಜಕೀಯ ಮಾಡುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ರಿರುವುದು ವರದಿಯಾಗುತ್ತಲೇ ಇವೆ. ವಿಶೇಷವಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಜನರ ನಡುವಿನ ಸಾಮರಸ್ಯ ಹಾಳುಗೆಡವುವ ಯತ್ನ ನಿರಂತರವಾಗಿ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಜನಮಾನಸದಲ್ಲಿ ಮುಸ್ಲಿಮರ ಕುರಿತು ಕೆಟ್ಟ ಆಲೋಚನೆಗಳನ್ನು ಬಿತ್ತಲಾಗಿದ್ದು, ಬೇರೆಬೇರೆ ಸಮುದಾಯಗಳಿಂದ ವ್ಯಕ್ತವಾಗುತ್ತಿರುವ ಮಾತುಗಳು ಪುಷ್ಟೀಕರಿಸುತ್ತವೆ. ಇದು ಸಹಬಾಳ್ವೆ ಮುರಿದುಬಿದ್ದಿರುವಂಥ ಸಂಗತಿಯನ್ನು ತಿಳಿಸುತ್ತದೆ. ಬಲಪಂಥೀಯ ಸಂಘಟನೆಗಳು, ಕೆಲ ಕೊರೊನ ವಾರಿಯರ್ ಗಳು ಹರಡುತ್ತಿರುವ ಸುಳ್ಳುಸುದ್ದಿಗಳಿಗೆ ಬಿಜೆಪಿ ಮುಖಂಡರು ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಸ್ಲಿಮ್ ಸಮುದಾಯದ ಬಗ್ಗೆ ಸುಳ್ಳುಸುದ್ದಿ ಹರಡಬಾರದೆಂದು ಮನವಿ ಮಾಡಿದರೂ ಅವರ ಮಾತುಗಳು ಲೆಕ್ಕಕ್ಕೆ ಇಲ್ಲವಾಗಿದೆ.

ಇಂಥದ್ದೇ ಒಂದು ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ, ತಾನು ಸ್ಪರ್ಧಿಸುತ್ತಿದ್ದ ಗ್ರಾಮಾಂತರ ಕ್ಷೇತ್ರದಲ್ಲಿ ಕೊರೊನ ಸೋಂಕಿತ ವ್ಯಕ್ತಿಯ ಮೃತದೇಹ ದಫನ್ ಮಾಡಿದ್ದನ್ನೇ ರಾಜಕೀಯಕ್ಕೆ ಎಳೆದುತಂದಿದ್ದಾರೆ. ಪ್ರಬಲರ ಒತ್ತಡದಿಂದ ಮೃತದೇಹದ ಪರೀಕ್ಷೆ ನಡೆಸದೆ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಪ್ರಧಾನಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಜವಾಬ್ದಾರಿ ಇರಬೇಕಾಗಿತ್ತು. ಆದರೆ ತನ್ನ ಪಕ್ಷದ ನಾಯಕರನ್ನ ತೃಪ್ತಿಪಡಿಸಲು ಬಾಯಿ ಹರಿಬಿಟ್ಟಿದ್ದಾರೆ.

ತುಮಕೂರಿನ ಜಯಪುರದ ಹೌಸಿಂಗ್ ಬೋರ್ಡ್ ಕಾಲೋನಿಯ 70 ವರ್ಷದ ವೃದ್ದರೊಬ್ಬರು ಏಪ್ರಿಲ್ 26 ರಂದು ಮೃತಪಟ್ಟರು. ಅವರ ಕೊರೊನಾ ಪರೀಕ್ಷೆ ನೆಗೆಟಿವ್ ವರದಿ ಬಂದಿತ್ತು. ಸರಿ ಆರೋಗ್ಯ ಇಲಾಖೆ ಸಂಬಂಧಿಕರಿಗೆ ಅಂದೇ ಮೃತದೇಹ ಹಸ್ತಾಂತರಿಸಿತು. ನಾಗವಲ್ಲಿ ಸಮೀಪದ ರಿಸಾಲದಲ್ಲಿ ಮೃತದೇಹ ದಫನ್ ಮಾಡಿದರು. ಅದಾದ ಮೂರು ದಿನಗಳ ನಂತರ ಅಂದರೆ ಏಪ್ರಿಲ್ 29 ರಂದು ಪರೀಕ್ಷೆಯಲ್ಲಿ ಮೃತವ್ಯಕ್ತಿಗೆ ಕೊರೊನ ಪಾಸೀಟಿವ್ ವರದಿ ಬಂತು. ಮೊದಲು ನೆಗೆಟಿವ್ ಇದ್ದುದು ನಂತರ ಪಾಸಿಟಿವ್ ಹೇಗೆ ಬಂತು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಜಿಲ್ಲಾಡಳಿತ ಎಡವಟ್ಟು ಮಾಡಿತೋ? ಇಲ್ಲವೇ ಮತ್ತೆ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲಾಯಿತೋ ತಿಳಿದುಬಂದಿಲ್ಲ. ಅಂತೂ ಗೊಂದಲ ಸೃಷ್ಟಿಸಿದರು.. ಜನರ ಮನದಲ್ಲೂ ಕೆಟ್ಟ ಬಾವನೆ ಬರುವಂತೆ ನೋಡಿಕೊಂಡರು. ಒಂದು ಸಮುದಾಯ ಮಾನಸಿಕವಾಗಿ ನಲುಗುವಂತೆ ಮಾಡಿದರು.

ನಂತರ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಗೌರಿಶಂಕರ ಮತ್ತು ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ ನಡುವೆ ವಾಕ್ಸಮರ ನಡೆಯಿತು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತದೇಹ ದಫನ್ ಮಾಡಿ ಕ್ಷೇತ್ರದ ಹೆಸರನ್ನು ಕೆಡಿಸಿದರು ಎಂದು ಗೌರಿಶಂಕರ್ ಹೇಳಿದರೆ, ಪ್ರಬಲರ ಒತ್ತಡದಿಂದ ಇದೆಲ್ಲವೂ ನಡೆದಿದೆ. ತನಿಖೆ ನಡೆಯಲಿ ಎಂದು ಸುರೇಶ್ ಗೌಡ ಒತ್ತಡ ಹೇರಿದ್ದಾರೆ. ಚುನಾವಣೆಯಲ್ಲಿ ಮತಗಳಿಗೆ ಧರ್ಮ ಅಂಟಿಕೊಳ್ಳುವುದಿಲ್ಲ. ಯಾರು ಬೇಕಾದರೂ ಓಟು ಹಾಕಬಹುದು. ಕೊರೊನ ಸೋಂಕು ಬಂದು ಜನ ಸತ್ತರೆ ಸಾವಿನಲ್ಲೂ ಇಂಥ ನಾಚಿಗೇಡಿನ ಮುಖಂಡರು ರಾಜಕೀಯ ಮಾಡುತ್ತಾರೆ. ಅನುಕಂಪ, ಮಾನವೀಯತೆ, ಸಹಬಾಳ್ವೆ, ಭ್ರಾತೃತ್ವ, ಸೋದರತೆ ಇದ್ಯಾವುದೂ ಇವರಿಗೆ ಅರ್ಥವಾದಂತೆ ಕಾಣುತ್ತಿಲ್ಲ. ಇಂಥ ಬೇಜವಾಬ್ದಾರಿ ಮಾಜಿ-ಹಾಲಿ ಶಾಸಕರಿಗೆ ಜನರೇ ತಕ್ಕ ಬುದ್ದಿ ಕಲಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...