Homeಮುಖಪುಟಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

ಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

- Advertisement -
- Advertisement -

ಕೊರೊನ ರೋಗದಿಂದ ರಾಜ್ಯದಲ್ಲಿ ಒಬ್ಬೊಬ್ಬರೇ ಬಲಿಯಾಗುತ್ತಿರುವ ಚಿಂತಾಜನಕ ಸ್ಥಿತಿ ನಮ್ಮ ಕಣ್ಣ ಮುಂದಿದೆ. ಇಂಥ ಸ್ಥಿತಿಯಲ್ಲಿ ಸಾವಿಗೆ ಮರುಗುವ ಮತ್ತು ರೋಗ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ಬದಲು ರಾಜಕೀಯ ಮಾಡುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ರಿರುವುದು ವರದಿಯಾಗುತ್ತಲೇ ಇವೆ. ವಿಶೇಷವಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಜನರ ನಡುವಿನ ಸಾಮರಸ್ಯ ಹಾಳುಗೆಡವುವ ಯತ್ನ ನಿರಂತರವಾಗಿ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಜನಮಾನಸದಲ್ಲಿ ಮುಸ್ಲಿಮರ ಕುರಿತು ಕೆಟ್ಟ ಆಲೋಚನೆಗಳನ್ನು ಬಿತ್ತಲಾಗಿದ್ದು, ಬೇರೆಬೇರೆ ಸಮುದಾಯಗಳಿಂದ ವ್ಯಕ್ತವಾಗುತ್ತಿರುವ ಮಾತುಗಳು ಪುಷ್ಟೀಕರಿಸುತ್ತವೆ. ಇದು ಸಹಬಾಳ್ವೆ ಮುರಿದುಬಿದ್ದಿರುವಂಥ ಸಂಗತಿಯನ್ನು ತಿಳಿಸುತ್ತದೆ. ಬಲಪಂಥೀಯ ಸಂಘಟನೆಗಳು, ಕೆಲ ಕೊರೊನ ವಾರಿಯರ್ ಗಳು ಹರಡುತ್ತಿರುವ ಸುಳ್ಳುಸುದ್ದಿಗಳಿಗೆ ಬಿಜೆಪಿ ಮುಖಂಡರು ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಸ್ಲಿಮ್ ಸಮುದಾಯದ ಬಗ್ಗೆ ಸುಳ್ಳುಸುದ್ದಿ ಹರಡಬಾರದೆಂದು ಮನವಿ ಮಾಡಿದರೂ ಅವರ ಮಾತುಗಳು ಲೆಕ್ಕಕ್ಕೆ ಇಲ್ಲವಾಗಿದೆ.

ಇಂಥದ್ದೇ ಒಂದು ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ, ತಾನು ಸ್ಪರ್ಧಿಸುತ್ತಿದ್ದ ಗ್ರಾಮಾಂತರ ಕ್ಷೇತ್ರದಲ್ಲಿ ಕೊರೊನ ಸೋಂಕಿತ ವ್ಯಕ್ತಿಯ ಮೃತದೇಹ ದಫನ್ ಮಾಡಿದ್ದನ್ನೇ ರಾಜಕೀಯಕ್ಕೆ ಎಳೆದುತಂದಿದ್ದಾರೆ. ಪ್ರಬಲರ ಒತ್ತಡದಿಂದ ಮೃತದೇಹದ ಪರೀಕ್ಷೆ ನಡೆಸದೆ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಪ್ರಧಾನಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಜವಾಬ್ದಾರಿ ಇರಬೇಕಾಗಿತ್ತು. ಆದರೆ ತನ್ನ ಪಕ್ಷದ ನಾಯಕರನ್ನ ತೃಪ್ತಿಪಡಿಸಲು ಬಾಯಿ ಹರಿಬಿಟ್ಟಿದ್ದಾರೆ.

ತುಮಕೂರಿನ ಜಯಪುರದ ಹೌಸಿಂಗ್ ಬೋರ್ಡ್ ಕಾಲೋನಿಯ 70 ವರ್ಷದ ವೃದ್ದರೊಬ್ಬರು ಏಪ್ರಿಲ್ 26 ರಂದು ಮೃತಪಟ್ಟರು. ಅವರ ಕೊರೊನಾ ಪರೀಕ್ಷೆ ನೆಗೆಟಿವ್ ವರದಿ ಬಂದಿತ್ತು. ಸರಿ ಆರೋಗ್ಯ ಇಲಾಖೆ ಸಂಬಂಧಿಕರಿಗೆ ಅಂದೇ ಮೃತದೇಹ ಹಸ್ತಾಂತರಿಸಿತು. ನಾಗವಲ್ಲಿ ಸಮೀಪದ ರಿಸಾಲದಲ್ಲಿ ಮೃತದೇಹ ದಫನ್ ಮಾಡಿದರು. ಅದಾದ ಮೂರು ದಿನಗಳ ನಂತರ ಅಂದರೆ ಏಪ್ರಿಲ್ 29 ರಂದು ಪರೀಕ್ಷೆಯಲ್ಲಿ ಮೃತವ್ಯಕ್ತಿಗೆ ಕೊರೊನ ಪಾಸೀಟಿವ್ ವರದಿ ಬಂತು. ಮೊದಲು ನೆಗೆಟಿವ್ ಇದ್ದುದು ನಂತರ ಪಾಸಿಟಿವ್ ಹೇಗೆ ಬಂತು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಜಿಲ್ಲಾಡಳಿತ ಎಡವಟ್ಟು ಮಾಡಿತೋ? ಇಲ್ಲವೇ ಮತ್ತೆ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲಾಯಿತೋ ತಿಳಿದುಬಂದಿಲ್ಲ. ಅಂತೂ ಗೊಂದಲ ಸೃಷ್ಟಿಸಿದರು.. ಜನರ ಮನದಲ್ಲೂ ಕೆಟ್ಟ ಬಾವನೆ ಬರುವಂತೆ ನೋಡಿಕೊಂಡರು. ಒಂದು ಸಮುದಾಯ ಮಾನಸಿಕವಾಗಿ ನಲುಗುವಂತೆ ಮಾಡಿದರು.

ನಂತರ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಗೌರಿಶಂಕರ ಮತ್ತು ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ ನಡುವೆ ವಾಕ್ಸಮರ ನಡೆಯಿತು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತದೇಹ ದಫನ್ ಮಾಡಿ ಕ್ಷೇತ್ರದ ಹೆಸರನ್ನು ಕೆಡಿಸಿದರು ಎಂದು ಗೌರಿಶಂಕರ್ ಹೇಳಿದರೆ, ಪ್ರಬಲರ ಒತ್ತಡದಿಂದ ಇದೆಲ್ಲವೂ ನಡೆದಿದೆ. ತನಿಖೆ ನಡೆಯಲಿ ಎಂದು ಸುರೇಶ್ ಗೌಡ ಒತ್ತಡ ಹೇರಿದ್ದಾರೆ. ಚುನಾವಣೆಯಲ್ಲಿ ಮತಗಳಿಗೆ ಧರ್ಮ ಅಂಟಿಕೊಳ್ಳುವುದಿಲ್ಲ. ಯಾರು ಬೇಕಾದರೂ ಓಟು ಹಾಕಬಹುದು. ಕೊರೊನ ಸೋಂಕು ಬಂದು ಜನ ಸತ್ತರೆ ಸಾವಿನಲ್ಲೂ ಇಂಥ ನಾಚಿಗೇಡಿನ ಮುಖಂಡರು ರಾಜಕೀಯ ಮಾಡುತ್ತಾರೆ. ಅನುಕಂಪ, ಮಾನವೀಯತೆ, ಸಹಬಾಳ್ವೆ, ಭ್ರಾತೃತ್ವ, ಸೋದರತೆ ಇದ್ಯಾವುದೂ ಇವರಿಗೆ ಅರ್ಥವಾದಂತೆ ಕಾಣುತ್ತಿಲ್ಲ. ಇಂಥ ಬೇಜವಾಬ್ದಾರಿ ಮಾಜಿ-ಹಾಲಿ ಶಾಸಕರಿಗೆ ಜನರೇ ತಕ್ಕ ಬುದ್ದಿ ಕಲಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...