Homeಮುಖಪುಟಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

ಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

- Advertisement -
- Advertisement -

ಕೊರೊನ ರೋಗದಿಂದ ರಾಜ್ಯದಲ್ಲಿ ಒಬ್ಬೊಬ್ಬರೇ ಬಲಿಯಾಗುತ್ತಿರುವ ಚಿಂತಾಜನಕ ಸ್ಥಿತಿ ನಮ್ಮ ಕಣ್ಣ ಮುಂದಿದೆ. ಇಂಥ ಸ್ಥಿತಿಯಲ್ಲಿ ಸಾವಿಗೆ ಮರುಗುವ ಮತ್ತು ರೋಗ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ಬದಲು ರಾಜಕೀಯ ಮಾಡುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ರಿರುವುದು ವರದಿಯಾಗುತ್ತಲೇ ಇವೆ. ವಿಶೇಷವಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಜನರ ನಡುವಿನ ಸಾಮರಸ್ಯ ಹಾಳುಗೆಡವುವ ಯತ್ನ ನಿರಂತರವಾಗಿ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಜನಮಾನಸದಲ್ಲಿ ಮುಸ್ಲಿಮರ ಕುರಿತು ಕೆಟ್ಟ ಆಲೋಚನೆಗಳನ್ನು ಬಿತ್ತಲಾಗಿದ್ದು, ಬೇರೆಬೇರೆ ಸಮುದಾಯಗಳಿಂದ ವ್ಯಕ್ತವಾಗುತ್ತಿರುವ ಮಾತುಗಳು ಪುಷ್ಟೀಕರಿಸುತ್ತವೆ. ಇದು ಸಹಬಾಳ್ವೆ ಮುರಿದುಬಿದ್ದಿರುವಂಥ ಸಂಗತಿಯನ್ನು ತಿಳಿಸುತ್ತದೆ. ಬಲಪಂಥೀಯ ಸಂಘಟನೆಗಳು, ಕೆಲ ಕೊರೊನ ವಾರಿಯರ್ ಗಳು ಹರಡುತ್ತಿರುವ ಸುಳ್ಳುಸುದ್ದಿಗಳಿಗೆ ಬಿಜೆಪಿ ಮುಖಂಡರು ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಸ್ಲಿಮ್ ಸಮುದಾಯದ ಬಗ್ಗೆ ಸುಳ್ಳುಸುದ್ದಿ ಹರಡಬಾರದೆಂದು ಮನವಿ ಮಾಡಿದರೂ ಅವರ ಮಾತುಗಳು ಲೆಕ್ಕಕ್ಕೆ ಇಲ್ಲವಾಗಿದೆ.

ಇಂಥದ್ದೇ ಒಂದು ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ, ತಾನು ಸ್ಪರ್ಧಿಸುತ್ತಿದ್ದ ಗ್ರಾಮಾಂತರ ಕ್ಷೇತ್ರದಲ್ಲಿ ಕೊರೊನ ಸೋಂಕಿತ ವ್ಯಕ್ತಿಯ ಮೃತದೇಹ ದಫನ್ ಮಾಡಿದ್ದನ್ನೇ ರಾಜಕೀಯಕ್ಕೆ ಎಳೆದುತಂದಿದ್ದಾರೆ. ಪ್ರಬಲರ ಒತ್ತಡದಿಂದ ಮೃತದೇಹದ ಪರೀಕ್ಷೆ ನಡೆಸದೆ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಪ್ರಧಾನಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಜವಾಬ್ದಾರಿ ಇರಬೇಕಾಗಿತ್ತು. ಆದರೆ ತನ್ನ ಪಕ್ಷದ ನಾಯಕರನ್ನ ತೃಪ್ತಿಪಡಿಸಲು ಬಾಯಿ ಹರಿಬಿಟ್ಟಿದ್ದಾರೆ.

ತುಮಕೂರಿನ ಜಯಪುರದ ಹೌಸಿಂಗ್ ಬೋರ್ಡ್ ಕಾಲೋನಿಯ 70 ವರ್ಷದ ವೃದ್ದರೊಬ್ಬರು ಏಪ್ರಿಲ್ 26 ರಂದು ಮೃತಪಟ್ಟರು. ಅವರ ಕೊರೊನಾ ಪರೀಕ್ಷೆ ನೆಗೆಟಿವ್ ವರದಿ ಬಂದಿತ್ತು. ಸರಿ ಆರೋಗ್ಯ ಇಲಾಖೆ ಸಂಬಂಧಿಕರಿಗೆ ಅಂದೇ ಮೃತದೇಹ ಹಸ್ತಾಂತರಿಸಿತು. ನಾಗವಲ್ಲಿ ಸಮೀಪದ ರಿಸಾಲದಲ್ಲಿ ಮೃತದೇಹ ದಫನ್ ಮಾಡಿದರು. ಅದಾದ ಮೂರು ದಿನಗಳ ನಂತರ ಅಂದರೆ ಏಪ್ರಿಲ್ 29 ರಂದು ಪರೀಕ್ಷೆಯಲ್ಲಿ ಮೃತವ್ಯಕ್ತಿಗೆ ಕೊರೊನ ಪಾಸೀಟಿವ್ ವರದಿ ಬಂತು. ಮೊದಲು ನೆಗೆಟಿವ್ ಇದ್ದುದು ನಂತರ ಪಾಸಿಟಿವ್ ಹೇಗೆ ಬಂತು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಜಿಲ್ಲಾಡಳಿತ ಎಡವಟ್ಟು ಮಾಡಿತೋ? ಇಲ್ಲವೇ ಮತ್ತೆ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲಾಯಿತೋ ತಿಳಿದುಬಂದಿಲ್ಲ. ಅಂತೂ ಗೊಂದಲ ಸೃಷ್ಟಿಸಿದರು.. ಜನರ ಮನದಲ್ಲೂ ಕೆಟ್ಟ ಬಾವನೆ ಬರುವಂತೆ ನೋಡಿಕೊಂಡರು. ಒಂದು ಸಮುದಾಯ ಮಾನಸಿಕವಾಗಿ ನಲುಗುವಂತೆ ಮಾಡಿದರು.

ನಂತರ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಗೌರಿಶಂಕರ ಮತ್ತು ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ ನಡುವೆ ವಾಕ್ಸಮರ ನಡೆಯಿತು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತದೇಹ ದಫನ್ ಮಾಡಿ ಕ್ಷೇತ್ರದ ಹೆಸರನ್ನು ಕೆಡಿಸಿದರು ಎಂದು ಗೌರಿಶಂಕರ್ ಹೇಳಿದರೆ, ಪ್ರಬಲರ ಒತ್ತಡದಿಂದ ಇದೆಲ್ಲವೂ ನಡೆದಿದೆ. ತನಿಖೆ ನಡೆಯಲಿ ಎಂದು ಸುರೇಶ್ ಗೌಡ ಒತ್ತಡ ಹೇರಿದ್ದಾರೆ. ಚುನಾವಣೆಯಲ್ಲಿ ಮತಗಳಿಗೆ ಧರ್ಮ ಅಂಟಿಕೊಳ್ಳುವುದಿಲ್ಲ. ಯಾರು ಬೇಕಾದರೂ ಓಟು ಹಾಕಬಹುದು. ಕೊರೊನ ಸೋಂಕು ಬಂದು ಜನ ಸತ್ತರೆ ಸಾವಿನಲ್ಲೂ ಇಂಥ ನಾಚಿಗೇಡಿನ ಮುಖಂಡರು ರಾಜಕೀಯ ಮಾಡುತ್ತಾರೆ. ಅನುಕಂಪ, ಮಾನವೀಯತೆ, ಸಹಬಾಳ್ವೆ, ಭ್ರಾತೃತ್ವ, ಸೋದರತೆ ಇದ್ಯಾವುದೂ ಇವರಿಗೆ ಅರ್ಥವಾದಂತೆ ಕಾಣುತ್ತಿಲ್ಲ. ಇಂಥ ಬೇಜವಾಬ್ದಾರಿ ಮಾಜಿ-ಹಾಲಿ ಶಾಸಕರಿಗೆ ಜನರೇ ತಕ್ಕ ಬುದ್ದಿ ಕಲಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...