Homeಮುಖಪುಟಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

ಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

- Advertisement -
- Advertisement -

ಕೊರೊನ ರೋಗದಿಂದ ರಾಜ್ಯದಲ್ಲಿ ಒಬ್ಬೊಬ್ಬರೇ ಬಲಿಯಾಗುತ್ತಿರುವ ಚಿಂತಾಜನಕ ಸ್ಥಿತಿ ನಮ್ಮ ಕಣ್ಣ ಮುಂದಿದೆ. ಇಂಥ ಸ್ಥಿತಿಯಲ್ಲಿ ಸಾವಿಗೆ ಮರುಗುವ ಮತ್ತು ರೋಗ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ಬದಲು ರಾಜಕೀಯ ಮಾಡುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ರಿರುವುದು ವರದಿಯಾಗುತ್ತಲೇ ಇವೆ. ವಿಶೇಷವಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಜನರ ನಡುವಿನ ಸಾಮರಸ್ಯ ಹಾಳುಗೆಡವುವ ಯತ್ನ ನಿರಂತರವಾಗಿ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಜನಮಾನಸದಲ್ಲಿ ಮುಸ್ಲಿಮರ ಕುರಿತು ಕೆಟ್ಟ ಆಲೋಚನೆಗಳನ್ನು ಬಿತ್ತಲಾಗಿದ್ದು, ಬೇರೆಬೇರೆ ಸಮುದಾಯಗಳಿಂದ ವ್ಯಕ್ತವಾಗುತ್ತಿರುವ ಮಾತುಗಳು ಪುಷ್ಟೀಕರಿಸುತ್ತವೆ. ಇದು ಸಹಬಾಳ್ವೆ ಮುರಿದುಬಿದ್ದಿರುವಂಥ ಸಂಗತಿಯನ್ನು ತಿಳಿಸುತ್ತದೆ. ಬಲಪಂಥೀಯ ಸಂಘಟನೆಗಳು, ಕೆಲ ಕೊರೊನ ವಾರಿಯರ್ ಗಳು ಹರಡುತ್ತಿರುವ ಸುಳ್ಳುಸುದ್ದಿಗಳಿಗೆ ಬಿಜೆಪಿ ಮುಖಂಡರು ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಸ್ಲಿಮ್ ಸಮುದಾಯದ ಬಗ್ಗೆ ಸುಳ್ಳುಸುದ್ದಿ ಹರಡಬಾರದೆಂದು ಮನವಿ ಮಾಡಿದರೂ ಅವರ ಮಾತುಗಳು ಲೆಕ್ಕಕ್ಕೆ ಇಲ್ಲವಾಗಿದೆ.

ಇಂಥದ್ದೇ ಒಂದು ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ, ತಾನು ಸ್ಪರ್ಧಿಸುತ್ತಿದ್ದ ಗ್ರಾಮಾಂತರ ಕ್ಷೇತ್ರದಲ್ಲಿ ಕೊರೊನ ಸೋಂಕಿತ ವ್ಯಕ್ತಿಯ ಮೃತದೇಹ ದಫನ್ ಮಾಡಿದ್ದನ್ನೇ ರಾಜಕೀಯಕ್ಕೆ ಎಳೆದುತಂದಿದ್ದಾರೆ. ಪ್ರಬಲರ ಒತ್ತಡದಿಂದ ಮೃತದೇಹದ ಪರೀಕ್ಷೆ ನಡೆಸದೆ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಪ್ರಧಾನಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಜವಾಬ್ದಾರಿ ಇರಬೇಕಾಗಿತ್ತು. ಆದರೆ ತನ್ನ ಪಕ್ಷದ ನಾಯಕರನ್ನ ತೃಪ್ತಿಪಡಿಸಲು ಬಾಯಿ ಹರಿಬಿಟ್ಟಿದ್ದಾರೆ.

ತುಮಕೂರಿನ ಜಯಪುರದ ಹೌಸಿಂಗ್ ಬೋರ್ಡ್ ಕಾಲೋನಿಯ 70 ವರ್ಷದ ವೃದ್ದರೊಬ್ಬರು ಏಪ್ರಿಲ್ 26 ರಂದು ಮೃತಪಟ್ಟರು. ಅವರ ಕೊರೊನಾ ಪರೀಕ್ಷೆ ನೆಗೆಟಿವ್ ವರದಿ ಬಂದಿತ್ತು. ಸರಿ ಆರೋಗ್ಯ ಇಲಾಖೆ ಸಂಬಂಧಿಕರಿಗೆ ಅಂದೇ ಮೃತದೇಹ ಹಸ್ತಾಂತರಿಸಿತು. ನಾಗವಲ್ಲಿ ಸಮೀಪದ ರಿಸಾಲದಲ್ಲಿ ಮೃತದೇಹ ದಫನ್ ಮಾಡಿದರು. ಅದಾದ ಮೂರು ದಿನಗಳ ನಂತರ ಅಂದರೆ ಏಪ್ರಿಲ್ 29 ರಂದು ಪರೀಕ್ಷೆಯಲ್ಲಿ ಮೃತವ್ಯಕ್ತಿಗೆ ಕೊರೊನ ಪಾಸೀಟಿವ್ ವರದಿ ಬಂತು. ಮೊದಲು ನೆಗೆಟಿವ್ ಇದ್ದುದು ನಂತರ ಪಾಸಿಟಿವ್ ಹೇಗೆ ಬಂತು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಜಿಲ್ಲಾಡಳಿತ ಎಡವಟ್ಟು ಮಾಡಿತೋ? ಇಲ್ಲವೇ ಮತ್ತೆ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲಾಯಿತೋ ತಿಳಿದುಬಂದಿಲ್ಲ. ಅಂತೂ ಗೊಂದಲ ಸೃಷ್ಟಿಸಿದರು.. ಜನರ ಮನದಲ್ಲೂ ಕೆಟ್ಟ ಬಾವನೆ ಬರುವಂತೆ ನೋಡಿಕೊಂಡರು. ಒಂದು ಸಮುದಾಯ ಮಾನಸಿಕವಾಗಿ ನಲುಗುವಂತೆ ಮಾಡಿದರು.

ನಂತರ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಗೌರಿಶಂಕರ ಮತ್ತು ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ ನಡುವೆ ವಾಕ್ಸಮರ ನಡೆಯಿತು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತದೇಹ ದಫನ್ ಮಾಡಿ ಕ್ಷೇತ್ರದ ಹೆಸರನ್ನು ಕೆಡಿಸಿದರು ಎಂದು ಗೌರಿಶಂಕರ್ ಹೇಳಿದರೆ, ಪ್ರಬಲರ ಒತ್ತಡದಿಂದ ಇದೆಲ್ಲವೂ ನಡೆದಿದೆ. ತನಿಖೆ ನಡೆಯಲಿ ಎಂದು ಸುರೇಶ್ ಗೌಡ ಒತ್ತಡ ಹೇರಿದ್ದಾರೆ. ಚುನಾವಣೆಯಲ್ಲಿ ಮತಗಳಿಗೆ ಧರ್ಮ ಅಂಟಿಕೊಳ್ಳುವುದಿಲ್ಲ. ಯಾರು ಬೇಕಾದರೂ ಓಟು ಹಾಕಬಹುದು. ಕೊರೊನ ಸೋಂಕು ಬಂದು ಜನ ಸತ್ತರೆ ಸಾವಿನಲ್ಲೂ ಇಂಥ ನಾಚಿಗೇಡಿನ ಮುಖಂಡರು ರಾಜಕೀಯ ಮಾಡುತ್ತಾರೆ. ಅನುಕಂಪ, ಮಾನವೀಯತೆ, ಸಹಬಾಳ್ವೆ, ಭ್ರಾತೃತ್ವ, ಸೋದರತೆ ಇದ್ಯಾವುದೂ ಇವರಿಗೆ ಅರ್ಥವಾದಂತೆ ಕಾಣುತ್ತಿಲ್ಲ. ಇಂಥ ಬೇಜವಾಬ್ದಾರಿ ಮಾಜಿ-ಹಾಲಿ ಶಾಸಕರಿಗೆ ಜನರೇ ತಕ್ಕ ಬುದ್ದಿ ಕಲಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...