Homeಮುಖಪುಟಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

ಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

- Advertisement -
- Advertisement -

ಕೊರೊನ ರೋಗದಿಂದ ರಾಜ್ಯದಲ್ಲಿ ಒಬ್ಬೊಬ್ಬರೇ ಬಲಿಯಾಗುತ್ತಿರುವ ಚಿಂತಾಜನಕ ಸ್ಥಿತಿ ನಮ್ಮ ಕಣ್ಣ ಮುಂದಿದೆ. ಇಂಥ ಸ್ಥಿತಿಯಲ್ಲಿ ಸಾವಿಗೆ ಮರುಗುವ ಮತ್ತು ರೋಗ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ಬದಲು ರಾಜಕೀಯ ಮಾಡುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ರಿರುವುದು ವರದಿಯಾಗುತ್ತಲೇ ಇವೆ. ವಿಶೇಷವಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಜನರ ನಡುವಿನ ಸಾಮರಸ್ಯ ಹಾಳುಗೆಡವುವ ಯತ್ನ ನಿರಂತರವಾಗಿ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಜನಮಾನಸದಲ್ಲಿ ಮುಸ್ಲಿಮರ ಕುರಿತು ಕೆಟ್ಟ ಆಲೋಚನೆಗಳನ್ನು ಬಿತ್ತಲಾಗಿದ್ದು, ಬೇರೆಬೇರೆ ಸಮುದಾಯಗಳಿಂದ ವ್ಯಕ್ತವಾಗುತ್ತಿರುವ ಮಾತುಗಳು ಪುಷ್ಟೀಕರಿಸುತ್ತವೆ. ಇದು ಸಹಬಾಳ್ವೆ ಮುರಿದುಬಿದ್ದಿರುವಂಥ ಸಂಗತಿಯನ್ನು ತಿಳಿಸುತ್ತದೆ. ಬಲಪಂಥೀಯ ಸಂಘಟನೆಗಳು, ಕೆಲ ಕೊರೊನ ವಾರಿಯರ್ ಗಳು ಹರಡುತ್ತಿರುವ ಸುಳ್ಳುಸುದ್ದಿಗಳಿಗೆ ಬಿಜೆಪಿ ಮುಖಂಡರು ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಸ್ಲಿಮ್ ಸಮುದಾಯದ ಬಗ್ಗೆ ಸುಳ್ಳುಸುದ್ದಿ ಹರಡಬಾರದೆಂದು ಮನವಿ ಮಾಡಿದರೂ ಅವರ ಮಾತುಗಳು ಲೆಕ್ಕಕ್ಕೆ ಇಲ್ಲವಾಗಿದೆ.

ಇಂಥದ್ದೇ ಒಂದು ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ, ತಾನು ಸ್ಪರ್ಧಿಸುತ್ತಿದ್ದ ಗ್ರಾಮಾಂತರ ಕ್ಷೇತ್ರದಲ್ಲಿ ಕೊರೊನ ಸೋಂಕಿತ ವ್ಯಕ್ತಿಯ ಮೃತದೇಹ ದಫನ್ ಮಾಡಿದ್ದನ್ನೇ ರಾಜಕೀಯಕ್ಕೆ ಎಳೆದುತಂದಿದ್ದಾರೆ. ಪ್ರಬಲರ ಒತ್ತಡದಿಂದ ಮೃತದೇಹದ ಪರೀಕ್ಷೆ ನಡೆಸದೆ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಪ್ರಧಾನಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಜವಾಬ್ದಾರಿ ಇರಬೇಕಾಗಿತ್ತು. ಆದರೆ ತನ್ನ ಪಕ್ಷದ ನಾಯಕರನ್ನ ತೃಪ್ತಿಪಡಿಸಲು ಬಾಯಿ ಹರಿಬಿಟ್ಟಿದ್ದಾರೆ.

ತುಮಕೂರಿನ ಜಯಪುರದ ಹೌಸಿಂಗ್ ಬೋರ್ಡ್ ಕಾಲೋನಿಯ 70 ವರ್ಷದ ವೃದ್ದರೊಬ್ಬರು ಏಪ್ರಿಲ್ 26 ರಂದು ಮೃತಪಟ್ಟರು. ಅವರ ಕೊರೊನಾ ಪರೀಕ್ಷೆ ನೆಗೆಟಿವ್ ವರದಿ ಬಂದಿತ್ತು. ಸರಿ ಆರೋಗ್ಯ ಇಲಾಖೆ ಸಂಬಂಧಿಕರಿಗೆ ಅಂದೇ ಮೃತದೇಹ ಹಸ್ತಾಂತರಿಸಿತು. ನಾಗವಲ್ಲಿ ಸಮೀಪದ ರಿಸಾಲದಲ್ಲಿ ಮೃತದೇಹ ದಫನ್ ಮಾಡಿದರು. ಅದಾದ ಮೂರು ದಿನಗಳ ನಂತರ ಅಂದರೆ ಏಪ್ರಿಲ್ 29 ರಂದು ಪರೀಕ್ಷೆಯಲ್ಲಿ ಮೃತವ್ಯಕ್ತಿಗೆ ಕೊರೊನ ಪಾಸೀಟಿವ್ ವರದಿ ಬಂತು. ಮೊದಲು ನೆಗೆಟಿವ್ ಇದ್ದುದು ನಂತರ ಪಾಸಿಟಿವ್ ಹೇಗೆ ಬಂತು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಜಿಲ್ಲಾಡಳಿತ ಎಡವಟ್ಟು ಮಾಡಿತೋ? ಇಲ್ಲವೇ ಮತ್ತೆ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲಾಯಿತೋ ತಿಳಿದುಬಂದಿಲ್ಲ. ಅಂತೂ ಗೊಂದಲ ಸೃಷ್ಟಿಸಿದರು.. ಜನರ ಮನದಲ್ಲೂ ಕೆಟ್ಟ ಬಾವನೆ ಬರುವಂತೆ ನೋಡಿಕೊಂಡರು. ಒಂದು ಸಮುದಾಯ ಮಾನಸಿಕವಾಗಿ ನಲುಗುವಂತೆ ಮಾಡಿದರು.

ನಂತರ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಗೌರಿಶಂಕರ ಮತ್ತು ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ ನಡುವೆ ವಾಕ್ಸಮರ ನಡೆಯಿತು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತದೇಹ ದಫನ್ ಮಾಡಿ ಕ್ಷೇತ್ರದ ಹೆಸರನ್ನು ಕೆಡಿಸಿದರು ಎಂದು ಗೌರಿಶಂಕರ್ ಹೇಳಿದರೆ, ಪ್ರಬಲರ ಒತ್ತಡದಿಂದ ಇದೆಲ್ಲವೂ ನಡೆದಿದೆ. ತನಿಖೆ ನಡೆಯಲಿ ಎಂದು ಸುರೇಶ್ ಗೌಡ ಒತ್ತಡ ಹೇರಿದ್ದಾರೆ. ಚುನಾವಣೆಯಲ್ಲಿ ಮತಗಳಿಗೆ ಧರ್ಮ ಅಂಟಿಕೊಳ್ಳುವುದಿಲ್ಲ. ಯಾರು ಬೇಕಾದರೂ ಓಟು ಹಾಕಬಹುದು. ಕೊರೊನ ಸೋಂಕು ಬಂದು ಜನ ಸತ್ತರೆ ಸಾವಿನಲ್ಲೂ ಇಂಥ ನಾಚಿಗೇಡಿನ ಮುಖಂಡರು ರಾಜಕೀಯ ಮಾಡುತ್ತಾರೆ. ಅನುಕಂಪ, ಮಾನವೀಯತೆ, ಸಹಬಾಳ್ವೆ, ಭ್ರಾತೃತ್ವ, ಸೋದರತೆ ಇದ್ಯಾವುದೂ ಇವರಿಗೆ ಅರ್ಥವಾದಂತೆ ಕಾಣುತ್ತಿಲ್ಲ. ಇಂಥ ಬೇಜವಾಬ್ದಾರಿ ಮಾಜಿ-ಹಾಲಿ ಶಾಸಕರಿಗೆ ಜನರೇ ತಕ್ಕ ಬುದ್ದಿ ಕಲಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....