Homeಕರ್ನಾಟಕದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ: ಪೊಲೀಸ್ ವೈಫಲ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ: ಪೊಲೀಸ್ ವೈಫಲ್ಯ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ, ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌, ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಬೆಳಕು ಚೆಲ್ಲಿದೆ.

- Advertisement -
- Advertisement -

ಹಣ್ಣು ಮತ್ತು ತರಕಾರಿಗಳನ್ನು ಮಾರುವ ಮುಸ್ಲಿಮರ ವಿರುದ್ಧ ರಾಜ್ಯದ ಕರಾವಳಿ ನಗರವಾದ ಮಂಗಳೂರಿನಲ್ಲಿ ಕಳೆದ ಜನವರಿ 3ರಂದು ಆಕ್ರಮಣಾಕಾರಿ ಪ್ರಚಾರ ಸಾಮಾಜಿಕ ಮಾಧ್ಯಮದಲ್ಲಿ ನಡೆಯಿತು. ಈ ಸಂದೇಶ ವಿವಿಧ ಸಾಮಾಜಿಕ ಮಾಧ್ಯಮಗಳ ಹರಿದಾಡಿತು. ಯಾರೂ ಬ್ಯಾರಿಗಳಿಂದ (ಅಂದರೆ ಮುಸ್ಲಿಮರಿಂದ) ಏನನ್ನೂ ಖರೀದಿಸಬೇಡಿ. ಹಿಂದೂಗಳನ್ನು ಕೊಲ್ಲಲು ಮುಸ್ಲಿಮರು ವಿಷವನ್ನು ಬೆರೆಸುತ್ತಿದ್ದಾರೆ. ಇವರಿಗೆ ಚೀನಾದವರು ಆರ್ಥಿಕ ಸಹಕಾರ ನೀಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡಲಾಯಿತು.

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

“2021ರ ಮೊದಲ ತ್ರೈಮಾಸಿಕ ಅವಧಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮುದ್ವೇಷ ಘಟನೆಗಳ ಕುರಿತು ಮಾಧ್ಯಮಗಳು (ಪತ್ರಿಕೆಗಳು ಮತ್ತು ಆನ್‌ಲೈನ್‌) ಹೆಚ್ಚಿನ ಮಟ್ಟದಲ್ಲಿ ವರದಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸತ್ಯಶೋಧನೆಯನ್ನು ಕೈಗೊಳ್ಳಲಾಯಿತು. ಜನರ ಹಕ್ಕುಗಳಿಗಾಗಿ ಹೋರಾಟ ಮಾಡುವ ಅನೇಕ ಸಂಘ-ಸಂಸ್ಥೆಗಳು, ಅದರಲ್ಲೂ ರಾಜ್ಯದ ರಾಜಧಾನಿಯಲ್ಲಿ ಈ ಸಮಸ್ಯೆಯನ್ನು ಕೈಗೆತ್ತಿಕೊಂಡ ನಂತರ, ಈ ಘಟನೆಗಳನ್ನು ಎಲ್ಲ ದಿಕ್ಕಿನಲ್ಲಿ ಅಧ್ಯಯನ ಮಾಡಿ ಅರ್ಥಮಾಡಿಕೊಂಡು ಪರಿಹಾರ ಕಂಡುಕೊಳ್ಳುವುದಕ್ಕಾಗಿ ಸತ್ಯಶೋಧನಾ ತಂಡವನ್ನು ರಚಿಸಲಾಯಿತು” ಎಂದು ಪಿಯುಸಿಎಲ್‌-ಕ, ಎಐಎಲ್‌ಎಜೆ, ಗೌರಿ ಲಂಕೇಶ್‌ ನ್ಯೂಸ್‌.ಕಾಂ, ಎಐಪಿಎಫ್‌ ನೀಡಿರುವ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರವರು ಮತೀಯ ಗೂಂಡಾಗಿರಿಯನ್ನು ಬಹಿರಂಗವಾಗಿ ಸಮರ್ಥಿಸಿ ಹೇಳಿಕೆ ನೀಡಿದ್ದನ್ನು, ಸಾಮಾಜಿಕ ಸಂಘಟನೆಗಳು, ನಾಗರಿಕರು, ವಿದ್ಯಾರ್ಥಿಗಳು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರುಗಳು ತೀವ್ರವಾಗಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಎಂತಹ ಗಂಭೀರ ಪರಿಸ್ಥಿತಿಯಲ್ಲಿ ನಾವು ಇದ್ದೇವೆ ಎನ್ನುವುದನ್ನು ಈ ವರದಿಯು ಉಲ್ಲೇಖಿಸುತ್ತದೆ.

ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.

ಪೊಲೀಸರ ವರ್ತನೆ ಕಾನೂನಿಗೆ ವಿರುದ್ಧವಾಗಿದ್ದು, ತೆಹ್ಸೀನ್ ಪೂನಾವಾಲಾ ವರ್ಸಸ್‌‌ ಯೂನಿಯನ್‌ ಆಫ್‌ ಇಂಡಿಯಾ ಪ್ರಕರಣದಲ್ಲಿ ಸವೋಚ್ಚ ನ್ಯಾಯಾಲಯ ನೀಡಿದ ಆದೇಶಕ್ಕೆ ವಿರುದ್ಧವಾಗಿದೆ. ಈ ಪ್ರಕರಣದಲ್ಲಿ, ‘ಅವ್ಯವಸ್ಥೆ ಮತ್ತು ಅರಾಜಕತೆಯ ಸಮಯದಲ್ಲಿ ರಾಜ್ಯವು ತನ್ನ ನಾಗರಿಕರಿಗೆ ಸಾಂವಿಧಾನಿಕ ಭರವಸೆಗಳನ್ನು ರಕ್ಷಿಸಲು ಮತ್ತು ಭದ್ರಪಡಿಸಲು ಧನಾತ್ಮಕವಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಕೋರ್ಟ್ ಆದೇಶಿಸಿದೆ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯ ಸರ್ಕಾರಕ್ಕೆ ಈ ವರದಿಯು ಹಲವು ಶಿಫಾರಸ್ಸುಗಳನ್ನು ಮಾಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯ ವಿವರಿಸಿರುವ ಪ್ರೀತಿಯ ಹಕ್ಕು ಸೇರಿದಂತೆ ಆಯ್ಕೆ ಮಾಡುವ ಹಕ್ಕನ್ನು ಎತ್ತಿಹಿಡಿಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಲತಾ ಸಿಂಗ್ ವಿರುದ್ಧ ಸ್ಟೇಟ್ ಆಫ್‌ ಯು.ಪಿ. ಮತ್ತು ಇತರರು ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆಯ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವರದಿ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ಅಂತರ ಜಾತಿ ಅಥವಾ ಅಂತರ್‌ ಧಾರ್ಮಿಕ ದಂಪತಿ ಯಾರಿಂದಲೂ ಕಿರುಕುಳಕ್ಕೊಳಗಾಗುವುದಿಲ್ಲ ಅಥವಾ ಬೆದರಿಕೆಗಳು ಅಥವಾ ಹಿಂಸಾಚಾರ ಕೃತ್ಯಗಳಿಗೆ ಒಳಗಾಗುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆರುಮುಗಂ ಸರ್ವೈ ವಿರುದ್ಧ ತಮಿಳುನಾಡು ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪಾಲನೆ ಮಾಡಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅಂತರ್‌ ‌ಧರ್ಮೀಯ ಅಥವಾ ಅಂತರ್‌ ಜಾತಿ ವಿವಾಹ ದಂಪತಿಗೆ ಕಿರುಕುಳ ನೀಡುವ ಯಾವುದೇ ಘಟನೆಗಳು ಸಂಭವಿಸಿದ್ದಲ್ಲಿ ಅಂತ ದುಷ್ಕತ್ಯಗಳಿಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲು ಮಾಡಬೇಕು. ಹೀಗೆ ಹಲವು ಶಿಫಾರಸ್ಸುಗಳನ್ನು ಈ ವರದಿ ಮಾಡಿದೆ.

ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ಕೇವಲ ಪೊಲೀಸರ ವೈಪಲ್ಯ ಮಾತ್ರವಲ್ಲ. ಮಾನವೀಯತೆಯ ಸೋಲು ಹೌದು. ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೀಗಾಗಿರುವುದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...