Homeಮುಖಪುಟದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

- Advertisement -
- Advertisement -

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾಯಿ ರಾಮ್ ಕ್ಯಾಂಪ್, ಮಸೀದಿ ಕ್ಯಾಂಪ್ ಮತ್ತು ಡಿಐಡಿ ಕ್ಯಾಂಪ್ ನಿವಾಸಿಗಳಿಗೆ ಗುರುವಾರ (ಫೆ.19) ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (ಎಂಒಹೆಚ್‌ಯುಎ) ಭೂ ಮತ್ತು ಅಭಿವೃದ್ಧಿ ಕಚೇರಿ (ಎಲ್‌&ಡಿಒ) ಮೂಲಕ ಪುನರ್ವಸತಿ ನೋಟಿಸ್‌ಗಳನ್ನು ನೀಡಿದೆ. ಈ ಕೊಳಗೇರಿ ಗುಂಪುಗಳು (ಕ್ಲಸ್ಟರ್‌ಗಳು) ಎಲ್ & ಡಿಒ ವ್ಯಾಪ್ತಿಯಲ್ಲಿರುವ ಸರ್ಕಾರಿ ಭೂಮಿಯಲ್ಲಿವೆ ಎಂದು ವರದಿ ಹೇಳಿದೆ.

ನೋಟಿಸ್ ಪ್ರಕಾರ, ಕೇಂದ್ರ ದೆಹಲಿಯಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಸಾವ್ಡಾ ಘೇವ್ರಾದ ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿ (ಡಿಯುಎಸ್‌ಐಬಿ) ಕಾಲೋನಿಯಲ್ಲಿ ಸ್ಥಳಾಂತರಗೊಳ್ಳುವ ಕೊಳಗೇರಿ ನಿವಾಸಿಗಳಿಗೆ ಫ್ಲಾಟ್‌ಗಳನ್ನು ನೀಡಲಾಗಿದೆ. ಮಂಡಳಿಯ ಪುನರ್ವಸತಿ ನೀತಿಯಡಿಯಲ್ಲಿ ಎಲ್‌&ಡಿಒ ಮತ್ತು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಜನವರಿ 2024ರಲ್ಲಿ ನಡೆಸಿದ ಜಂಟಿ ಸಮೀಕ್ಷೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಅದಾಗ್ಯೂ, ಸರ್ಕಾರದ ನೋಟಿಸ್ ಜನರ ವಿರೋಧಕ್ಕೆ ಕಾರಣವಾಗಿದೆ. ವಿಶೇಷವಾಗಿ ಶಾಲಾ ಬೋರ್ಡ್ ಪರೀಕ್ಷೆಗಳು ನಡೆಯುತ್ತಿರುವಾಗ ನೋಟಿಸ್ ನೀಡಿರುವುದು ಜನರಲ್ಲಿ ಆತಂಕ, ಗೊಂದಲ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ ಎಂದು ವರದಿ ಉಲ್ಲೇಖಿಸಿದೆ.

“15 ದಿನಗಳಲ್ಲಿ ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಿದರೆ ನಾವು ಏನು ಮಾಡುವುದು?, ನಾವಿಲ್ಲಿ ದಶಕಗಳಿಂದ ವಾಸುತ್ತಿದ್ದೇವೆ” ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಕೆಲವರು “ನಾವಿಲ್ಲಿ ಮನೆಗಳನ್ನು ನಿರ್ಮಿಸಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಈಗ ಆ ಮನೆಗಳನ್ನು ಬಿಟ್ಟು ಹೋದರೆ ನಮಗೆ ನಷ್ಟ ಉಂಟಾಗಲಿದೆ. ಅಲ್ಲದೆ, ಸ್ಥಳಾಂತಗೊಳ್ಳಲು ನಮ್ಮಲ್ಲಿ ಹಣವೂ ಇಲ್ಲ” ಎಂದು ಅಳಲು ತೋಡಿಕೊಂಡಿರುವುದಾಗಿ ವರದಿಗಳು ಹೇಳಿವೆ.

ಪ್ರಧಾನಿ ನಿವಾಸವು ಈ ಕೊಳಗೇರಿಗಳಿಂದ ಕೆಲವೇ ಕಿಲೋಮೀಟರ್ ದೂರದಲ್ಲಿದೆ. ಇದು ಈ ಪ್ರದೇಶವನ್ನು ರಾಜಧಾನಿಯ ಅತ್ಯಂತ ಹೈ-ಪ್ರೊಫೈಲ್ ಜುಗ್ಗಿ ಜೋಪ್ಡಿ (ಜೆಜೆ) ಕಾಲೋನಿಗಳಲ್ಲಿ ಒಂದನ್ನಾಗಿ ಮಾಡಿದೆ. ಅರ್ಹ ನಿವಾಸಿಗಳನ್ನು ನಿಯಮಾನುಸಾರ ಪುನರ್ವಸತಿಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಪ್ರತಿಪಾದಿಸುತ್ತಿದ್ದರೂ, ಹಠಾತ್ ಗಡುವು ಮತ್ತು ಸ್ಥಳಾಂತರದ ದೂರವು ತಮ್ಮ ಜೀವನೋಪಾಯ, ಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಬಾಂಧವ್ಯಗಳಿಗೆ ಸಂಚಕಾರ ತಂದೊಡ್ಡಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಈ ವಿಷಯ ದೆಹಲಿ ಹೈಕೋರ್ಟ್‌ನಲ್ಲಿಯೂ ಬಾಕಿ ಇರುವುದರಿಂದ ಮತ್ತು ತೆರವು ವಿರುದ್ಧ ಮಧ್ಯಂತರ ರಕ್ಷಣೆ ಇನ್ನೂ ಜಾರಿಯಲ್ಲಿರುವುದರಿಂದ, ಭಾಯಿ ರಾಮ್ ಕ್ಯಾಂಪ್, ಮಸೀದಿ ಕ್ಯಾಂಪ್ ಮತ್ತು ಡಿಐಡಿ ಕ್ಯಾಂಪ್‌ನಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...