Homeಕರೋನಾ ತಲ್ಲಣಸತತ 10 ತಿಂಗಳು ಕೊರೊನಾ ಸೋಂಕಿಗೆ ಒಳಗಾಗಿದ್ದ 72 ವರ್ಷದ ವೃದ್ಧ!

ಸತತ 10 ತಿಂಗಳು ಕೊರೊನಾ ಸೋಂಕಿಗೆ ಒಳಗಾಗಿದ್ದ 72 ವರ್ಷದ ವೃದ್ಧ!

- Advertisement -
- Advertisement -

72 ವರ್ಷದ ಬ್ರಿಟಿಷ್ ವೃದ್ಧರೊಬ್ಬರು ಸತತ 10 ತಿಂಗಳ ಕಾಲ ಕೊರೊನಾ ಸೋಂಕಿಗೆ ತುತ್ತಾಗಿದ್ದ ಘಟನೆ ವರದಿಯಾಗಿದೆ. ಇದು ಕೊರೊನಾ ಸೋಂಕಿನ ದಾಖಲೆಯ ಪ್ರಕರಣವಾಗಿದ್ದು, ’ಅತಿ ದೀರ್ಘಾವಧಿಯ ಪ್ರಕರಣ’ವೆಂದು ಸಂಶೋಧಕರು ತಿಳಿಸಿದ್ದಾರೆ.

ಪಶ್ಚಿಮ ಇಂಗ್ಲೆಂಡ್‌ನ ಬ್ರಿಸ್ಟಲ್‌ನ ನಿವೃತ್ತ ಚಾಲನಾ ತರಬೇತುದಾರ ಡೇವ್ ಸ್ಮಿತ್, 43 ಬಾರಿ ಕೊರೊನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಏಳು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಇಷ್ಟೇ ಅಲ್ಲದೇ, ತಮ್ಮ ಅಂತ್ಯಕ್ರಿಯೆಯ ಯೋಜನೆಗಳನ್ನು ರೂಪಿಸಿದ್ದರು ಎಂದು ಹೇಳಿದ್ದಾರೆ.

“ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ನಾನು ಕೆಲಸಕ್ಕೆ ರಾಜೀನಾಮೆ ನೀಡಿದೆ. ಕುಟುಂಬ ಸದಸ್ಯರನ್ನೆಲ್ಲಾ ಕರೆಸಿಕೊಂಡು, ಎಲ್ಲರೊಂದಿಗೆ ಮಾತನಾಡಿ, ವಿದಾಯ ಹೇಳಿದ್ದೆ” ಎಂದು ಡೇವ್ ಸ್ಮಿತ್ ಹೇಳಿದ್ದಾರೆ ಎಂದು  ಬಿಬಿಸಿ ಉಲ್ಲೇಖಿಸಿದೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಡೆವ್‌ ಸ್ಮಿತ್ ಅವರೊಂದಿಗೆ ಕ್ವಾರಂಟೈನ್‌ನಲ್ಲಿದ್ದ ಅವರ ಪತ್ನಿ ಲಿಂಡಾ, “ಅವರು ಈ ಸೋಂಕಿನಿಂದ ಉಳಿಯುತ್ತಾರೆ ಎಂದು ನಾವು ಅಂದಾಜಿಸಿರಲು ಇಲ್ಲ. ಒಂದು ವರ್ಷ ನಮಗೆ ನರಕ ದರ್ಶನವಾಗಿದೆ” ಎಂದಿದ್ದಾರೆ.

ಬ್ರಿಸ್ಟಲ್ ವಿಶ್ವವಿದ್ಯಾಲಯ ಮತ್ತು ನಾರ್ತ್ ಬ್ರಿಸ್ಟಲ್ ಎನ್‌ಎಚ್‌ಎಸ್ ಟ್ರಸ್ಟ್‌ನ ಸಾಂಕ್ರಾಮಿಕ ರೋಗಗಳ ಸಲಹೆಗಾರ ಎಡ್ ಮೊರಾನ್, ”ಡೇವ್ ಸ್ಮಿತ್ ದೇಹದಲ್ಲಿ ಸತತ 10 ತಿಂಗಳು ಸಕ್ರಿಯ ವೈರಸ್ ಇತ್ತು. ಅದು ಕೇವಲ ಬಂದು ಹೋಗುವ ವೈರಸ್ ಆಲ್ಲ. ಸಕ್ರಿಯ ವೈರಸ್ ಎಂಬುದು ನಮಗೆ ವೈರಸ್ ಮಾದರಿಗಳನ್ನು ಪರೀಕ್ಷಿಸಿದ ಬಳಿಕ ತಿಳಿಯಿತು” ಎಂದು ಮಾಹಿತಿ ನೀಡಿದ್ದಾರೆ.

ಯುಎಸ್ ಬಯೋಟೆಕ್ ಸಂಸ್ಥೆ ರೆಜೆನೆರಾನ್ ಅಭಿವೃದ್ಧಿಪಡಿಸಿದ synthetic antibodies ಬಳಸಿ ನೀಡಿದ  ಚಿಕಿತ್ಸೆಯ ನಂತರ ಡೇವ್ ಸ್ಮಿತ್ ಚೇತರಿಸಿಕೊಂಡಿದ್ದಾರೆ. ಆದರೆ ಈ ಚಿಕಿತ್ಸೆಯನ್ನು ಬಳಸಲು ಬ್ರಿಟಿಷ್ ಆಡಳಿತ ಅನುಮತ ನೀಡಿಲ್ಲ. ಸಹಾನುಭೂತಿಯ ಆಧಾರದಲ್ಲಿ ಡೇವ್ ಸ್ಮಿತ್ ಮೇಲೆ ಬಳಸಲು ಅನುಮತಿ ನೀಡಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ರೆಜೆನೆರಾನ್ ಔಷಧಿಯನ್ನು ಪಡೆದ 45 ದಿನಗಳ ನಂತರ, ಒಟ್ಟು 305 ದಿನಗಳ ನಂತರ ಕೊರೊನಾ ನೆಗೆಟಿವ್ ವರದಿ ಬಂದಾಗ ಪತಿ ಮತ್ತು ಪತ್ನಿ ಇಬ್ಬರು ನಿಟ್ಟುಸಿರು ಬಿಟ್ಟಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...