Homeಕರೋನಾ ತಲ್ಲಣಸತತ 10 ತಿಂಗಳು ಕೊರೊನಾ ಸೋಂಕಿಗೆ ಒಳಗಾಗಿದ್ದ 72 ವರ್ಷದ ವೃದ್ಧ!

ಸತತ 10 ತಿಂಗಳು ಕೊರೊನಾ ಸೋಂಕಿಗೆ ಒಳಗಾಗಿದ್ದ 72 ವರ್ಷದ ವೃದ್ಧ!

- Advertisement -
- Advertisement -

72 ವರ್ಷದ ಬ್ರಿಟಿಷ್ ವೃದ್ಧರೊಬ್ಬರು ಸತತ 10 ತಿಂಗಳ ಕಾಲ ಕೊರೊನಾ ಸೋಂಕಿಗೆ ತುತ್ತಾಗಿದ್ದ ಘಟನೆ ವರದಿಯಾಗಿದೆ. ಇದು ಕೊರೊನಾ ಸೋಂಕಿನ ದಾಖಲೆಯ ಪ್ರಕರಣವಾಗಿದ್ದು, ’ಅತಿ ದೀರ್ಘಾವಧಿಯ ಪ್ರಕರಣ’ವೆಂದು ಸಂಶೋಧಕರು ತಿಳಿಸಿದ್ದಾರೆ.

ಪಶ್ಚಿಮ ಇಂಗ್ಲೆಂಡ್‌ನ ಬ್ರಿಸ್ಟಲ್‌ನ ನಿವೃತ್ತ ಚಾಲನಾ ತರಬೇತುದಾರ ಡೇವ್ ಸ್ಮಿತ್, 43 ಬಾರಿ ಕೊರೊನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಏಳು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಇಷ್ಟೇ ಅಲ್ಲದೇ, ತಮ್ಮ ಅಂತ್ಯಕ್ರಿಯೆಯ ಯೋಜನೆಗಳನ್ನು ರೂಪಿಸಿದ್ದರು ಎಂದು ಹೇಳಿದ್ದಾರೆ.

“ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ನಾನು ಕೆಲಸಕ್ಕೆ ರಾಜೀನಾಮೆ ನೀಡಿದೆ. ಕುಟುಂಬ ಸದಸ್ಯರನ್ನೆಲ್ಲಾ ಕರೆಸಿಕೊಂಡು, ಎಲ್ಲರೊಂದಿಗೆ ಮಾತನಾಡಿ, ವಿದಾಯ ಹೇಳಿದ್ದೆ” ಎಂದು ಡೇವ್ ಸ್ಮಿತ್ ಹೇಳಿದ್ದಾರೆ ಎಂದು  ಬಿಬಿಸಿ ಉಲ್ಲೇಖಿಸಿದೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಡೆವ್‌ ಸ್ಮಿತ್ ಅವರೊಂದಿಗೆ ಕ್ವಾರಂಟೈನ್‌ನಲ್ಲಿದ್ದ ಅವರ ಪತ್ನಿ ಲಿಂಡಾ, “ಅವರು ಈ ಸೋಂಕಿನಿಂದ ಉಳಿಯುತ್ತಾರೆ ಎಂದು ನಾವು ಅಂದಾಜಿಸಿರಲು ಇಲ್ಲ. ಒಂದು ವರ್ಷ ನಮಗೆ ನರಕ ದರ್ಶನವಾಗಿದೆ” ಎಂದಿದ್ದಾರೆ.

ಬ್ರಿಸ್ಟಲ್ ವಿಶ್ವವಿದ್ಯಾಲಯ ಮತ್ತು ನಾರ್ತ್ ಬ್ರಿಸ್ಟಲ್ ಎನ್‌ಎಚ್‌ಎಸ್ ಟ್ರಸ್ಟ್‌ನ ಸಾಂಕ್ರಾಮಿಕ ರೋಗಗಳ ಸಲಹೆಗಾರ ಎಡ್ ಮೊರಾನ್, ”ಡೇವ್ ಸ್ಮಿತ್ ದೇಹದಲ್ಲಿ ಸತತ 10 ತಿಂಗಳು ಸಕ್ರಿಯ ವೈರಸ್ ಇತ್ತು. ಅದು ಕೇವಲ ಬಂದು ಹೋಗುವ ವೈರಸ್ ಆಲ್ಲ. ಸಕ್ರಿಯ ವೈರಸ್ ಎಂಬುದು ನಮಗೆ ವೈರಸ್ ಮಾದರಿಗಳನ್ನು ಪರೀಕ್ಷಿಸಿದ ಬಳಿಕ ತಿಳಿಯಿತು” ಎಂದು ಮಾಹಿತಿ ನೀಡಿದ್ದಾರೆ.

ಯುಎಸ್ ಬಯೋಟೆಕ್ ಸಂಸ್ಥೆ ರೆಜೆನೆರಾನ್ ಅಭಿವೃದ್ಧಿಪಡಿಸಿದ synthetic antibodies ಬಳಸಿ ನೀಡಿದ  ಚಿಕಿತ್ಸೆಯ ನಂತರ ಡೇವ್ ಸ್ಮಿತ್ ಚೇತರಿಸಿಕೊಂಡಿದ್ದಾರೆ. ಆದರೆ ಈ ಚಿಕಿತ್ಸೆಯನ್ನು ಬಳಸಲು ಬ್ರಿಟಿಷ್ ಆಡಳಿತ ಅನುಮತ ನೀಡಿಲ್ಲ. ಸಹಾನುಭೂತಿಯ ಆಧಾರದಲ್ಲಿ ಡೇವ್ ಸ್ಮಿತ್ ಮೇಲೆ ಬಳಸಲು ಅನುಮತಿ ನೀಡಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ರೆಜೆನೆರಾನ್ ಔಷಧಿಯನ್ನು ಪಡೆದ 45 ದಿನಗಳ ನಂತರ, ಒಟ್ಟು 305 ದಿನಗಳ ನಂತರ ಕೊರೊನಾ ನೆಗೆಟಿವ್ ವರದಿ ಬಂದಾಗ ಪತಿ ಮತ್ತು ಪತ್ನಿ ಇಬ್ಬರು ನಿಟ್ಟುಸಿರು ಬಿಟ್ಟಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...