HomeಚಳವಳಿManual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

- Advertisement -
- Advertisement -

ಭಾರತದಲ್ಲಿ ಇಂದಿಗೂ 58,098 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿದ್ದು (ಮಲದ ಗುಂಡಿ ಸ್ವಚ್ಛಗೊಳಿಸುವವರು), ಅವರಲ್ಲಿ 42,594 (73.31%) ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾಯ್ದೆ ತಿದ್ದುಪಡಿ 2013ರ ಅನ್ವಯ ನಡೆದ ಸಮೀಕ್ಷೆಯನ್ನು ಆಧರಿಸಿ ಈ ಉತ್ತರ ನೀಡಿದ್ದಾರೆ.

ಈ ಸಮೀಕ್ಷೆಯಿಂದ ತಿಳಿದುಬರುವ ಪ್ರಮುಖ ವಿಷಯವೆಂದರೆ ಇಂದಿಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ ಕೆಲಸ ಮಾಡುತ್ತಿರುವವರು ಬಹುಪಾಲು ಜನರು (58,098) ಪರಿಶಿಷ್ಟ ಜಾತಿಗೆ ಸೇರಿದ್ದಾರೆ. 431 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು OBC ಗಳು, 421 ಪರಿಶಿಷ್ಟ ಪಂಗಡದವರು ಮತ್ತು 351 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು “ಇತರ” ವರ್ಗಕ್ಕೆ ಸೇರಿದ್ದಾರೆ ಎಂದು ಇಂಡಿಯನ್ಸ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸರ್ಕಾರವು ಕೇಂದ್ರೀಯ ಉದ್ಯೋಗ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಒಂದು ಬಾರಿಗೆ 40,000 ರೂ ನಗದು ಸಹಾಯವನ್ನು ನೀಡುತ್ತದೆ ಮತ್ತು ವ್ಯಕ್ತಿ ಮತ್ತು ಅವರ ಅವಲಂಬಿತರಿಗೆ ತಿಂಗಳಿಗೆ ರೂ 3,000 ಸ್ಟೈಫಂಡ್‌ನೊಂದಿಗೆ ಕೌಶಲ್ಯ ತರಬೇತಿಯನ್ನು ನೀಡುತ್ತದೆ (ತರಬೇತಿ ಅವಧಿಯವರೆಗೆ). ಅಲ್ಲದೆ 5 ಲಕ್ಷ ರೂ ವರೆಗೂ ಇದು ಬಂಡವಾಳ ಸಬ್ಸಿಡಿಯನ್ನು ಸಹ ಒದಗಿಸುತ್ತದೆ ಎನ್ನಲಾಗಿದೆ.

ದೇಶದ ಎಲ್ಲಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ಒಂದು ಬಾರಿ ನಗದು ಪಾವತಿಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 18,199 ಮಂದಿಗೆ ಕೌಶಲ್ಯ ತರಬೇತಿ ಮತ್ತು 1,562 ಜನರಿಗೆ ಬಂಡವಾಳ ಸಹಾಯಧನ ನೀಡಲಾಗಿದೆ ಎಂದು ಹೇಳಿದೆ. 2013 ರಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅನ್ನು ನಿಷೇಧಿಸಲಾಗಿದ್ದು, ಅಂದಿನಿಂದ ಯಾವುದೇ ಹೊಸ ನೇಮಕಾತಿ ಮಾಡಿಕೊಳ್ಳುತ್ತಿಲ್ಲ.

ಜುಲೈನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಕಳೆದ ಐದು ವರ್ಷಗಳಲ್ಲಿ ಮಲದ ಗುಂಡಿಗಳನ್ನು (Manual Scavenging) ಸ್ವಚ್ಛಗೊಳಿಸುವಾಗ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸಚಿವರು ಹೇಳಿ ಟೀಕೆಗೆ ಒಳಗಾಗಿದ್ದರು. ಅಲ್ಲದೆ ಹೆಚ್ಚಿನ ಜನ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಉತ್ತರ ಪ್ರದೇಶದಲ್ಲಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...