HomeಚಳವಳಿManual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

- Advertisement -
- Advertisement -

ಭಾರತದಲ್ಲಿ ಇಂದಿಗೂ 58,098 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿದ್ದು (ಮಲದ ಗುಂಡಿ ಸ್ವಚ್ಛಗೊಳಿಸುವವರು), ಅವರಲ್ಲಿ 42,594 (73.31%) ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾಯ್ದೆ ತಿದ್ದುಪಡಿ 2013ರ ಅನ್ವಯ ನಡೆದ ಸಮೀಕ್ಷೆಯನ್ನು ಆಧರಿಸಿ ಈ ಉತ್ತರ ನೀಡಿದ್ದಾರೆ.

ಈ ಸಮೀಕ್ಷೆಯಿಂದ ತಿಳಿದುಬರುವ ಪ್ರಮುಖ ವಿಷಯವೆಂದರೆ ಇಂದಿಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ ಕೆಲಸ ಮಾಡುತ್ತಿರುವವರು ಬಹುಪಾಲು ಜನರು (58,098) ಪರಿಶಿಷ್ಟ ಜಾತಿಗೆ ಸೇರಿದ್ದಾರೆ. 431 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು OBC ಗಳು, 421 ಪರಿಶಿಷ್ಟ ಪಂಗಡದವರು ಮತ್ತು 351 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು “ಇತರ” ವರ್ಗಕ್ಕೆ ಸೇರಿದ್ದಾರೆ ಎಂದು ಇಂಡಿಯನ್ಸ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸರ್ಕಾರವು ಕೇಂದ್ರೀಯ ಉದ್ಯೋಗ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಒಂದು ಬಾರಿಗೆ 40,000 ರೂ ನಗದು ಸಹಾಯವನ್ನು ನೀಡುತ್ತದೆ ಮತ್ತು ವ್ಯಕ್ತಿ ಮತ್ತು ಅವರ ಅವಲಂಬಿತರಿಗೆ ತಿಂಗಳಿಗೆ ರೂ 3,000 ಸ್ಟೈಫಂಡ್‌ನೊಂದಿಗೆ ಕೌಶಲ್ಯ ತರಬೇತಿಯನ್ನು ನೀಡುತ್ತದೆ (ತರಬೇತಿ ಅವಧಿಯವರೆಗೆ). ಅಲ್ಲದೆ 5 ಲಕ್ಷ ರೂ ವರೆಗೂ ಇದು ಬಂಡವಾಳ ಸಬ್ಸಿಡಿಯನ್ನು ಸಹ ಒದಗಿಸುತ್ತದೆ ಎನ್ನಲಾಗಿದೆ.

ದೇಶದ ಎಲ್ಲಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ಒಂದು ಬಾರಿ ನಗದು ಪಾವತಿಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 18,199 ಮಂದಿಗೆ ಕೌಶಲ್ಯ ತರಬೇತಿ ಮತ್ತು 1,562 ಜನರಿಗೆ ಬಂಡವಾಳ ಸಹಾಯಧನ ನೀಡಲಾಗಿದೆ ಎಂದು ಹೇಳಿದೆ. 2013 ರಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅನ್ನು ನಿಷೇಧಿಸಲಾಗಿದ್ದು, ಅಂದಿನಿಂದ ಯಾವುದೇ ಹೊಸ ನೇಮಕಾತಿ ಮಾಡಿಕೊಳ್ಳುತ್ತಿಲ್ಲ.

ಜುಲೈನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಕಳೆದ ಐದು ವರ್ಷಗಳಲ್ಲಿ ಮಲದ ಗುಂಡಿಗಳನ್ನು (Manual Scavenging) ಸ್ವಚ್ಛಗೊಳಿಸುವಾಗ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸಚಿವರು ಹೇಳಿ ಟೀಕೆಗೆ ಒಳಗಾಗಿದ್ದರು. ಅಲ್ಲದೆ ಹೆಚ್ಚಿನ ಜನ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಉತ್ತರ ಪ್ರದೇಶದಲ್ಲಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...