HomeಚಳವಳಿManual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

- Advertisement -
- Advertisement -

ಭಾರತದಲ್ಲಿ ಇಂದಿಗೂ 58,098 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿದ್ದು (ಮಲದ ಗುಂಡಿ ಸ್ವಚ್ಛಗೊಳಿಸುವವರು), ಅವರಲ್ಲಿ 42,594 (73.31%) ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾಯ್ದೆ ತಿದ್ದುಪಡಿ 2013ರ ಅನ್ವಯ ನಡೆದ ಸಮೀಕ್ಷೆಯನ್ನು ಆಧರಿಸಿ ಈ ಉತ್ತರ ನೀಡಿದ್ದಾರೆ.

ಈ ಸಮೀಕ್ಷೆಯಿಂದ ತಿಳಿದುಬರುವ ಪ್ರಮುಖ ವಿಷಯವೆಂದರೆ ಇಂದಿಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ ಕೆಲಸ ಮಾಡುತ್ತಿರುವವರು ಬಹುಪಾಲು ಜನರು (58,098) ಪರಿಶಿಷ್ಟ ಜಾತಿಗೆ ಸೇರಿದ್ದಾರೆ. 431 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು OBC ಗಳು, 421 ಪರಿಶಿಷ್ಟ ಪಂಗಡದವರು ಮತ್ತು 351 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು “ಇತರ” ವರ್ಗಕ್ಕೆ ಸೇರಿದ್ದಾರೆ ಎಂದು ಇಂಡಿಯನ್ಸ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸರ್ಕಾರವು ಕೇಂದ್ರೀಯ ಉದ್ಯೋಗ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಒಂದು ಬಾರಿಗೆ 40,000 ರೂ ನಗದು ಸಹಾಯವನ್ನು ನೀಡುತ್ತದೆ ಮತ್ತು ವ್ಯಕ್ತಿ ಮತ್ತು ಅವರ ಅವಲಂಬಿತರಿಗೆ ತಿಂಗಳಿಗೆ ರೂ 3,000 ಸ್ಟೈಫಂಡ್‌ನೊಂದಿಗೆ ಕೌಶಲ್ಯ ತರಬೇತಿಯನ್ನು ನೀಡುತ್ತದೆ (ತರಬೇತಿ ಅವಧಿಯವರೆಗೆ). ಅಲ್ಲದೆ 5 ಲಕ್ಷ ರೂ ವರೆಗೂ ಇದು ಬಂಡವಾಳ ಸಬ್ಸಿಡಿಯನ್ನು ಸಹ ಒದಗಿಸುತ್ತದೆ ಎನ್ನಲಾಗಿದೆ.

ದೇಶದ ಎಲ್ಲಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ಒಂದು ಬಾರಿ ನಗದು ಪಾವತಿಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 18,199 ಮಂದಿಗೆ ಕೌಶಲ್ಯ ತರಬೇತಿ ಮತ್ತು 1,562 ಜನರಿಗೆ ಬಂಡವಾಳ ಸಹಾಯಧನ ನೀಡಲಾಗಿದೆ ಎಂದು ಹೇಳಿದೆ. 2013 ರಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅನ್ನು ನಿಷೇಧಿಸಲಾಗಿದ್ದು, ಅಂದಿನಿಂದ ಯಾವುದೇ ಹೊಸ ನೇಮಕಾತಿ ಮಾಡಿಕೊಳ್ಳುತ್ತಿಲ್ಲ.

ಜುಲೈನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಕಳೆದ ಐದು ವರ್ಷಗಳಲ್ಲಿ ಮಲದ ಗುಂಡಿಗಳನ್ನು (Manual Scavenging) ಸ್ವಚ್ಛಗೊಳಿಸುವಾಗ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸಚಿವರು ಹೇಳಿ ಟೀಕೆಗೆ ಒಳಗಾಗಿದ್ದರು. ಅಲ್ಲದೆ ಹೆಚ್ಚಿನ ಜನ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಉತ್ತರ ಪ್ರದೇಶದಲ್ಲಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...