HomeಚಳವಳಿManual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

- Advertisement -
- Advertisement -

ಭಾರತದಲ್ಲಿ ಇಂದಿಗೂ 58,098 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿದ್ದು (ಮಲದ ಗುಂಡಿ ಸ್ವಚ್ಛಗೊಳಿಸುವವರು), ಅವರಲ್ಲಿ 42,594 (73.31%) ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾಯ್ದೆ ತಿದ್ದುಪಡಿ 2013ರ ಅನ್ವಯ ನಡೆದ ಸಮೀಕ್ಷೆಯನ್ನು ಆಧರಿಸಿ ಈ ಉತ್ತರ ನೀಡಿದ್ದಾರೆ.

ಈ ಸಮೀಕ್ಷೆಯಿಂದ ತಿಳಿದುಬರುವ ಪ್ರಮುಖ ವಿಷಯವೆಂದರೆ ಇಂದಿಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ ಕೆಲಸ ಮಾಡುತ್ತಿರುವವರು ಬಹುಪಾಲು ಜನರು (58,098) ಪರಿಶಿಷ್ಟ ಜಾತಿಗೆ ಸೇರಿದ್ದಾರೆ. 431 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು OBC ಗಳು, 421 ಪರಿಶಿಷ್ಟ ಪಂಗಡದವರು ಮತ್ತು 351 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು “ಇತರ” ವರ್ಗಕ್ಕೆ ಸೇರಿದ್ದಾರೆ ಎಂದು ಇಂಡಿಯನ್ಸ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸರ್ಕಾರವು ಕೇಂದ್ರೀಯ ಉದ್ಯೋಗ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಒಂದು ಬಾರಿಗೆ 40,000 ರೂ ನಗದು ಸಹಾಯವನ್ನು ನೀಡುತ್ತದೆ ಮತ್ತು ವ್ಯಕ್ತಿ ಮತ್ತು ಅವರ ಅವಲಂಬಿತರಿಗೆ ತಿಂಗಳಿಗೆ ರೂ 3,000 ಸ್ಟೈಫಂಡ್‌ನೊಂದಿಗೆ ಕೌಶಲ್ಯ ತರಬೇತಿಯನ್ನು ನೀಡುತ್ತದೆ (ತರಬೇತಿ ಅವಧಿಯವರೆಗೆ). ಅಲ್ಲದೆ 5 ಲಕ್ಷ ರೂ ವರೆಗೂ ಇದು ಬಂಡವಾಳ ಸಬ್ಸಿಡಿಯನ್ನು ಸಹ ಒದಗಿಸುತ್ತದೆ ಎನ್ನಲಾಗಿದೆ.

ದೇಶದ ಎಲ್ಲಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ಒಂದು ಬಾರಿ ನಗದು ಪಾವತಿಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 18,199 ಮಂದಿಗೆ ಕೌಶಲ್ಯ ತರಬೇತಿ ಮತ್ತು 1,562 ಜನರಿಗೆ ಬಂಡವಾಳ ಸಹಾಯಧನ ನೀಡಲಾಗಿದೆ ಎಂದು ಹೇಳಿದೆ. 2013 ರಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅನ್ನು ನಿಷೇಧಿಸಲಾಗಿದ್ದು, ಅಂದಿನಿಂದ ಯಾವುದೇ ಹೊಸ ನೇಮಕಾತಿ ಮಾಡಿಕೊಳ್ಳುತ್ತಿಲ್ಲ.

ಜುಲೈನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಕಳೆದ ಐದು ವರ್ಷಗಳಲ್ಲಿ ಮಲದ ಗುಂಡಿಗಳನ್ನು (Manual Scavenging) ಸ್ವಚ್ಛಗೊಳಿಸುವಾಗ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸಚಿವರು ಹೇಳಿ ಟೀಕೆಗೆ ಒಳಗಾಗಿದ್ದರು. ಅಲ್ಲದೆ ಹೆಚ್ಚಿನ ಜನ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಉತ್ತರ ಪ್ರದೇಶದಲ್ಲಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...