HomeಚಳವಳಿManual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

- Advertisement -
- Advertisement -

ಭಾರತದಲ್ಲಿ ಇಂದಿಗೂ 58,098 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿದ್ದು (ಮಲದ ಗುಂಡಿ ಸ್ವಚ್ಛಗೊಳಿಸುವವರು), ಅವರಲ್ಲಿ 42,594 (73.31%) ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾಯ್ದೆ ತಿದ್ದುಪಡಿ 2013ರ ಅನ್ವಯ ನಡೆದ ಸಮೀಕ್ಷೆಯನ್ನು ಆಧರಿಸಿ ಈ ಉತ್ತರ ನೀಡಿದ್ದಾರೆ.

ಈ ಸಮೀಕ್ಷೆಯಿಂದ ತಿಳಿದುಬರುವ ಪ್ರಮುಖ ವಿಷಯವೆಂದರೆ ಇಂದಿಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ ಕೆಲಸ ಮಾಡುತ್ತಿರುವವರು ಬಹುಪಾಲು ಜನರು (58,098) ಪರಿಶಿಷ್ಟ ಜಾತಿಗೆ ಸೇರಿದ್ದಾರೆ. 431 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು OBC ಗಳು, 421 ಪರಿಶಿಷ್ಟ ಪಂಗಡದವರು ಮತ್ತು 351 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು “ಇತರ” ವರ್ಗಕ್ಕೆ ಸೇರಿದ್ದಾರೆ ಎಂದು ಇಂಡಿಯನ್ಸ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸರ್ಕಾರವು ಕೇಂದ್ರೀಯ ಉದ್ಯೋಗ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಒಂದು ಬಾರಿಗೆ 40,000 ರೂ ನಗದು ಸಹಾಯವನ್ನು ನೀಡುತ್ತದೆ ಮತ್ತು ವ್ಯಕ್ತಿ ಮತ್ತು ಅವರ ಅವಲಂಬಿತರಿಗೆ ತಿಂಗಳಿಗೆ ರೂ 3,000 ಸ್ಟೈಫಂಡ್‌ನೊಂದಿಗೆ ಕೌಶಲ್ಯ ತರಬೇತಿಯನ್ನು ನೀಡುತ್ತದೆ (ತರಬೇತಿ ಅವಧಿಯವರೆಗೆ). ಅಲ್ಲದೆ 5 ಲಕ್ಷ ರೂ ವರೆಗೂ ಇದು ಬಂಡವಾಳ ಸಬ್ಸಿಡಿಯನ್ನು ಸಹ ಒದಗಿಸುತ್ತದೆ ಎನ್ನಲಾಗಿದೆ.

ದೇಶದ ಎಲ್ಲಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ಒಂದು ಬಾರಿ ನಗದು ಪಾವತಿಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 18,199 ಮಂದಿಗೆ ಕೌಶಲ್ಯ ತರಬೇತಿ ಮತ್ತು 1,562 ಜನರಿಗೆ ಬಂಡವಾಳ ಸಹಾಯಧನ ನೀಡಲಾಗಿದೆ ಎಂದು ಹೇಳಿದೆ. 2013 ರಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅನ್ನು ನಿಷೇಧಿಸಲಾಗಿದ್ದು, ಅಂದಿನಿಂದ ಯಾವುದೇ ಹೊಸ ನೇಮಕಾತಿ ಮಾಡಿಕೊಳ್ಳುತ್ತಿಲ್ಲ.

ಜುಲೈನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಕಳೆದ ಐದು ವರ್ಷಗಳಲ್ಲಿ ಮಲದ ಗುಂಡಿಗಳನ್ನು (Manual Scavenging) ಸ್ವಚ್ಛಗೊಳಿಸುವಾಗ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸಚಿವರು ಹೇಳಿ ಟೀಕೆಗೆ ಒಳಗಾಗಿದ್ದರು. ಅಲ್ಲದೆ ಹೆಚ್ಚಿನ ಜನ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಉತ್ತರ ಪ್ರದೇಶದಲ್ಲಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...