HomeಚಳವಳಿManual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

- Advertisement -
- Advertisement -

ಭಾರತದಲ್ಲಿ ಇಂದಿಗೂ 58,098 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿದ್ದು (ಮಲದ ಗುಂಡಿ ಸ್ವಚ್ಛಗೊಳಿಸುವವರು), ಅವರಲ್ಲಿ 42,594 (73.31%) ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾಯ್ದೆ ತಿದ್ದುಪಡಿ 2013ರ ಅನ್ವಯ ನಡೆದ ಸಮೀಕ್ಷೆಯನ್ನು ಆಧರಿಸಿ ಈ ಉತ್ತರ ನೀಡಿದ್ದಾರೆ.

ಈ ಸಮೀಕ್ಷೆಯಿಂದ ತಿಳಿದುಬರುವ ಪ್ರಮುಖ ವಿಷಯವೆಂದರೆ ಇಂದಿಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ ಕೆಲಸ ಮಾಡುತ್ತಿರುವವರು ಬಹುಪಾಲು ಜನರು (58,098) ಪರಿಶಿಷ್ಟ ಜಾತಿಗೆ ಸೇರಿದ್ದಾರೆ. 431 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು OBC ಗಳು, 421 ಪರಿಶಿಷ್ಟ ಪಂಗಡದವರು ಮತ್ತು 351 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು “ಇತರ” ವರ್ಗಕ್ಕೆ ಸೇರಿದ್ದಾರೆ ಎಂದು ಇಂಡಿಯನ್ಸ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸರ್ಕಾರವು ಕೇಂದ್ರೀಯ ಉದ್ಯೋಗ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಒಂದು ಬಾರಿಗೆ 40,000 ರೂ ನಗದು ಸಹಾಯವನ್ನು ನೀಡುತ್ತದೆ ಮತ್ತು ವ್ಯಕ್ತಿ ಮತ್ತು ಅವರ ಅವಲಂಬಿತರಿಗೆ ತಿಂಗಳಿಗೆ ರೂ 3,000 ಸ್ಟೈಫಂಡ್‌ನೊಂದಿಗೆ ಕೌಶಲ್ಯ ತರಬೇತಿಯನ್ನು ನೀಡುತ್ತದೆ (ತರಬೇತಿ ಅವಧಿಯವರೆಗೆ). ಅಲ್ಲದೆ 5 ಲಕ್ಷ ರೂ ವರೆಗೂ ಇದು ಬಂಡವಾಳ ಸಬ್ಸಿಡಿಯನ್ನು ಸಹ ಒದಗಿಸುತ್ತದೆ ಎನ್ನಲಾಗಿದೆ.

ದೇಶದ ಎಲ್ಲಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ಒಂದು ಬಾರಿ ನಗದು ಪಾವತಿಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 18,199 ಮಂದಿಗೆ ಕೌಶಲ್ಯ ತರಬೇತಿ ಮತ್ತು 1,562 ಜನರಿಗೆ ಬಂಡವಾಳ ಸಹಾಯಧನ ನೀಡಲಾಗಿದೆ ಎಂದು ಹೇಳಿದೆ. 2013 ರಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅನ್ನು ನಿಷೇಧಿಸಲಾಗಿದ್ದು, ಅಂದಿನಿಂದ ಯಾವುದೇ ಹೊಸ ನೇಮಕಾತಿ ಮಾಡಿಕೊಳ್ಳುತ್ತಿಲ್ಲ.

ಜುಲೈನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಕಳೆದ ಐದು ವರ್ಷಗಳಲ್ಲಿ ಮಲದ ಗುಂಡಿಗಳನ್ನು (Manual Scavenging) ಸ್ವಚ್ಛಗೊಳಿಸುವಾಗ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸಚಿವರು ಹೇಳಿ ಟೀಕೆಗೆ ಒಳಗಾಗಿದ್ದರು. ಅಲ್ಲದೆ ಹೆಚ್ಚಿನ ಜನ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಉತ್ತರ ಪ್ರದೇಶದಲ್ಲಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...