Homeಮುಖಪುಟಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

- Advertisement -
- Advertisement -

ಮಹಾತ್ಮಾ ಗಾಂಧಿ ಎಂಬ ಮನುಷ್ಯನನ್ನು ನಾಥುರಾಮ್ ಗೋಡ್ಸೆ ಎಂಬ ಹಿಂದೂ ಒಬ್ಬ ಕೊಲೆಮಾಡಿ (ಜನವರಿ 30, 1948) 73 ವರ್ಷಗಳಾಗಿವೆ. ಎಪ್ಪತ್ತೊಂಭತ್ತು ವರ್ಷತುಂಬಿದ್ದ ಹಣ್ಣು ಮುದುಕ ಗಾಂಧೀಜಿಯವರ ಎದೆಗೆ ಗುಂಡಿಕ್ಕುವ ಮುನ್ನ ಮೂವತ್ತೆಂಟರ ಹರೆಯದ ನಾಥೂರಾಮ್ ವಿನಾಯಕ ಗೋಡ್ಸೆ ಒಮ್ಮೆ ಅವರ ಕಾಲುಮುಟ್ಟಿ ನಮಸ್ಕರಿಸಿದ್ದನಂತೆ. ಅದು ನಟನೆಯಲ್ಲ, ನಿಜವಾದ ಗೌರವ ಸಲ್ಲಿಕೆ ಅಂತ ಗೋಡ್ಸೆ ತನ್ನ ’ನಾನೇಕೆ ಗಾಂಧಿಯನ್ನು ಕೊಂದೆ’ ಎಂಬ ಹೇಳಿಕೆಯಲ್ಲಿ ದಾಖಲಿಸುತ್ತಾನೆ. ಗುಂಡೇಟು ತಿಂದು ಕುಸಿಯುವ ಮುನ್ನ ಗಾಂಧಿ “ಹೇ ರಾಮ್ ಅಂತ ಉದ್ಗರಿಸಿದ್ದರಂತೆ. ಆ ಕುರಿತು ಭಿನ್ನಾಭಿಪ್ರಾಯಗಳಿವೆ. ಕೆಲವರ ಪ್ರಕಾರ ಗಾಂಧಿ ಮೌನವಾಗಿಯೇ ನೆಲಕ್ಕೆ ಕುಸಿದಿದ್ದರು. ಏನೇ ಇರಲಿ. ಒಂದು ವೇಳೆ ಅವರು ಹೇ ರಾಮ್ ಅಂತ ಹೇಳಿದ್ದು ನಿಜವೇ ಆಗಿದ್ದರೆ, ಗುಂಡು ಹಾರಿಸಿ ಕೈಚೆಲ್ಲಿ ನಿಂತಿದ್ದ ಗೋಡ್ಸೆಗೆ ಅದು ಗಾಂಧೀಜಿ ತನ್ನ ಹೆಸರು ಹಿಡಿದು ಪ್ರೀತಿಯಿಂದ ಕರೆದಂತೆ ಕೇಳಿಸಿರಬಹುದು.

1949ರ ನವಂಬರ್ ತಿಂಗಳ 15ನೇ ತಾರೀಖಿನಂದು ಅಂಬಾಲ ಜೈಲಿನಲ್ಲಿ ಗೋಡ್ಸೆ ಯಾವ ಭಾವ ವಿಕಾರವೂ ಇಲ್ಲದೆ ನೇಣುಗಂಬ ಏರಿದ್ದ ಅಂತ ಚರಿತ್ರೆ ದಾಖಲಿಸುತ್ತದೆ. ಗಾಂಧಿ ನಾವೆಲ್ಲ ಅಂದುಕೊಂಡಿರುವ ಗಾಂಧೀಜಿಯೇ ಆಗಿದ್ದಿದ್ದರೆ ಆ ದಿನ ಅವರ ಆತ್ಮ ಗೋರಿಯೊಳಗೆ ವಿಚಿತ್ರವಾಗಿ ಚಡಪಡಿಸಿರುತಿತ್ತು. ಗೋಡ್ಸೆಯನ್ನು ನೇಣಿಗೇರಿಸಬಾರದಿತ್ತು. ಆತನನ್ನು ಕೊಂದದ್ದು ಗಾಂಧೀಜಿಗೆ ಸಮ್ಮತವಾಗಿರುತ್ತಿರಲಿಲ್ಲ ಎನ್ನುವುದು ಅದಕ್ಕೆ ಒಂದು ಕಾರಣ. ಅದಕ್ಕಿಂತ ಮುಖ್ಯವಾದ ಇನ್ನೊಂದು ಕಾರಣವಿದೆ. ತನ್ನ ಕೊನೆಯ ಹೇಳಿಕೆಯಲ್ಲಿ ಗೋಡ್ಸೆ ಹೇಳುತ್ತಾನೆ: “ನಾನು ಗಾಂಧೀಜಿಯನ್ನು ಕೊಂದದ್ದು ಒಂದು ಉದಾತ್ತವಾದ ಉದ್ದೇಶದಿಂದ. ಅದು ಏನೆಂದರೆ ಗಾಂಧೀಜಿ ಇಲ್ಲದ ಭಾರತದ ರಾಜಕೀಯ ಪ್ರಾಯೋಗಿಕವಾಗಿರುತ್ತದೆ, ಗಾಂಧೀಜಿ ಇಲ್ಲದ ಭಾರತದ ರಾಜಕೀಯಕ್ಕೆ ವೈರಿಗಳಿಗೆ ತಿರುಗೇಟು ನೀಡುವ ಶಕ್ತಿ ಬರುತ್ತದೆ. ಗಾಂಧೀಜಿ ಇಲ್ಲದ ಭಾರತ ತನ್ನ ಸೇನಾಬಲದಿಂದ ಸದೃಢವಾಗಿರುತ್ತದೆ. ಗಾಂಧೀಜಿ ಇಲ್ಲದ ಭಾರತದ ಜನ ಹೆಚ್ಚು ವಿವೇಕದಿಂದಲೂ, ವಿವೇಚನೆಯಿಂದಲೂ ವರ್ತಿಸುತ್ತಾರೆ ಎನ್ನುವ ಭರವಸೆ ನನಗಿದೆ.. ಅದಕ್ಕಾಗಿ ಗಾಂಧೀಜಿಯನ್ನು ಕೊಂದೆ..”. ಗೋಡ್ಸೆ ಬದುಕಿ ಗಾಂಧೀಜಿಯ ನಂತರದ ಭಾರತದಲ್ಲಿ ರಾಜಕೀಯ ತೋರಿದ ಪ್ರಾಯೋಗಿಕತೆ, ವಿವೇಕ, ವಿವೇಚನೆ ಇತ್ಯಾದಿಗಳನ್ನು ಕಣ್ಣಾರೆ ಕಾಣಬೇಕಿತ್ತು ಎನ್ನುವ ಕಾರಣಕ್ಕೆ ಆತನನ್ನು ನೇಣಿಗೇರಿಸಬಾರದಿತ್ತು.. ಗಾಂಧೀಜಿ ಇನ್ನೊಂದಷ್ಟು ದಿನ ಬದುಕಿ ಉಳಿದಿದ್ದರೂ ಭಾರತದಲ್ಲಿ ಮುಂದೆ ಏನೇನಾದವೋ ಅವೆಲ್ಲಾ ಆಗುತ್ತಿದ್ದವು. ಅದು ಬೇರೆ ವಿಚಾರ.

ಗಾಂಧೀಜಿಯವರನ್ನು ಕೊಂದ ನಂತರ ಸ್ವತಃ ಗೊಡ್ಸೆಗೆ ಬದುಕುವಾಸೆ ಇರಲಿಲ್ಲ. ಜೈಲಿನ ಬಾಗಿಲು ತೆರೆದಿರಿಸಿದ್ದರೂ ಆತ ಓಡಿ ಹೋಗುತ್ತಿರಲಿಲ್ಲ. ಗಾಂಧೀಜಿಯನ್ನು ನೆನೆದು, ಗಾಂಧೀವಾದಿಗಳ ಒತ್ತಾಯಕ್ಕೆ ಮಣಿದು ತನ್ನನ್ನು ಎಲ್ಲಿ ಕ್ಷಮಿಸಿಬಿಡುತ್ತಾರೋ ಎನ್ನುವ ಆತಂಕ ಗೋಡ್ಸೆಯನ್ನು ಕೊನೆಯತನಕವೂ ಕಾಡಿತ್ತಂತೆ. ಗಾಂಧೀಜಿಗೆ ನಾನು ತೋರದ ಕರುಣೆಯನ್ನು ಸರಕಾರದಿಂದ ನಾನು ಬಯಸುವುದಿಲ್ಲ ಅಂತ ಆತ ಸ್ಪಷ್ಟವಾಗಿ ಹೇಳಿದ್ದ. ಗಾಂಧೀಜಿಯವರ ಕೊಲೆಗಾರ ಎನ್ನುವ ಅವಮಾನವನ್ನು ಹೊತ್ತು ಬದುಕುವುದಕ್ಕಿಂತ ಸಾವು ಎಷ್ಟೋ ಮೇಲು ಅಂತ ಆತ ಗಾಂಧೀಜಿ ನೆಲಕ್ಕುರುಳಿದಾಕ್ಷಣ ನಿರ್ಧರಿಸಿದ್ದ. ಅಷ್ಟೇ ಆಸಕ್ತಿಯ ವಿಚಾರವೆಂದರೆ ಕೊನೆಯ ದಿನಗಳಲ್ಲಿ ಗಾಂಧೀಜಿ ಕೂಡಾ ಜೀವನದಲ್ಲಿ ಆಸಕ್ತಿ ಕಳೆದುಕೊಂಡಿದ್ದರು.

ಒಂದು ಕಾಲದಲ್ಲಿ ತಾನು 125 ವರ್ಷ ಬದುಕಬೇಕೆಂದು ಹೇಳಿದ್ದ ಗಾಂಧೀಜಿಗೆ ದೇಶ ವಿಭಜನೆಯಾಗುತ್ತಲೇ ಇನ್ನು ಶಾಶ್ವತವಾಗಿ ಹೊರಟುಬಿಡಬೇಕು ಎಂಬ ಮನೋಭಾವ ಆವರಿಕೊಂಡಿತ್ತು ಅಂತ ಆ ದಿನಗಳಲ್ಲಿ ಅವರ ಹತ್ತಿರವಿದ್ದ ಅನುಯಾಯಿಗಳು ದಾಖಲಿಸಿದ್ದಾರೆ. ಆದರೆ ಖಾಯಿಲೆ ಬಿದ್ದು ಸಾಯುವುದಕ್ಕಿಂತ ಕೊಲೆಯಾಗುವುದು ಮೇಲು ಎನ್ನುವುದಾಗಿತ್ತಂತೆ ಅವರ ನಿರ್ಧಾರ. “ಇಷ್ಟೆಲ್ಲಾ ಆಗಿ ಕಾಯಿಲೆಯಿಂದ ಸತ್ತರೆ ನಾನ್ಯಾವ ಸೀಮೆಯ ಮಹಾತ್ಮ? ಸತ್ತರೆ ಕೊಲೆಗಾರನ ಧಾಳಿಗೆ ಎದೆಯೊಡ್ಡಿ ರಾಮನಾಮ ಪಠಿಸುತ್ತಾ ಸಾಯಬೇಕು” ಅಂತ ತನ್ನ ಮೊಮ್ಮಗಳಾದ ಮನುಬೆನ್‌ಗೆ ಹೇಳಿದ್ದರಂತೆ. ಹಾಗೆಯೇ ಆಯಿತು. ಹೇಗೂ ಸಾಯಲು ತಯಾರಾಗಿದ್ದ ಗಾಂಧೀಜಿಯನ್ನು ಗೋಡ್ಸೆ ಕೊಂದ. ಜೀವಂತವಾಗಿ ಅಪ್ರಸ್ತುತನಾದ ತಾನು ಸತ್ತು ಪ್ರಸ್ತುತನಾಗಬೇಕೆಂದುಕೊಂಡಿರಬೇಕು ಗಾಂಧೀಜಿ – ಏಸುಕ್ರಿಸ್ತನಂತೆ, ಸಾಕ್ರೆಟಿಸನಂತೆ. ಅದನ್ನು ಪೂರೈಸಿಕೊಟ್ಟದ್ದು ಗೋಡ್ಸೆ.

PC : StarsUnfolded

ದೇಶ ವಿಭಜನೆಗೆ ಗಾಂಧೀಜಿ ಕಾರಣ ಎನ್ನುವುದಕ್ಕೋಸ್ಕರ ಕೊಂದೆ ಎನ್ನುತ್ತಾನೆ ಗೋಡ್ಸೆ. ಆದರೆ ಗಾಂಧೀಜಿಯ ಹತ್ಯೆಯ ಪ್ರಯತ್ನ ದೇಶ ವಿಭಜನೆಗೆ ಬಹಳಷ್ಟು ಮುಂದೆಯೇ ನಡೆದಿತ್ತು. ಒಂದಲ್ಲ, ಎರಡಲ್ಲ. ಮೂರು ಬಾರಿ ನಡೆದಿತ್ತು. ಮೊದಲ ಪ್ರಯತ್ನ ನಡೆದದ್ದು 1934ರಲ್ಲಿ. ಆಗ ವಿಭಜನೆ ನಡೆದಿರಲಿಲ್ಲ. ಆ ಮೊದಲ ಪ್ರಯತ್ನವೂ ನಡೆದದ್ದು ಗೋಡ್ಸೆ ಹುಟ್ಟಿದ ಪೂನಾದಲ್ಲಿಯೇ. ಆಗ ಅಲ್ಲಿ ಗಾಂಧೀಜಿ ಅಸ್ಪೃಶ್ಯತೆಯ ವಿರುದ್ಧ ಹೋರಾಡುತ್ತಿದ್ದರು!

ಸಾಮಾನ್ಯವಾಗಿ ರಾಜಕೀಯ ನಾಯಕರ ವಿರುದ್ಧ ಪ್ರತಿಭಟಿಸುವವರು “ಮುರ್ದಾಬಾದ್, “ಡೌನ್, ಡೌನ್ ಇತ್ಯಾದಿ ಘೋಷಣೆ ಕೂಗುತ್ತಾರೆ. ಆದರೆ ಗಾಂಧೀಜಿಯವರ ವಿರುದ್ಧ ಆ ಕಾಲದಲ್ಲಿ ಪ್ರತಿಭಟಿಸುವವರೆಲ್ಲಾ “ಗಾಂಧೀಜಿಯನ್ನು ಕೊಂದುಬಿಡಿ (death to Gandhiji)” ಎನ್ನುವ ಘೋಷಣೆಯನ್ನು ಮತ್ತೆ ಮತ್ತೆ ಕೂಗುತಿದ್ದರು.. ಅಂದಿಗೂ ಇಂದಿಗೂ ಇಂತಹದ್ದೊಂದು ಘೋಷಣೆಯ ದಾಳಿಗೆ ಒಳಗಾದವರಿಲ್ಲ ಎನ್ನಿಸುತ್ತದೆ. ಇದನ್ನು ಕೇಳಿ ಬೇಸತ್ತುಕೊಳ್ಳದ ಗಾಂಧೀಜಿ ಕೊನೆಗೆ ಅದನ್ನು ಒಪ್ಪಿಕೊಂಡು “ಆಗಲಿ ಕೊಂದುಬಿಡಿ” ಎನ್ನುವ ನಿರ್ಧಾರಕ್ಕೆ ಬಂದಿದ್ದರು. ಗಾಂಧೀಜಿಯವರ ಮೇಲೆ ಭಾರಿ ಭಾರಿ ದಾಳಿಯಾಗುತ್ತಿದ್ದರೂ ಅದರ ಬಗ್ಗೆ ಯಾರಿಗೂ ಕಾಳಜಿ ಇರಲಿಲ್ಲ.

ಅಂದಿನ ಪೊಲೀಸರ ಮನಸ್ಥಿತಿ ಗೋಡ್ಸೆಯ ಮನಸ್ಥಿತಿಗಿಂತ ಭಿನ್ನವಾಗಿರಲಿಲ್ಲ. ಅವರಲ್ಲಿ ಹಲವರಿಗೆ ಹಿಂದೂ-ಮುಸ್ಲಿಂ ಸಂಘರ್ಷದ ಸಮಯದಲ್ಲಿ ಗಾಂಧೀಜಿ ಪಠಿಸುತಿದ್ದ ಶಾಂತಿ ಮಂತ್ರ ನಪುಂಸಕವಾದದಂತೆ ಕೇಳಿಸುತಿತ್ತು.. ಅವರೆಲ್ಲಾ ಹೇಳಿಕೇಳಿ ಬ್ರಿಟಿಷರ ಕೈಕೆಳಗೆ ಗಾಂಧೀಜಿಯ ವಿರುದ್ಧ ಕೆಲಸ ಮಾಡುತಿದ್ದವರು. ಸಾಲದ್ದಕ್ಕೆ ಹೆಚ್ಚಿನವರು ಯುದ್ಧಾಕಾಂಕ್ಷಿ ಕ್ಷತ್ರಿಯ ಜಾತಿಗಳಿಗೆ ಸೇರಿದವರು. ಗಾಂಧೀಜಿಯ ಕೊಲೆ ಸಂಚಿನ ಬಗ್ಗೆ ಬಂದ ಎಲ್ಲಾ ಗುಪ್ತ ಮಾಹಿತಿಗಳನ್ನೂ ಪೋಲಿಸರು ಕಡೆಗಣಿಸಿದ್ದರು. ಮುದುಕ ಬದುಕಿದರೆಷ್ಟು-ಸತ್ತರೆಷ್ಟು ಎನ್ನುವಂತಿತ್ತು ಅವರ ಮನೋಭಾವ. ಪೊಲೀಸರನ್ನು ನಿಯಂತ್ರಿಸುತಿದ್ದ ಅಂದಿನ ಕೇಂದ್ರ ಗೃಹಮಂತ್ರಿ ಸರ್ದಾರ್ ವಲ್ಲಬಾಯಿ ಪಟೇಲರು ಗಾಂಧೀಜಿಯವರ ಆಪ್ತ ಶಿಷ್ಯ. ಉಕ್ಕಿನ ಮನುಷ್ಯ.

ಗಾಂಧೀಜಿಯ ಕೊನೆಯ ದಿನಗಳಲ್ಲಿ ನಡೆದ ಘಟನಾವಳಿಗಳನ್ನು ಗಮನಿಸಿದಾಗ ಆಯಕಟ್ಟಿನ ಜಾಗದಲ್ಲಿ ಇದ್ದವರೆಲ್ಲಾ ಸೇರಿ ಗಾಂಧೀಜಿಯನ್ನು ಎತ್ತಿಕೊಂಡು ಗೋಡ್ಸೆಯೆದುರು ನಿಲ್ಲಿಸಿದ್ದರೇನೋ ಎಂಬಂತೆ ಭಾಸವಾಗುತ್ತದೆ. ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ. ಇಂದಿಗೂ ಒಬ್ಬಂಟಿಯಲ್ಲ. ನೆಹರೂ ಗೋಡ್ಸೆಯನ್ನು ಹುಚ್ಚ ಅಂತ ಕರೆದರು. ಗೋಡ್ಸೆಗೆ ಗಾಂಧಿ ಹುಚ್ಚ ಅಂತ ಅನ್ನಿಸಿರಬೇಕು. ನಾವು ನಂಬಿದ್ದೇ ಸತ್ಯ ಅಂತ ಯೋಚಿಸುವುದೇ ಒಂದು ರೀತಿಯ ಹುಚ್ಚು. ನಮ್ಮ ಕಾಲದ ಶ್ರೇಷ್ಠ ರಾಜಕೀಯ ಮನಶಾಸ್ತ್ರಜ್ಞ ಅಶೀಶ್ ನಂದಿ ಹೇಳುವಂತೆ ಯಾವುದೇ ರಾಜಕೀಯ ಹತ್ಯೆ ನಡೆಸುವ ಒಬ್ಬಾತ ತಾನು ಎಂದೂ ಒಬ್ಬಂಟಿಯಾಗಿರುವುದಿಲ್ಲ. ಆತ ಸಮಾಜದ ಒಂದಷ್ಟು ಮಂದಿಯ ಯಾವುದೋ ರೀತಿಯ ಹುಚ್ಚನ್ನು ಪ್ರತಿನಿಧಿಸುತ್ತಾನೆ.

ನೇಣುಗಂಬದಿಂದ ಹೆಣವಾಗಿ ಇಳಿದ ಗೋಡ್ಸೆಯ ಅಂತ್ಯಕ್ರಿಯೆ ಅಂಬಾಲ ಜೈಲಿನ ಆವರಣದ ಹೊರಗೆ ನಡೆಯುತ್ತದೆ. ಅದು ಮುಗಿದ ತತ್‌ಕ್ಷಣ ಸರಕಾರ ಆ ಜಾಗವನ್ನು ನಿಷೇಧಿತ ಪ್ರದೇಶವನ್ನಾಗಿ ಮಾಡಿ ಸ್ಥಳವನ್ನು ಉತ್ತು ಇಡೀ ಪರಿಸರದಲ್ಲಿ ಹಸಿರು ಹುಲ್ಲು ನೆಡಿಸುತ್ತದೆ. ಆ ಜಾಗವನ್ನು ಯಾರೂ ಗುರುತಿಸದಂತೆ ಮಾರ್ಪಡಿಸುತ್ತದೆ. ಯಾರಾದರೂ ಗೋಡ್ಸೆಗೊಂದು ಗೋರಿ ಕಟ್ಟಿ ಅದನ್ನೊಂದು ಪವಿತ್ರ ಸ್ಥಳವನ್ನಾಗಿ ಮಾಡದಿರಲಿ ಎನ್ನುವ ಉದ್ದೇಶದಿಂದ ಸರಕಾರ ಹಾಗೆ ಮಾಡಿತ್ತು. ಗೋಡ್ಸೆ ಕೊಂದ ಗಾಂಧಿ ಮರಣಾನಂತರ ಉತ್ಕಟವಾಗಿ ಬದುಕಿದರು. ಗಾಂಧಿಯನ್ನು ಕೊಂದ ಗೋಡ್ಸೆಯೂ ಹಾಗೆಯೇ. ಅನಾಮಧೇಯನಾಗಿ ಅಳಿದು ಹೋಗುತಿದ್ದ ಗೋಡ್ಸೆ ಎಂಬ ಅಂಚೆ ಇಲಾಖೆ ನೌಕರನ ಮಗ ಚರಿತ್ರೆಯಲ್ಲಿ ಶಾಶ್ವತ ಸ್ಥಾನ ಪಡೆದುಬಿಟ್ಟ. ಗಾಂಧೀಜಿಯವರನ್ನು ಅರಿಯುವ ಪ್ರಯತ್ನದ ಜತೆಜತೆಗೆ ಗೋಡ್ಸೆಯನ್ನು ಅರಿಯುವ ಪ್ರಯತ್ನವೂ ನಡೆಯುತ್ತಲೇ ಇದೆ.

ಗಾಂಧೀಜಿಯವರನ್ನು ಸಾರ್ವಜನಿಕವಾಗಿ ಒಪ್ಪಿ ಅಂತರಂಗದಲ್ಲಿ ದ್ವೇಷಿಸುವರು ಹಲವರಿದ್ದಾರೆ. ಗೋಡ್ಸೆಯನ್ನು ಬಹಿರಂಗವಾಗಿ ಬಹಿಷ್ಕರಿಸಿ ಅಂತರಂಗದ ಅತಿಥಿಯನ್ನಾಗಿ ಮಾಡಿಕೊಂಡವರು ಅದಕ್ಕಿಂತ ಹೆಚ್ಚಿದ್ದಾರೆ. ಭಾರತದಲ್ಲಿ ಎಲ್ಲಾ ರೀತಿಯಲ್ಲೂ ಮುಕ್ತವಾಗಿ ಟೀಕಿಸಬಹುದಾದ ಒಬ್ಬ ರಾಜಕೀಯ ನಾಯಕ ಅಂತ ಇದ್ದರೆ ಅದು ಗಾಂಧೀಜಿ ಮಾತ್ರ. ಆದರೂ ಗಾಂಧೀಜಿಯವರ ಬಗ್ಗೆ ಬಾಲಿಶವಾಗಿ ಮಾತನಾಡುವವರು ಗಾಂಧೀಜಿ ಅವರನ್ನು ದ್ವೇಷಿಸುವರ ದೃಷ್ಟಿಯಲ್ಲೂ ತೀರ ಅಲ್ಪರಂತೆ ಕಾಣಿಸುತ್ತಾರೆ.

ಎ ನಾರಾಯಣ

ಎ ನಾರಾಯಣ
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ರಾಜಕೀಯ ತತ್ವಶಾಸ್ತ್ರ, ಭಾರತದ ರಾಜಕೀಯ, ಕಾನೂನು ಮತ್ತು ಆಡಳಿತ ಹಾಗೂ ಭಾರತದಲ್ಲಿ ಆಡಳಿತದ ಸವಾಲುಗಳು ವಿಷಯವನ್ನು ಬೋಧಿಸುವ ನಾರಾಯಣ ಅವರು ಕನ್ನಡದ ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಲೇಖನಗಳನ್ನು ಬರೆಯುತ್ತಿರುವ ಸ್ವತಂತ್ರ ಚಿಂತಕ.


ಇದನ್ನೂ ಓದಿ: ಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...